Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಕ್ರಮ ಪಡಿತರ ಮಾರಾಟ ಮಾಡಿದರೆ ಕಾನೂನು...

ಅಕ್ರಮ ಪಡಿತರ ಮಾರಾಟ ಮಾಡಿದರೆ ಕಾನೂನು ಕ್ರಮ: ಸಚಿವ ಗೋಪಾಲಯ್ಯ

ವಾರ್ತಾಭಾರತಿವಾರ್ತಾಭಾರತಿ11 May 2020 10:33 PM IST
share
ಅಕ್ರಮ ಪಡಿತರ ಮಾರಾಟ ಮಾಡಿದರೆ ಕಾನೂನು ಕ್ರಮ: ಸಚಿವ ಗೋಪಾಲಯ್ಯ

ಬೆಂಗಳೂರು, ಮೇ 11: ಕೇಂದ್ರ ಹಾಗೂ ಸರಕಾರಗಳು ಪಡಿತರ ವಿತರಿಸುತ್ತಿರುವ ಆಹಾರ ಧಾನ್ಯಗಳನ್ನು ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಹಾರ ಸಚಿವ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.

ಬಡವರಿಗೆ ನೀಡುತ್ತಿರುವ ಪಡಿತರ ವಿತರಣೆಯನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿರುವ ದೂರುಗಳು ಬಂದಿವೆ. ಸರಕಾರ ಉಚಿತವಾಗಿ ವಿತರಿಸುತ್ತಿರುವ ಅಕ್ಕಿಯನ್ನು ಕೆಜಿಗೆ 12 ರಿಂದ 15 ರೂ.ಗಳಿಗೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಡವರಿಗೆ ಕೋಟ್ಯಂತರ ರೂ. ವ್ಯಯ ಮಾಡಿ ಸರಕಾರ ಪಡಿತರ ಒದಗಿಸುತ್ತಿದೆ. ಇದನ್ನು ದುರ್ಬಳಕೆ ಮಾಡಿಕೊಳ್ಳುವುದು ತಪ್ಪು. ದುರ್ಬಳಕೆ ತಡೆಯಲು ಕಾನೂನು ಜಾರಿ ಮಾಡುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದರು.

ಪಡಿತರ ಬೇಡ ಎಂದಾದರೆ ಅದನ್ನು ಅಂಗಡಿಯಲ್ಲೇ ಬಿಟ್ಟುಬಿಡಿ. ಅದರಿಂದ ಬಡವರಿಗೆ ಅನುಕೂಲವಾಗುತ್ತದೆ. ಅದು ಬಿಟ್ಟು ಉಚಿತವಾಗಿ ಪಡಿತರ ಪಡೆದು ಅದನ್ನು ಮಾರಾಟ ಮಾಡುವುದು ಸರಿಯಲ್ಲ. ಇಂತಹವರ ಪಡಿತರ ಚೀಟಿಯನ್ನು ರದ್ದು ಮಾಡುವುದಾಗಿಯೂ ಅವರು ಎಚ್ಚರಿಕೆ ನೀಡಿದರು.

ನೋಟಿಸ್ ಜಾರಿ ಪಡಿತರ ದುರ್ಬಳಕ ಮಾಡಿಕೊಂಡಿರುವ 499 ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ. 33 ಅಂಗಡಿಗಳ ಲೈಸೆನ್ಸ್ ರದ್ದು ಮಾಡಿದ್ದೇವೆ ಎಂದು ಅವರು ಹೇಳಿದರು. ಗುಲ್ಬರ್ಗ, ಮೈಸೂರು, ದಾವಣಗೆರೆಗಳಲ್ಲಿ ಖಾಸಗಿ ಗೋದಾಮುಗಳ ಮೇಲೆ ದಾಳಿ ನಡೆಸಲಾಗಿದೆ. ಸಾವಿರಾರು ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಇದು ಸರಕಾರದ ಅಕ್ಕಿಯೋ ಅಥವಾ ಬೇರೆ ರಾಜ್ಯದ ಅಕ್ಕಿಯೋ ಎಂದು ತನಿಖೆ ನಡೆಸಲು ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಚಿಂತಿಸುವುದಿಲ್ಲ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಅವರು ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X