Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದುಬೈಯಿಂದ ಆಗಮಿಸಿದ 52 ಮಂದಿ ಉಡುಪಿಯ...

ದುಬೈಯಿಂದ ಆಗಮಿಸಿದ 52 ಮಂದಿ ಉಡುಪಿಯ ಅನಿವಾಸಿ ಕನ್ನಡಿಗರು

ಅವ್ಯವಸ್ಥೆ, ನಿರ್ಲಕ್ಷ್ಯಕ್ಕೆ ವ್ಯಾಪಕ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ13 May 2020 1:49 PM IST
share
ದುಬೈಯಿಂದ ಆಗಮಿಸಿದ 52 ಮಂದಿ ಉಡುಪಿಯ ಅನಿವಾಸಿ ಕನ್ನಡಿಗರು

ಉಡುಪಿ, ಮೇ 13: ದುಬೈಯಿಂದ ಮೊದಲ ವಿಮಾನದಲ್ಲಿ ಮಂಗಳವಾರ ರಾತ್ರಿ ಮಂಗಳೂರು ತಲುಪಿದ 176 ಅನಿವಾಸಿ ಕನ್ನಡಿಗರ ಪೈಕಿ ಉಡುಪಿ ಜಿಲ್ಲೆಗೆ ಸೇರಿರುವ 52 ಮಂದಿ ಇಂದು ಬೆಳಗಿನ ಜಾವ ಉಡುಪಿ ತಲುಪಿದ್ದರು. ಇವರೆಲ್ಲರನ್ನು ಹೊಟೇಲ್ ಹಾಗೂ ಸರಕಾರಿ ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ಇರಿಸಲಾಗಿದೆ.

ಉಡುಪಿ ತಾಲೂಕಿನ 11, ಕುಂದಾಪುರ- 11, ಬ್ರಹ್ಮಾವರ- 3, ಕಾಪು- 16, ಬೈಂದೂರು- 8, ಕಾರ್ಕಳ- 3 ಮಂದಿ ಆಗಮಿಸಿದ್ದು, ಇವರಲ್ಲಿ ಐದು ಮಂದಿಯನ್ನು ಸರಕಾರಿ ಕ್ವಾರಂಟೇನ್‌ನಲ್ಲಿ ಮತ್ತು 47 ಮಂದಿಯನ್ನು ನಗರದ ಖಾಸಗಿ ಹೊಟೇಲಿನಲ್ಲಿ ಕ್ವಾರಂಟೇನ್‌ನಲ್ಲಿ ಇರಿಸಲಾಗಿದೆ. ಈ ತಂಡದಲ್ಲಿ ಎಂಟು ಮಂದಿ ಗರ್ಭಿಣಿಯರ ಸಹಿತ ಮಹಿಳೆಯರು ಮತ್ತು ಮಕ್ಕಳು ಇದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅವ್ಯವಸ್ಥೆ, ನಿರ್ಲಕ್ಷ್ಯದ ಆರೋಪ
‘ನಾವು ಮೇ 12ರಂದು ರಾತ್ರಿ 10:10ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿದೆವು. ಅಲ್ಲಿ ನಮ್ಮನ್ನು ಒಂದೂವರೆ ಗಂಟೆ ಕಾಯಿಸಿದರು. ನಮ್ಮ ಲಗೇಜ್ ಗಳನ್ನು ನಾವೇ ಹೊರಬೇಕಾಗಿತ್ತು. ಇದರಿಂದ ಗರ್ಭಿಣಿಯರು ತುಂಬಾ ತೊಂದರೆ ಅನುಭವಿಸಿದರು. ಬಳಿಕ ಅವರಿಗೆಲ್ಲ ನಾನೇ ಸಹಾಯ ಮಾಡಿದೆ. ಅಲ್ಲಿ ನಮ್ಮ ಆರೋಗ್ಯ ತಪಾಸಣೆ ಮಾಡಿದರು. ಅಲ್ಲಿಂದ ನಾವು ನಸುಕಿನ ವೇಳೆ ಒಂದೂವರೆ ಗಂಟೆಗೆ ಬಸ್‌ನಲ್ಲಿ ಹೊರಟೆವು’ ಎಂದು ಉಡುಪಿ ಖಾಸಗಿ ಹೊಟೇಲಿನಲ್ಲಿ ಕ್ವಾರಂಟೇನ್‌ನಲ್ಲಿರುವ ಅನಿವಾಸಿ ಕನ್ನಡಿಗರೊಬ್ಬರು ದೂರವಾಣಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಹೆಜಮಾಡಿ ಗಡಿಯಲ್ಲಿ ಸುಮಾರು ಅರ್ಧ ಗಂಟೆ ಬಸ್ ನಿಂತಿತ್ತು. ನಂತರ ನಮ್ಮನ್ನು ನೇರ ಉಡುಪಿ ಬೋರ್ಡ್ ಹೈಸ್ಕೂಲ್‌ಗೆ ಕರೆದುಕೊಂಡು ಬಂದರು. ಅಲ್ಲಿಗೆ ಬರುವಾಗ ಬೆಳಗಿನ ಜಾವ ನಾಲ್ಕೂವರೆ ಗಂಟೆಯಾಗಿತ್ತು. ಸರಕಾರಿ ಕ್ವಾರಂಟೈನ್‌ನಲ್ಲಿ ಉಳಿದುಕೊಳ್ಳುವುದಾದರೆ ಊಟ, ತಿಂಡಿ ವ್ಯವಸ್ಥೆ ಮಾಡುತ್ತೇವೆ, ಅಲ್ಲಿ ಶುಚಿತ್ವ ಸೇರಿದಂತೆ ಇತರ ಸಮಸ್ಯೆಗಳಾದರೆ ನಂತರ ಸ್ಥಳ ಬದಲಾಯಿಸಲು ಅವಕಾಶ ಇಲ್ಲ ಎಂದು ಅಧಿಕಾರಿಗಳು ತಿಳಿಸಿದರು. ಅಲ್ಲದೆ ಅವರೇ ಖಾಸಗಿ ಹೊಟೇಲ್‌ನಲ್ಲಿ ಉಳಿದುಕೊಳ್ಳಲು ಸಲಹೆ ನೀಡಿದರು. ಆದುದರಿಂದ ಹೆಚ್ಚಿನವರು ಖಾಸಗಿ ಹೊಟೇಲಿನಲ್ಲೇ ಉಳಿದುಕೊಳ್ಳಲು ನಿಶ್ಚಯಿಸಿದರು.’

‘ಈ ಮಧ್ಯೆ ನಮಗೆ ಕುಡಿಯುವ ನೀರು ಕೊಡುವವರು ಕೂಡ ಇರಲಿಲ್ಲ. ಈ ಸೆಕೆಯ ವಾತಾರವಣದಲ್ಲಿ ಗರ್ಭಿಣಿಯರು, ವೃದ್ಧರು, ಮಕ್ಕಳು ಸೇರಿದಂತೆ ಎಲ್ಲರು ತುಂಬಾ ತೊಂದರೆ ಅನುಭವಿಸಬೇಕಾಯಿತು. ಎಲ್ಲರೂ ನಮ್ಮನ್ನು ನಿರ್ಲಕ್ಷಿಸಿದರು. ಬೆಳಗ್ಗೆವರೆಗೆ ನಾವು ಯಾರು ಕೂಡ ಊಟ ಮಾಡಲೇ ಇಲ್ಲ. ಈಗ ನಾವೆಲ್ಲ ದುಬಾರಿ ಹಣ ತೆತ್ತು 14 ದಿನಗಳ ಕಾಲ ಹೊಟೇಲಿನಲ್ಲಿ ಉಳಿಯಬೇಕಾಗಿದೆ. ಕೆಲವರು ಹಣ ಇಲ್ಲ ಹೇಳಿ ಸರಕಾರಿ ಕ್ವಾರಂಟೇನ್ ನಲ್ಲಿ ಉಳಿದುಕೊಂಡಿದ್ದಾರೆ’ ಎಂದು ಅವರು ಅಳಲು ತೋಡಿಕೊಂಡರು.

‘ನಮ್ಮ ಊರಿನಲ್ಲಿ ನಮ್ಮನ್ನು ಈ ರೀತಿ ನಡೆಸಿಕೊಂಡಿರುವುದರಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಇದಕ್ಕಿಂತ ಅಲ್ಲಿಯೇ ಉಳಿದುಕೊಂಡಿದ್ದರೆ ಚೆನ್ನಾಗಿತ್ತು ಎಂದು ಅನಿಸಿತು. ವಿದೇಶದಿಂದ ಇನ್ನು ಊರಿಗೆ ಬರುವವರು ತುಂಬಾ ಆಲೋಚನೆ ಮಾಡಿ ಕೊಂಡು ಬರುವುದು ಒಳಿತು’ ಎಂದು ಅವರು ದುಃಖದಿಂದ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X