Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯ: ಬೆಂಕಿ ಅಪಘಾತಕ್ಕೆ ಕಾರಣವಾದ...

ರಶ್ಯ: ಬೆಂಕಿ ಅಪಘಾತಕ್ಕೆ ಕಾರಣವಾದ ವೆಂಟಿಲೇಟರ್‌ಗಳ ಸುರಕ್ಷತೆ ಬಗ್ಗೆ ತನಿಖೆ

ವಾರ್ತಾಭಾರತಿವಾರ್ತಾಭಾರತಿ13 May 2020 11:07 PM IST
share

ಮಾಸ್ಕೋ (ರಶ್ಯ), ಮೇ 13: ರಶ್ಯ ನಿರ್ಮಿತ ವೈದ್ಯಕೀಯ ವೆಂಟಿಲೇಟರ್‌ಗಳ ಸುರಕ್ಷತೆಯ ಬಗ್ಗೆ ದೇಶವು ತನಿಖೆ ಆರಂಭಿಸಿದೆ. ಈ ಪೈಕಿ ಕೆಲವು ವೆಂಟಿಲೇಟರ್‌ಗಳನ್ನು ಸ್ವದೇಶದಲ್ಲಿ ಬಳಸದೆಯೇ ಅಮೆರಿಕಕ್ಕೆ ಕಳುಹಿಸಲಾಗಿತ್ತು.

ರಶ್ಯದ ಕೋವಿಡ್-19 ಆಸ್ಪತ್ರೆಯೊಂದರಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅಪಘಾತದಲ್ಲಿ 5 ಮಂದಿ ಮೃತಪಟ್ಟ ಬಳಿಕ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಬೆಂಕಿ ಅಪಘಾತಕ್ಕೆ ಈ ಮಾದರಿಯ ಎರಡು ವೆಂಟಿಲೇಟರ್‌ಗಳು ಕಾರಣ ಎಂದು ಹೇಳಲಾಗಿದೆ.

ಸೇಂಟ್ ಪೀಟರ್ಸ್‌ಬರ್ಗ್‌ನ ಸೇಂಟ್ ಜಾರ್ಜ್‌ಸ್ ಆಸ್ಪತ್ರೆಯಲ್ಲಿ ಮಂಗಳವಾರ ಐವರು ಬೆಂಕಿಗೆ ಬಲಿಯಾಗಿದ್ದಾರೆ. ಈ ಪೈಕಿ ನಾಲ್ವರು ಕೊರೋನ ವೈರಸ್ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು. ಗಂಭೀರ ಸ್ಥಿತಿಯಲ್ಲಿರುವ ಕೊರೋನ ರೋಗಿಗಳಿಗೆ ಉಸಿರಾಟದಲ್ಲಿ ನೆರವಾಗಲು ಬಳಸಲಾಗುತ್ತಿದ್ದ ವೆಂಟಿಲೇಟರ್‌ನಲ್ಲಿ ಬೆಂಕಿ ಹೊತ್ತಿಕೊಂಡ ಬಳಿಕ ಇಡೀ ಆಸ್ಪತ್ರೆಗೆ ಬೆಂಕಿ ಹರಡಿತು ಎಂದು ಟಾಸ್ ಸುದ್ದಿ ಸಂಸ್ಥೆ ತಿಳಿಸಿದೆ.

ಶನಿವಾರ ಮಾಸ್ಕೋದ ಇನ್ನೊಂದು ಆಸ್ಪತ್ರೆಯಲ್ಲೂ ಇದೇ ವೆಂಟಿಲೇರ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.

ಈ ಎರಡು ಆಸ್ಪತ್ರೆಗಳ ವೆಂಟಿಲೇಟರ್‌ಗಳ ಗುಣಮಟ್ಟ ಮತ್ತು ಸುರಕ್ಷತೆಯ ಬಗ್ಗೆ ತನಿಖೆ ನಡೆಸುವುದಾಗಿ ರಶ್ಯದ ಆರೋಗ್ಯ ರಕ್ಷಣೆ ನಿಗಾ ಸಂಸ್ಥೆ ತಿಳಿಸಿದೆ.

ರಶ್ಯದಲ್ಲಿ ಈವರೆಗೆ 2,32,243 ಕೊರೋನ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 2,116 ಮಂದಿ ಮೃತಪಟ್ಟಿದ್ದಾರೆ.

ವೆಂಟಿಲೇಟರ್‌ಗಳ ಬಳಕೆ ನಿಲ್ಲಿಸಲು ಆದೇಶ

ಕೊರೋನ ವೈರಸ್ ಆಸ್ಪತ್ರೆಗಳಲ್ಲಿ ಬೆಂಕಿ ಅಪಘಾತಕ್ಕೆ ಕಾರಣವಾಗಿದೆ ಎಂದು ನಂಬಲಾಗಿರುವ ವೆಂಟಿಲೇಟರ್‌ಗಳ ಬಳಕೆಯನ್ನು ನಿಲ್ಲಿಸುವಂತೆ ರಶ್ಯದ ಆರೋಗ್ಯ ರಕ್ಷಣೆ ಕ್ಷೇತ್ರದ ನಿಗಾ ಸಂಸ್ಥೆ ಬುಧವಾರ ಆದೇಶಿಸಿದೆ.

ಉರಾಲ್‌ನ ಕಾರ್ಖಾನೆಯೊಂದರಲ್ಲಿ ಎಪ್ರಿಲ್ 1ರಿಂದ ಉತ್ಪಾದಿಸಲ್ಪಟ್ಟಿರುವ ಅವೆಂಟಾ-ಎಂ ವೆಂಟಿಲೇಟರ್‌ಗಳ ಬಳಕೆಯನ್ನು ರಶ್ಯದಲ್ಲಿ ನಿಲ್ಲಿಸಲು ನಿಗಾ ಸಂಸ್ಥೆ ಆದೇಶ ನೀಡಿದೆ ಎಂದು ಸಂಸ್ಥೆ ಹೊರಡಿಸಿರುವ ಹೇಳಿಕೆಯೊಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X