Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಪಾಸಿಟಿವ್ ಆದ ಇನ್‌ಸ್ಪೆಕ್ಟರ್‌ಗೆ...

ಕೋವಿಡ್ ಪಾಸಿಟಿವ್ ಆದ ಇನ್‌ಸ್ಪೆಕ್ಟರ್‌ಗೆ ಇಲಾಖೆಯಿಂದಲೇ ಕಿರುಕುಳ: ಸಿಎಂಗೆ ಪುತ್ರನ ದೂರು

ಮುಸಲ್ಮಾನರಾಗಿದ್ದೇ ಕಾರಣ: ಆರೋಪ

ವಾರ್ತಾಭಾರತಿವಾರ್ತಾಭಾರತಿ13 May 2020 9:44 AM IST
share
ಕೋವಿಡ್ ಪಾಸಿಟಿವ್ ಆದ ಇನ್‌ಸ್ಪೆಕ್ಟರ್‌ಗೆ ಇಲಾಖೆಯಿಂದಲೇ ಕಿರುಕುಳ: ಸಿಎಂಗೆ ಪುತ್ರನ ದೂರು

ಮುಂಬೈ, ಮೇ 13: ಕಳೆದ ವಾರ ಔರಂಗಾಬಾದ್‌ನಲ್ಲಿ 56 ವರ್ಷದ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಕೊರೋನ ವೈರಸ್ ಸೋಂಕು ತಗುಲಿತ್ತು. ಕೆಲವೇ ದಿನಗಳಲ್ಲಿ ಅವರ ಮನೆಯ ಐದು ಮಂದಿಯೂ ಸೋಂಕಿತರಾದರು. ಆದರೆ ಕೊರೋನ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಸೋಂಕಿತರಾದ ಇಂಥ ಕ್ಲಿಷ್ಟ ಪರಿಸ್ಥಿತಿಯಲ್ಲಿ ಅವರಿಗೆ ಸಾಂಸ್ಥಿಕ ನೆರವು ಸಿಗುವ ಬದಲು, ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಾನು ಹಾಗೂ ಕುಟುಂಬ ತಾರತಮ್ಯಕ್ಕೆ ಒಳಗಾಗಿದ್ದೇವೆ. ಹಿರಿಯ ಅಧಿಕಾರಿಗಳು ಅನುಚಿತವಾಗಿ ನಡೆಸಿಕೊಳ್ಳುತ್ತಿದ್ದಾರೆ ಎನ್ನುವುದು ಅವರ ಆರೋಪ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಯವರಿಗೆ ಈ ಅಧಿಕಾರಿಯ ಮಗ, ಯುವ ಐಎಎಸ್ ಆಕಾಂಕ್ಷಿ ಈ ಸಂಬಂಧ ಪತ್ರ ಬರೆದು, ಔರಂಗಾಬಾದ್ ಪೊಲೀಸ್ ಇಲಾಖೆ ತನ್ನ ಹೊಣೆಯಿಂದ ನುಣುಚಿಕೊಳ್ಳುತ್ತಿದೆ ಹಾಗೂ ತಂದೆಗೆ ಕೊರೋನ ಸೋಂಕು ತಗುಲಿದ ಬಳಿಕ ಅವರನ್ನು ಮತ್ತು ನಮ್ಮ ಕುಟುಂಬವನ್ನು ಮುಸ್ಲಿಮರು ಎಂಬ ಕಾರಣಕ್ಕೆ ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ ಎಂದು ಆಪಾದಿಸಿದ್ದಾರೆ.

ರಾಜ್ಯದಲ್ಲಿ 50 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಅಧಿಕಾರಿಗಳನ್ನು ಕ್ಷೇತ್ರಕ್ಕೆ ಕಳುಹಿಸದಿರಲು ಸರ್ಕಾರ ನಿರ್ಧರಿಸಿತ್ತು. ಆದರೆ 56 ವರ್ಷದ ತಂದೆಯನ್ನು ಬಲವಂತವಾಗಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಹೈಪರ್ ಟೆನ್ಷನ್ ಹಾಗೂ ಬೊಜ್ಜಿನ ಹೊರತಾಗಿಯೂ ಪ್ರತಿದಿನ ಮುಂಜಾನೆ ಗಸ್ತು ಕಾರ್ಯಕ್ಕೆ ಕಳುಹಿಸಲಾಗುತ್ತಿತ್ತು ಎಂದು ಮೇ 8ರಂದು ಬರೆದ ಪತ್ರದಲ್ಲಿ ವಿವರಿಸಿದ್ದಾರೆ. ನನ್ನ ತಪಾಸಣೆ ವರದಿ ತಂದೆಯ ಆರೋಗ್ಯ ತಪಾಸಣಾ ವರದಿಗಿಂತ ಮೊದಲು ಬಂದ ಹಿನ್ನೆಲೆಯಲ್ಲಿ ಇಲಾಖೆ, ಕುಟುಂಬಕ್ಕೆ ಸೋಂಕು ಹರಡಿದ ಆರೋಪವನ್ನು ನನ್ನ ಮೇಲೆ ಹೊರಿಸುವ ಯತ್ನ ಮಾಡಿತು ಎಂದು ನಾಗರಿಕ ಸೇವಾ ಪರೀಕ್ಷೆಗೆ ಸಜ್ಜಾಗುತ್ತಿದ್ದ ಅವರು ದೂರಿದರು. ಅವರು ಮಾರ್ಚ್ 20ರಂದು ದಿಲ್ಲಿಯಿಂದ ವಾಪಸ್ಸಾಗಿದ್ದರು.

ಸಿಎಂಗೆ ಬರೆದ ಪತ್ರದಲ್ಲಿ ಕಾಲ್ ರೆಕಾರ್ಡಿಂಗ್ ತುಣುಕನ್ನೂ ಲಗತ್ತಿಸಲಾಗಿದೆ. ಮಗ ಅಸ್ಥಸ್ಥರಾಗುವುದಕ್ಕೆ ಒಂದೂವರೆ ತಿಂಗಳು ಮೊದಲು  ದಿಲ್ಲಿಯಿಂದ  ವಾಪಸ್ಸಾಗಿದ್ದಾನೆ ಎಂದು ಇನ್‌ಸ್ಪೆಕ್ಟರ್ ಡಿಸಿಪಿ ಮೀನಾ ಮಕ್ವಾನಾ ಅವರಿಗೆ ಹೇಳುತ್ತಿರುವುದು ತುಣುಕಿನಲ್ಲಿ ಕೇಳಿಸುತ್ತದೆ. ಆದಾಗ್ಯೂ ಮಗನೇ ವೈರಸ್‌ನ ಮೂಲ ಎಂದು ಪೊಲೀಸ್ ಇಲಾಖೆ ಮೇ 7ರಂದು ಪತ್ರಿಕಾ ಪ್ರಕಟನೆ ನೀಡಿತ್ತು. ಕರ್ತವ್ಯದಲ್ಲಿದ್ದಾಗ ತಂದೆಗೆ ಕೊರೋನಾ ಹರಡಿದ ಹಿನ್ನೆಲೆಯಲ್ಲಿ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಇಲಾಖೆ ಯತ್ನಿಸುತ್ತಿದೆ ಎಂದು ಅವರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X