Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಸ್ಸಿಪಿ-ಟಿಎಸ್ಪಿ: ಮೇ 20ರೊಳಗೆ ಕ್ರಿಯಾ...

ಎಸ್ಸಿಪಿ-ಟಿಎಸ್ಪಿ: ಮೇ 20ರೊಳಗೆ ಕ್ರಿಯಾ ಯೋಜನೆ ಸಲ್ಲಿಸಲು ಡಿಸಿಎಂ ಕಾರಜೋಳ ಸೂಚನೆ

ವಾರ್ತಾಭಾರತಿವಾರ್ತಾಭಾರತಿ12 May 2020 4:47 PM IST
share
ಎಸ್ಸಿಪಿ-ಟಿಎಸ್ಪಿ: ಮೇ 20ರೊಳಗೆ ಕ್ರಿಯಾ ಯೋಜನೆ ಸಲ್ಲಿಸಲು ಡಿಸಿಎಂ ಕಾರಜೋಳ ಸೂಚನೆ

ಬೆಂಗಳೂರು, ಮೇ 12: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿ ದೃಷ್ಟಿಯಿಂದ 2020-21ನೆ ಸಾಲಿನ ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಎಲ್ಲ ಇಲಾಖೆಗಳು ಕ್ರಿಯಾ ಯೋಜನೆ ಸಿದ್ಧಪಡಿಸಿ ಮೇ 20ರೊಳಗೆ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿ ಪ್ರಸಕ್ತ ಸಾಲಿನ ಎಸ್ಸಿಪಿ-ಟಿಎಸ್ಪಿ ಕ್ರಿಯಾ ಯೋಜನೆ ಸಂಬಂಧ ನೋಡಲ್ ಏಜೆನ್ಸಿ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ, ಗಿರಿಜನ ಉಪಯೋಜನೆ ಸಂಬಂಧ ರಾಜ್ಯ ಪರಿಷತ್ ಸಭೆಯಲ್ಲಿ ಈ ಕ್ರಿಯಾ ಯೋಜನೆ ಮಂಡಿಸಿ ಅನುಮೋದನೆ ಪಡೆಯಬೇಕಿದೆ.

ಶಿಕ್ಷಣ, ಸ್ವಯಂ ಉದ್ಯೋಗ, ಕೌಶಲ್ಯಾಭಿವೃದ್ಧಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಶೋಷಿತ ವರ್ಗದ ಜನರಿಗೆ ಆಸ್ತಿ ಸೃಜನೆ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಬೇಕು. ಆರೋಗ್ಯ ಇಲಾಖೆ ಆಯುಷ್ಮಾನ್ ಭಾರತ್ ಯೋಜನೆಯಡಿ 200 ಕೋಟಿ ರೂ.ಖರ್ಚು ಮಾಡಲಾಗುತ್ತಿದೆ. ಆದರೆ, ಈ ಯೋಜನೆ ಎಸ್ಸಿ-ಎಸ್ಟಿ ವರ್ಗದ ಜನರಿಗೆ ತಲುಪುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಿ, ಆ ವರ್ಗದ ಜನರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಅವರು ಸೂಚಿಸಿದರು.

ಈ ಯೋಜನೆಯಡಿ ನಿರ್ಮಿಸುವ ಆಸ್ಪತ್ರೆ ಕಟ್ಟಡಗಳು ಎಸ್ಸಿ-ಎಸ್ಟಿ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ನಿರ್ಮಿಸಬೇಕು. ಮೀಸಲಿಟ್ಟ ಅನುದಾನುವನ್ನು ಪರಿಶಿಷ್ಟರ ಕಲ್ಯಾಣಕ್ಕಾಗಿ ಮಾತ್ರವೇ ಬಳಕೆ ಮಾಡಬೇಕು. ಯಾವುದೇ ಕಾರಣಕ್ಕೂ ಅನ್ಯ ಉದ್ದೇಶಕ್ಕೆ ಬಳಕೆ ಮಾಡಬಾರದು ಎಂದು ಅವರು ನಿರ್ದೇಶನ ನೀಡಿದರು.

ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಬೇರೆ ಊರುಗಳಿಗೆ ಉದ್ಯೋಗಕ್ಕಾಗಿ ಹೋದವರು ಹೆಚ್ಚಾಗಿ ಅವರ ಗ್ರಾಮಗಳಲ್ಲಿದ್ದು, ಅವರೆಲ್ಲರಿಗೂ ಉದ್ಯೋಗ ಖಾತರಿ ಯೋಜನೆಯಡಿ ಎಸ್ಸಿ-ಎಸ್ಟಿ ಸಮುದಾಯದ ಕೂಲಿ ಕಾರ್ಮಿಕರಿಗೆ ಕಡ್ಡಾಯವಾಗಿ ಉದ್ಯೋಗ ಕಾರ್ಡ್ ನೀಡಬೇಕು. ಕೃಷಿ ಇಲಾಖೆ ಈ ಸಮುದಾಯದ ರೈತರ ಮಾಹಿತಿ ಸಂಗ್ರಹಿಸಿ, ಸೌಲಭ್ಯಗಳನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು ಎಂದು ಹೇಳಿದರು.

ಗಂಗಾ ಕಲ್ಯಾಣ ಯೋಜನೆ ಉತ್ತಮ ಕಾರ್ಯಕ್ರಮ. ಕೊಳವೆ ಬಾವಿಗಳಿಗೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಈ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಿಸಬೇಕು. ವಸತಿ ಶಾಲೆಗಳಲ್ಲಿ ಮಳೆ ನೀರು ಕೊಯ್ಲು ಯೋಜನೆ ಅನುಷ್ಠಾನಗೊಳಿಸಬೇಕು. ಎಲ್ಲ ಇಲಾಖೆಗಳು ಎಸ್ಸಿ-ಎಸ್ಟಿ ವರ್ಗದ ಜನಸಂಖ್ಯೆಯ ಮಾಹಿತಿ ಸಂಗ್ರಹಿಸಬೇಕು. ಜತೆಗೆ ಯೋಜನೆ ಫಲಾನುಭವಿಗಳ ಮಾಹಿತಿಯನ್ನು ಆ್ಯಪ್‍ಗೆ ಅಪ್‍ಲೋಡ್ ಮಾಡಬೇಕು ಎಂದರು.

ಬಡತನದಲ್ಲಿರುವ ಎಸ್ಸಿ-ಎಸ್ಟಿ ವರ್ಗದವರಿಗೆ ಅನುಕೂಲ ಆಗುವಂತಹ ಮತ್ತು ದೀರ್ಘಾವದಿ ಪ್ರಯೋಜನ ಆಗುವಂತಹ ಯೋಜನೆಗಳನ್ನು ರೂಪಿಸಬೇಕು. ಅಲ್ಲದೆ, ರೂಪಿಸಿದ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಆ ಮೂಲಕ ಸಮುದಾಯದ ಏಳ್ಗೆಗಾಗಿ ಶ್ರಮಿಸಬೇಕು ಎಂದು ಕಾರಜೋಳ ತಿಳಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿ.ಕುಮಾರ್ ನಾಯಕ್, ಎಸ್ಸಿಪಿ-ಟಿಎಸ್ಪಿ ಯೋಜನೆ ಸಲಹೆಗಾರ ಇ.ವೆಂಕಟಯ್ಯ ಸೇರಿದಂತೆ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X