Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುದ್ಧಾಭ್ಯಾಸದ ವೇಳೆ ಇರಾನ್ ಯುದ್ಧನೌಕೆಗೆ...

ಯುದ್ಧಾಭ್ಯಾಸದ ವೇಳೆ ಇರಾನ್ ಯುದ್ಧನೌಕೆಗೆ ಬಡಿದ ಕ್ಷಿಪಣಿ: 19 ಸೈನಿಕರ ಸಾವು

15 ಮಂದಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ11 May 2020 10:54 PM IST
share
ಯುದ್ಧಾಭ್ಯಾಸದ ವೇಳೆ ಇರಾನ್ ಯುದ್ಧನೌಕೆಗೆ ಬಡಿದ ಕ್ಷಿಪಣಿ: 19 ಸೈನಿಕರ ಸಾವು

ಟೆಹರಾನ್, ಮೇ 11: ಇರಾನ್ ನೌಕಾಪಡೆ ರವಿವಾರ ನಡೆಸಿದ ಯುದ್ಧಾಭ್ಯಾಸದ ವೇಳೆ, ಅದರ ಯುದ್ಧನೌಕೆಯೊಂದಕ್ಕೆ ಅದರದೇ ಕ್ಷಿಪಣಿಯೊಂದು ಬಡಿದು 19 ನೌಕಾ ಪಡೆ ಸೈನಿಕರು ಮೃತಪಟ್ಟಿದ್ದಾರೆ ಎಂದು ಸರಕಾರಿ ಮಾಧ್ಯಮ ಸೋಮವಾರ ವರದಿ ಮಾಡಿದೆ.

ಇರಾನ್‌ನ ದಕ್ಷಿಣ ಕರಾವಳಿಯ ಸಮುದ್ರದಲ್ಲಿರುವ ಬಂದರೆ-ಜಸ್ಕ್ ಸಮೀಪ ಈ ಘಟನೆ ಸಂಭವಿಸಿದೆ ಎಂದು ಸರಕಾರಿ ಟೆಲಿವಿಶನ್ ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

ಯುದ್ಧಾಭ್ಯಾಸದ ವೇಳೆ ನಿರ್ದಿಷ್ಟ ಗುರಿಯ ಮೇಲೆ ದಾಳಿ ನಡೆಸುವ ಕಸರತ್ತಿನ ಅಭ್ಯಾಸ ನಡೆಸಲಾಗುತ್ತಿತ್ತು. ಗುರಿಯನ್ನು ನಿರ್ದಿಷ್ಟ ಸ್ಥಳದಲ್ಲಿ ಇರಿಸಲು ಯುದ್ಧನೌಕೆ ಕೊನಾರಕ್ ಹೋಗಿತ್ತು. ಆದರೆ, ಗುರಿಯನ್ನು ಇಟ್ಟು ಯುದ್ಧನೌಕೆಯು ಸುರಕ್ಷಿತ ಅಂತರಕ್ಕೆ ಮರಳುವ ಮುನ್ನವೇ ಇನ್ನೊಂದು ಯುದ್ಧನೌಕೆಯಿಂದ ಗುರಿಯತ್ತ ಕ್ಷಿಪಣಿ ಹಾರಿಸಲಾಗಿತ್ತು. ಕ್ಷಿಪಣಿಯ ಹೊಡೆತಕ್ಕೆ ಯುದ್ಧನೌಕೆಯು ಧ್ವಂಸಗೊಂಡಿದೆ ಎಂದು ಸರಕಾರಿ ಟಿವಿ ಚಾನೆಲ್ ಹೇಳಿದೆ.

19 ನೌಕಾ ಸಿಬ್ಬಂದಿ ಮೃತಪಟ್ಟಿದ್ದಾರೆ ಹಾಗೂ 15 ಮಂದಿ ಗಾಯಗೊಂಡಿದ್ದಾರೆ ಎಂದು ಸೇನೆಯು ಹೇಳಿಕೆಯೊಂದರಲ್ಲಿ ತಿಳಿಸಿದೆ. ಆದರೆ ಅದು ಹೆಚ್ಚಿನ ವಿವರಣೆಯನ್ನು ನೀಡಿಲ್ಲ.

ತಾಂತ್ರಿಕ ತನಿಖೆಗಾಗಿ ಯುದ್ಧನೌಕೆಯ ಅವಶೇಷಗಳನ್ನು ತೀರಕ್ಕೆ ಎಳೆಯಲಾಗಿದೆ ಎಂದು ಸೇನೆ ತಿಳಿಸಿದೆ. ಹೆಚ್ಚಿನ ಮಾಹಿತಿಗಳನ್ನು ಬಿಡುಗಡೆ ಮಾಡುವವರೆಗೆ ಊಹಾಪೋಹಗಳಲ್ಲಿ ತೊಡಗಬಾರದು ಎಂಬುದಾಗಿ ಜನರಿಗೆ ಅದು ಮನವಿ ಮಾಡಿದೆ.

ಪರ್ಸಿಯನ್ ಕೊಲ್ಲಿ ಜಲಪ್ರದೇಶದಲ್ಲಿ ನಡೆದ ಸಮರಾಭ್ಯಾಸದ ವೇಳೆ, ಜಮಾರನ್ ಎಂಬ ಇನ್ನೊಂದು ಯುದ್ಧ ನೌಕೆಯಿಂದ ಹಾರಿದ ಕ್ಷಿಪಣಿಯು ಕೊನಾರಕ್‌ಗೆ ತಪ್ಪಾಗಿ ಬಡಿಯಿತು ಎಂದು ತಸ್ನಿಮ್ ಸುದ್ದಿ ಸಂಸ್ಥೆಯು ಟ್ವೀಟ್‌ನಲ್ಲಿ ಹೇಳಿದೆ.

ಗಾಯಗೊಂಡಿರುವ 15 ಮಂದಿಯನ್ನು ಸಿಸ್ತಾನ್ ಮತ್ತು ಬಲೂಚಿಸ್ತಾನ್‌ನ ಆಸ್ಪತ್ರೆಗಳಿಗೆ ಸೇರಿಸಲಾಗಿದೆ ಎಂದು ಆಸ್ಪತ್ರೆಯೊಂದರ ಅಧಿಕಾರಿಯೊಬ್ಬರು ತಿಳಿಸಿದರು. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಇತ್ತೀಚಿನ ದಿನಗಳಲ್ಲಿ ತಾರಕಕ್ಕೇರಿರುವ ನುಡುವೆಯೇ ಈ ಘಟನೆ ಸಂಭವಿಸಿದೆ.

ತಪ್ಪಾಗಿ ಯುಕ್ರೇನ್ ಪ್ರಯಾಣಿಕ ವಿಮಾನವನ್ನು ಉರುಳಿಸಿದ್ದ ಇರಾನ್

ಜನವರಿಯಲ್ಲಿ ಇರಾನ್ ರಾಜಧಾನಿ ಟೆಹರಾನ್‌ನಿಂದ ಯುಕ್ರೇನ್ ರಾಜಧಾನಿ ಕೀವ್‌ಗೆ ಹೊರಟಿದ್ದ ಯುಕ್ರೇನ್‌ನ ಪ್ರಯಾಣಿಕ ವಿಮಾನವೊಂದನ್ನು ಇರಾನ್ ಸೇನೆಯು ತಪ್ಪಾಗಿ ಹೊಡೆದುರುಳಿಸಿತ್ತು. ಆ ಘಟನೆಯಲ್ಲಿ ವಿಮಾನದಲ್ಲಿದ್ದ ಎಲ್ಲ 176 ಮಂದಿ ಮೃತಪಟ್ಟಿದ್ದಾರೆ.

ಆ ಸಂದರ್ಭದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತಾರಕಕ್ಕೇರಿತ್ತು. ಇರಾಕ್‌ನಲ್ಲಿರುವ ಅಮೆರಿಕದ ಸೈನಿಕರ ನೆಲೆಗಳ ಮೇಲೆ ಹಲವು ಸುತ್ತು ಕ್ಷಿಪಣಿ ದಾಳಿಗಳನ್ನು ಇರಾನ್ ನಡೆಸಿತ್ತು.

ಈ ಹಿನ್ನೆಲೆಯಲ್ಲಿ, ಟೆಹರಾನ್‌ನಿಂದ ಹೊರಟ ಪ್ರಯಾಣಿಕ ವಿಮಾನ ನಗರದ ಹೊರವಲಯದಲ್ಲಿದ್ದಾಗ ಶತ್ರು ವಿಮಾನವೆಂದು ಭಾವಿಸಿದ ಇರಾನ್ ಸೇನೆಯು ವಿಮಾನವನ್ನು ಹೊಡೆದುರುಳಿಸಿತ್ತು. ಮೊದಲು ತನಗೆ ಏನೂ ಗೊತ್ತಿಲ್ಲವೆಂಬಂತೆ ಇರಾನ್ ನಟಿಸಿದರೂ, ಅಂತರ್‌ರಾಷ್ಟ್ರೀಯ ಒತ್ತಡ ಹೆಚ್ಚಾದಾಗ ತನ್ನ ತಪ್ಪನ್ನು ಒಪ್ಪಿಕೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X