Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರ್ಯಕ್ರಮದಲ್ಲಿ ಸತತ ಸೀನಿದ ಸಚಿವ:...

ಕಾರ್ಯಕ್ರಮದಲ್ಲಿ ಸತತ ಸೀನಿದ ಸಚಿವ: ಕೊರೋನ ಪರೀಕ್ಷೆ ನಡೆಸಿ ಎಂದ ಟ್ವಿಟರಿಗರು !

ವಾರ್ತಾಭಾರತಿವಾರ್ತಾಭಾರತಿ12 May 2020 5:09 PM IST
share
ಕಾರ್ಯಕ್ರಮದಲ್ಲಿ ಸತತ ಸೀನಿದ ಸಚಿವ: ಕೊರೋನ ಪರೀಕ್ಷೆ ನಡೆಸಿ ಎಂದ ಟ್ವಿಟರಿಗರು !

ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ ಕಾರ್ಯಾಧ್ಯಕ್ಷ, ರಾಜ್ಯ ಐಟಿ ಸಚಿವ ಹಾಗೂ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರ ಕೆ ಟಿ ರಾಮ ರಾವ್ ಸೋಮವಾರ ರಾಜನ್ನ-ಸಿರಿಸಿಲ್ಲಾ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಸತತ ಸೀನುತ್ತಿದ್ದುದು ಹಲವರ ಗಮನ ಸೆಳೆದಿದೆ. ತಮ್ಮ ಕೈಯಲ್ಲಿದ್ದ ಕರವಸ್ತ್ರ ಅಡ್ಡ ಹಿಡಿದು ಅವರು ಆಗಾಗ ಸೀನುತ್ತಿರುವ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಜಿಲ್ಲೆಯಲ್ಲಿ ಸರಣಿ ಕಾರ್ಯಕ್ರಮಗಳು ಹಾಗೂ ಅಧಿಕಾರಿಗಳ ಜತೆ ಸಂವಹನ ನಡೆಸಿದ್ದ ಸಚಿವರು ಎಂದಿನಂತಿರಲಿಲ್ಲ. ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳೂ ಹೆಚ್ಚುತ್ತಿರುವುದರಿಂದ ಸಚಿವರ ಆರೋಗ್ಯದ ಕುರಿತೂ ಹಲವು ಜನರು ವಿಚಾರಿಸಲಾರಂಭಿಸಿದ್ದರು.

ನಿಯಮದಂತೆ ಸಚಿವರು ಹತ್ತಿರದ ಆಸ್ಪತ್ರೆಗೆ ಹೋಗಿ ಕೋವಿಡ್-19 ಪರೀಕ್ಷೆಗೊಳಗಾಗಬೇಕೆಂಬ ಸಲಹೆಯನ್ನೂ ಹಲವರು ನೀಡಿದ್ದಾರೆ. ತಮ್ಮ ಬಗೆಗಿನ ಟ್ವೀಟ್‍ಗಳನ್ನು ಗಮನಿಸಿದ ಕೆ ಟಿ ರಾಮರಾವ್ ಟ್ವೀಟ್ ಮಾಡಿ “ನಿಮ್ಮ ಕಾಳಜಿಗೆ ಧನ್ಯವಾದಗಳು. ನಾನು ಈಗ ಚೆನ್ನಾಗಿದ್ದೇನೆ. ಸಿರಿಸಿಲ್ಲಾಗೆ ಹೋಗುವಾಗ ಅಲರ್ಜಿಕ್ ಶೀತ (ಹಲವು ವರ್ಷಗಳಿಂದ ಈ ಸಮಸ್ಯೆ ಇದೆ) ಬಳಲಿದ್ದೇನೆ. ನನ್ನ ಭೇಟಿ ರದ್ದುಗೊಳಿಸಿದರೆ ಹಲವರಿಗೆ ಅನಾನುಕೂಲವಾಗಬಹುದೆಂದು ಕಾರ್ಯಕ್ರಮ ಮುಂದುವರಿಸಿದೆ. ನಾನು ತಿಳಿಯದೆಯೇ ಯಾರಿಗಾದರೂ ತೊಂದರೆ ಉಂಟು ಮಾಡಿದ್ದರೆ ಕ್ಷಮೆಯಿರಲಿ” ಎಂದು ಉತ್ತರಿಸಿದ್ದಾರೆ.

ತಮ್ಮ ತವರು ಕ್ಷೇತ್ರದಲ್ಲಿರುವ ಸಿರಿಸಿಲ್ಲಾದ ತಂಗಲ್ಲಪಳ್ಳಿ ಬ್ಲಾಕ್‍ನಲ್ಲಿ ಸಚಿವರು ಸೋಮವಾರ ಸೆಂಟ್ರಲ್ ಲೈಟಿಂಗ್ ವ್ಯವಸ್ಥೆ, ಆಡಳಿತ ಕಚೇರಿ ಕಟ್ಟಡ, ಕ್ಯಾಂಟೀನ್, ಹೊಲಿಗೆ ತರಬೇತಿ ಕೇಂದ್ರ ಹಾಗೂ ಟೆಕ್ಸ್‍ಟೈಲ್ ಪಾರ್ಕ್ ಉದ್ಘಾಟಿಸಿದ್ದಾರೆ.

When attended an inauguration programme Telangana Minister KTR was seen sneezing continuously in that programme
The programme held at Rajanna Sirichilla dist Of Telangana @NewsX @dhanyarajendran pic.twitter.com/otCqkpiyXf

— Lokesh journo (@Lokeshpaila) May 12, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X