Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದ್ವೇಷದ ಹೇಳಿಕೆ ನೀಡಿದ ಟಿವಿ ವಾಹಿನಿಗಳ...

ದ್ವೇಷದ ಹೇಳಿಕೆ ನೀಡಿದ ಟಿವಿ ವಾಹಿನಿಗಳ ವಿರುದ್ಧ ಕ್ರಮ: ಹೈಕೋರ್ಟ್ ಕದ ತಟ್ಟಿದ Campaign Against Hate Speech

ಕೊರೋನ ಹೆಸರಲ್ಲಿ ಪ್ರಚೋದನಾತ್ಮಕ ಕಾರ್ಯಕ್ರಮಗಳು

ವಾರ್ತಾಭಾರತಿವಾರ್ತಾಭಾರತಿ13 May 2020 10:38 PM IST
share
ದ್ವೇಷದ ಹೇಳಿಕೆ ನೀಡಿದ ಟಿವಿ ವಾಹಿನಿಗಳ ವಿರುದ್ಧ ಕ್ರಮ: ಹೈಕೋರ್ಟ್ ಕದ ತಟ್ಟಿದ Campaign Against Hate Speech

ಬೆಂಗಳೂರು: ತಬ್ಲೀಗಿ ಜಮಾತ್‍ನ ಹಲವು ಸದಸ್ಯರಿಗೆ ಕೊರೋನವೈರಸ್ ದೃಢಪಟ್ಟ ನಂತರ ಅಲ್ಪಸಂಖ್ಯಾತ ಸಮುದಾಯವನ್ನು ಗುರಿ ಮಾಡಿ ‘ದ್ವೇಷಯುಕ್ತ ಹೇಳಿಕೆಗಳನ್ನು’ ನೀಡಿರುವ ಮಾಧ್ಯಮ ಸಂಸ್ಥೆಗಳು ಹಾಗೂ ರಾಜಕೀಯ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಬೇಕೆಂದು ಕೋರಿ ರಾಜ್ಯ ಹೈಕೋರ್ಟಿನಲ್ಲಿ Campaign Against Hate Speech ಎಂಬ ಸಂಘಟನೆ ಸ್ಥಾಪಕರಾದ ಸಿದ್ಧಾರ್ಥ್ ಜೋಷಿ, ಎ ಆರ್ ವಾಸವಿ ಹಾಗೂ ಸ್ವಾತಿ ಶೇಷಾದ್ರಿ ಅವರ ಮೂಲಕ ಅಪೀಲು ಸಲ್ಲಿಸಿದೆ.

ಇಂತಹ ದ್ವೇಷದ ಹೇಳಿಕೆಗಳ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ಮೂಲಭೂತ ಹಕ್ಕುಗಳ, ಮುಖ್ಯವಾಗಿ ಜೀವಿಸುವ ಹಾಗೂ ಜೀವನೋಪಾಯದ ಹಕ್ಕುಗಳ ಉಲ್ಲಂಘನೆಯಾಗಿದೆ  ಎಂದು ಅವರು ತಮ್ಮ ಅಪೀಲಿನಲ್ಲಿ ಹೇಳಿದ್ದಾರೆ.

ಈ ಪ್ರಕರಣದ ವಿಚಾರಣೆಯನ್ನು ಜಸ್ಟಿಸ್ ಬಿ ವಿ ನಾಗರತ್ನ ಅವರ ನೇತೃತ್ವದ ಪೀಠಕ್ಕೆ ವಹಿಸುವಂತೆ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರ ನೇತೃತ್ವದ ವಿಭಾಗೀಯ ಪೀಠ ಸೋಮವಾರ ನ್ಯಾಯಾಲಯದ ರಿಜಿಸ್ಟ್ರಿಗೆ ಸೂಚಿಸಿದೆ.

‘ಕೊರೋನ ಸೂಪರ್ ಸ್ಪ್ರೆಡ್ಡರ್ಸ್... ಅವರಿಗೆ ಈ ಮಣ್ಣಿನಲ್ಲಿ ಬದುಕುವ ಹಕ್ಕಿಲ್ಲ’, `ನಾವು ಕೊರೋನ ವಿಲನ್‍ಗಳನ್ನು ಗುರುತಿಸಿದ್ದೇವೆ, ನಾವು ಮಾಡಬೇಕಾದದ್ದಿಷ್ಟೇ, ಮೊದಲನೆಯದಾಗಿ ಅವರನ್ನು ಪ್ರತ್ಯೇಕಿಸುವುದು, ಎರಡನೆಯದಾಗಿ ಅವರನ್ನು ಹಿಡಿದು, ಮೂರನೆಯದಾಗಿ ಶಿಕ್ಷಿಸಿ ಹಾಗೂ ಕೊನೆಯದಾಗಿ ಅವರನ್ನು ಸೋಲಿಸಬೇಕು ಹಾಗೂ ಇದು ದೊಡ್ಡ ಸಾಧನೆಯಾಗಬಹುದು’, ‘ಇದಕ್ಕೆ ಪಾಠ ಕಲಿಸಲು ಸರಕಾರ ಕಠಿಣ  ಕ್ಷಮೆಯಿಲ್ಲದ ಕ್ರಮಗಳನ್ನು ಕೈಗೊಳ್ಳಬೇಕು, ಅವರು ಹಣ ತೆರುವಂತೆ ಮಾಡಬೇಕು, ಅವರ ಆದಾಯ ಮೂಲವನ್ನು ನಾಶಪಡಿಸಬೇಕು. ಅವರ ಮೇಲೆ ದೊಡ್ಡ ದಂಡ ಹೇರಬೇಕು ಹಾಗೂ ಅವರ ನಾಯಕರನ್ನು ಜೈಲಿಗಟ್ಟಬೇಕು' ಎಂದು ಕೆಲ ಖಾಸಗಿ ಟಿವಿ ವಾಹಿನಿಗಳು ನೀಡಿದ್ದ ಪ್ರಚೋದನಾತ್ಮಕ ಹೇಳಿಕೆಗಳತ್ತ ಅಪೀಲಿನಲ್ಲಿ ಗಮನ ಸೆಳೆಯಲಾಗಿದೆ.

ಪ್ರಚೋದನಾತ್ಮಕ ಹೇಳಿಕೆಗಳನ್ನು ಮಾಡಿರುವ ಟಿವಿ ವಾಹಿನಿಗಳ ಹಾಗೂ ರಾಜಕೀಯ ನಾಯಕರುಗಳ ವಿರುದ್ಧ  ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಬೇಕು ಹಾಗೂ ಕೇಬಲ್ ಟಿವಿ ಜಾಲ ನಿಯಮ 1995 ಹಾಗೂ ಕೇಬಲ್ ಜಾಲ ನಿಯಮಗಳು 1994 ಮತ್ತಿತರ ಸುತ್ತೋಲೆಗಳನ್ನು ಉಲ್ಲಂಘಿಸಿದ ವಾಹಿನಿಗಳ ವಿರುದ್ಧ ಕ್ರಮಕ್ಕೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯಕ್ಕೆ ಆದೇಶಿಸಬೇಕು ಎಂದು ಅಪೀಲಿನಲ್ಲಿ ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X