Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಮತ್ತೆ 88 ಮಂದಿಯ ಸ್ಯಾಂಪಲ್...

ಉಡುಪಿ: ಮತ್ತೆ 88 ಮಂದಿಯ ಸ್ಯಾಂಪಲ್ ನೆಗೆಟಿವ್

ವಾರ್ತಾಭಾರತಿವಾರ್ತಾಭಾರತಿ12 May 2020 8:30 PM IST
share

ಉಡುಪಿ, ಮೇ 12: ನೋವೆಲ್ ಕೊರೋನ ವೈರಸ್ (ಕೋವಿಡ್- 19) ಸೋಂಕಿನ ಪರೀಕ್ಷೆಗಾಗಿ ಕಳುಹಿಸಿದ ಶಂಕಿತರ ಗಂಟಲು ದ್ರವದ ಮಾದರಿಗಳಲ್ಲಿ ಮಂಗಳವಾರ ಮತ್ತೆ 88 ಮಂದಿಯ ವರದಿ ಬಂದಿದ್ದು, ಎಲ್ಲವೂ ನೆಗೆಟಿವ್ ಆಗಿವೆ. ಬಾಕಿ ಉಳಿದಿರುವ ಮಾದರಿಗಳೊಂದಿಗೆ ಇಂದು ಕಳುಹಿಸಿದ 24 ಸ್ಯಾಂಪಲ್‌ಗಳು ಸೇರಿದಂತೆ ಒಟ್ಟು 87 ಸ್ಯಾಂಪಲ್‌ಗಳ ವರದಿ ಬರಲು ಬಾಕಿ ಇವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ರೋಗದ ಗುಣಲಕ್ಷಣವಿರುವ ಇನ್ನೂ 24 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇವುಗಳಲ್ಲಿ ಒಬ್ಬರು ಕೊರೋನ ಶಂಕಿತರು, ಒಬ್ಬರು ಸಂಪರ್ಕಿತರು, ಐವರು ತೀವ್ರ ಉಸಿರಾಟ ತೊಂದರೆಯವರು, ಎಂಟು ಮಂದಿ ಶೀತಜ್ವರದಿಂದ ಬಳಲುವವರು ಹಾಗೂ 9 ಮಂದಿ ಕೊರೋನ ಹಾಟ್‌ಸ್ಪಾಟ್‌ನಿಂದ ಬಂದವರ ಸ್ಯಾಂಪಲ್‌ಗಳು ಸೇರಿವೆ ಎಂದು ಅವರು ತಿಳಿಸಿದರು.

ಇಂದು ರೋಗದ ಗುಣಲಕ್ಷಣವಿರುವ ಇನ್ನೂ 24 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇವುಗಳಲ್ಲಿ ಒಬ್ಬರು ಕೊರೋನ ಶಂಕಿತರು, ಒಬ್ಬರು ಸಂಪರ್ಕಿತರು, ಐವರು ತೀವ್ರ ಉಸಿರಾಟ ತೊಂದರೆಯವರು, ಎಂಟು ಮಂದಿ ಶೀತಜ್ವರದಿಂದ ಬಳಲುವವರು ಹಾಗೂ 9 ಮಂದಿ ಕೊರೋನ ಹಾಟ್‌ಸ್ಪಾಟ್‌ನಿಂದ ಬಂದವರ ಸ್ಯಾಂಪಲ್‌ಗಳು ಸೇರಿವೆ ಎಂದು ಅವರು ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಸಂಜೆಯವರೆಗೆ ಒಟ್ಟು 1692 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಪಡೆಯಲಾಗಿದೆ. ಇವುಗಳಲ್ಲಿ 1605ರ ವರದಿ ಬಂದಿದ್ದು, 1602 ನೆಗೆಟಿವ್ ಆಗಿವೆ. ಜಿಲ್ಲೆಯಲ್ಲಿ ಈವರೆಗೆ ಮೂರು ವರದಿಗಳು ಮಾತ್ರ ಪಾಸಿಟಿವ್ ಆಗಿ ಬಂದಿವೆ.

ಶಂಕಿತ ನೋವೆಲ್ ಕೊರೋನ ಸೋಂಕಿನ ಪರೀಕ್ಷೆಗಾಗಿ ಇಂದು 15 ಮಂದಿ ಆಸ್ಪತ್ರೆಗಳ ಐಸೋಲೇಶನ್ ವಾರ್ಡಿಗೆ ದಾಖಲಾಗಿ ದ್ದಾರೆ. ಇವರಲ್ಲಿ ಒಬ್ಬರು ಕೋವಿಡ್ ಶಂಕಿತರು, ನಾಲ್ವರು ತೀವ್ರತರದ ಉಸಿರಾಟ ತೊಂದರೆಗೆ ಹಾಗೂ 10 ಮಂದಿ ಶೀತಜ್ವರ ಬಾಧೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾಖಲಾದವರಲ್ಲಿ 8 ಮಂದಿ ಪುರುಷರು, 7 ಮಂದಿ ಮಹಿಳೆಯರು ಸೇರಿದ್ದಾರೆ. ವಿವಿಧ ಆಸ್ಪತ್ರೆಗಳ ಐಸೋಲೇಶನ್ ವಾರ್ಡಿನಿಂದ ಇಂದು 9 ಮಂದಿ ಬಿಡುಗಡೆಗೊಂಡಿದ್ದು, 73 ಮಂದಿ ಇನ್ನೂ ವೈದ್ಯರ ನಿಗಾದಲ್ಲಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು.

ಜಿಲ್ಲೆಯಲ್ಲಿ ಕೊರೋನ ಸೋಂಕಿನ ಗುಣಲಕ್ಷಣದ ವಿವಿಧ ಹಿನ್ನೆಲೆಯೊಂದಿಗೆ ಮಂಗಳವಾರ 33 ಮಂದಿ ಹೊಸದಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 4338 ಮಂದಿಯನ್ನು ಕೊರೋನದ ತಪಾಸಣೆಗಾಗಿ ನೋಂದಣಿ ಮಾಡಿಕೊಂಡಂತಾಗಿದೆ. ಇವರಲ್ಲಿ 2869 (ಇಂದು 27) ಮಂದಿ 28 ದಿನಗಳ ನಿಗಾವನ್ನೂ, 3593 (41) ಮಂದಿ 14 ದಿನಗಳ ನಿಗಾವನ್ನು ಪೂರ್ಣಗೊಳಿಸಿದ್ದಾರೆ.

ಜಿಲ್ಲೆಯಲ್ಲಿ ಈಗಲೂ 656 ಮಂದಿ ಹೋಮ್ ಕ್ವಾರಂಟೈನ್ ಹಾಗೂ 16 ಮಂದಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಡಾ. ಸುಧೀರ್ ‌ಚಂದ್ರ ಸೂಡ ವಿವರಿಸಿದರು.

ಪಡುಬಿದ್ರಿ ವ್ಯಾಪಾರಿ ವರದಿ ನೆಗೆಟಿವ್

ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರು ಹಾಗೂ ಅಲ್ಲಿ ಪಾಸಿಟಿವ್ ಬಂದವರ ಸಂಪರ್ಕಕ್ಕೆ ಬಂದವರಲ್ಲಿ ಉಡುಪಿ ಜಿಲ್ಲೆಗೆ ಸೇರಿದ 17 ಮಂದಿಯ ಗಂಟಲುದ್ರವದ ಮಾದರಿಯ ವರದಿ ಇಂದು ಸಹ ಬಂದಿಲ್ಲ. ಅವರೆಲ್ಲರೂ ಈಗಲೂ ಆಸ್ಪತ್ರೆ ಕ್ವಾರಂಟೈನ್‌ನಲ್ಲಿಯೇ ಇದ್ದಾರೆ ಎಂದು ಡಾ. ಸೂಡ ತಿಳಿಸಿದರು.

ಇದರಿಂದ ಕಳೆದ ತಿಂಗಳು ತಮಿಳುನಾಡಿನಿಂದ ಕಾರ್ಕಳಕ್ಕೆ ಸಿಮೆಂಟ್ ತಂದು ಊರಿಗೆ ಮರಳಿದ ಬಳಿಕ ಕೊರೋನ ಸೋಂಕಿಗೆ ಪಾಸಿಟಿವ್ ಆಗಿದ್ದ ಲಾರಿ ಚಾಲಕನ ಸಂಪರ್ಕಕ್ಕೆ ಬಂದ ಕಾರ್ಕಳ ಅಂಗಡಿಯ ಮಾಲಕ ಸೇರಿದಂತೆ ಐವರ ವರದಿ ಸಹ ಇಂದು ಬಂದಿಲ್ಲ. ಆದರೆ ಉತ್ತರ ಕರ್ನಾಟಕಕ್ಕೆ ಹೋಗಿ ಬಂದ ಜ್ವರಕ್ಕೆ ತುತ್ತಾದ ಪಡುಬಿದ್ರಿ ವ್ಯಾಪಾರಿಯೊಬ್ಬರ ವರದಿ ನೆಗೆಟಿವ್ ಆಗಿ ಬಂದಿದೆ ಎಂದು ಡಿಎಚ್‌ಓ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X