Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ವೈರಸ್‌ಗೆ ಆಯುಷ್ ಮದ್ದು:...

ಕೊರೋನ ವೈರಸ್‌ಗೆ ಆಯುಷ್ ಮದ್ದು: ವಾರದೊಳಗೆ ನಾಲ್ಕು ಔಷಧಿಗಳ ಪ್ರಾಯೋಗಿಕ ಪರೀಕ್ಷೆ ಆರಂಭ

ವಾರ್ತಾಭಾರತಿವಾರ್ತಾಭಾರತಿ14 May 2020 8:57 PM IST
share

ಹೊಸದಿಲ್ಲಿ, ಮೇ 14: ಮಾರಕವಾದ ಕೊರೋನ ವೈರಸ್ ಸೋಂಕಿಗೆ ಔಷಧಿ ಕಂಡುಹಿಡಿಯುವ ಪ್ರಯತ್ನದಲ್ಲಿ ಆಯುಷ್ ಸಚಿವಾಲಯ ಕೂಡಾ ಕೈಜೋಡಿಸಿದೆ. ಕೊರೋನ ವೈರಸ್ ಸೋಂಕಿನ ಚಿಕಿತ್ಸೆಗಾಗಿ ನಾಲ್ಕು ವಿಧದ ಸಾಂಪ್ರದಾಯಿಕ ಔಷಧಿ ಸಂಯೋಜನೆಗಳನ್ನು ಸಿದ್ಧಪಡಿಸಿದ್ದು, ಒಂದು ವಾರದೊಳಗೆ ಅವುಗಳ ಪ್ರಾಯೋಗಿಕ ಪರೀಕ್ಷೆ ಆರಂಭಗೊಳ್ಳಲಿದೆಯೆಂದು ಆಯುಷ್ ಸಚಿವ ಶ್ರೀಪಾದ್ ವೈ. ನಾಯಕ್ ಗುರುವಾರ ತಿಳಿಸಿದ್ದಾರೆ.

 ಆಯುಷ್ ಸಚಿವಾಲಯವು ಆಯುರ್ವೇದ, ಯೋಗ, ಪ್ರಕೃತಿಚಿಕಿತ್ಸೆ, ಸಿದ್ಧ, ಯುನಾನಿ ಹಾಗೂ ಹೊಮಿಯೋಪಥಿ ಔಷಧೀಯ ಪದ್ಧತಿಗಳ ಅಭಿವೃದ್ಧಿ ಹಾಗೂ ಸಂಶೋಧನೆಗೆ ಸಂಬಂಧಿಸಿದ ವಿಷಯಗಳನ್ನು ನೋಡಿಕೊಳ್ಳುತ್ತಿದೆ.

ಉಸಿರಾಟದ ತೊಂದರೆಗೆ ಕಾರಣವಾಗುವಂತಹ ಕೊರೋನ ವೈರಸ್ ಸೋಂಕಿಗೆ ಈವರೆಗೆ ಯಾವುದೇ ಔಷಧಿಯನ್ನು ಸಿದ್ಧಪಡಿಸಲು ಸಾಧ್ಯವಾಗದೆ ಇರುವುದರಿಂದ, ವಿಶ್ವದಾದ್ಯಂತದ ವೈದ್ಯರು ಈ ಮಾರಣಾಂತಿಕ ರೋಗದ ಚಿಕಿತ್ಸೆಗೆ ವಿವಿಧ ಔಷಧಿಗಳ ಸಂಯೋಜನೆಗಳನ್ನು ತಯಾರಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.

ಕೊರೋನ ವೈರಸ್ ಸೋಂಕು ಗುಣಪಡಿಸಲು ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಯು ಒಂದು ಮಾರ್ಗವನ್ನು ಕಂಡುಹಿಡಿಯಲಿದೆಯೆಂದು ಎಂಬ ಭರವಸೆ ತನಗಿದೆಯೆಂದು ಸಚಿವರು ತಿಳಿಸಿದರು.

 ಈ ಪ್ರಾಯೋಗಿಕ ಪರೀಕ್ಷೆಗಳು ಶುಕ್ರವಾರ ಆರಂಭಗೊಳ್ಳಲಿದ್ದು, ಮುಂದಿನ ಮೂರು ತಿಂಗಳುಗಳೊಳಗೆ ಅದರ ಫಲಿತಾಂಶಗಳು ದೊರೆಯಲಿವೆ ಎಂದು ವೈಜ್ಞಾನಿಕ ಹಾಗೂ ಕೈಗಾರಿಕಾ ಸಂಶೋಧನಾ ಮಂಡಳಿ(ಸಿಎಸ್‌ಐಆರ್)ಯ ಮಹಾನಿರ್ದೇಶಕ ಶೇಖರ್ ಮಾಂಡೆ ಹಾಗೂ ಆಯುಷ್ ಕಾರ್ಯದರ್ಶಿ ವೈದ್ಯ ರಾಜೇಶ್ ಕೊಟೇಚಾ ತಿಳಿಸಿದ್ದಾರೆ. ಕೋವಿಡ್19 ಚಿಕಿತ್ಸೆಗೆ ನಾಲ್ಕು ವಿಭಿನ್ನ ಔಷಧಿ ಸಂಯೋಜನೆಗಳನ್ನು ರೂಪಿಸಲು ಸಿಎಸ್‌ಐಆರ್ ಹಾಗೂ ಆಯುಷ್ ಸಚಿವಾಲಯ ಪ್ರಯತ್ನಿಸಲಿದೆಯೆಂದು ಅವರು ಹೇಳಿರು.

ಕೋವಿಡ್-19 ರೋಗಕ್ಕೆ ಔಷಧಿ ಕಂಡುಹಿಯಲು ಆಯುಷ್ ಹಾಗೂ ಸಿಎಸ್‌ಐಆರ್‌ನ ಸಹಯೋಗವು ವಿಶಾಲವಾದ ದೃಷ್ಟಿಕೋನವನ್ನು ಹೊಂದಿದೆಯೆಂದು ಕೊಟೇಚಾ ತಿಳಿಸಿದರು. ಇದು ಜೀವಮಾನದಲ್ಲೊಮ್ಮೆ ದೊರೆಯುವ ಅವಕಾಶವಾಗಿದೆಯೆಂದು ಅವರು ತಿಳಿಸಿದರು.

‘‘ಇಂತಹ ಅಧ್ಯಯನ ನಮ್ಮ ದೇಶದಲ್ಲಿ ಎಂದೂ ನಡೆದಿಲ್ಲ. ಅಶ್ವಗಂಧ, ಯಷ್ಟಿಮಧು ಹಾಗೂ ಗುಡುಚಿ+ಪಿಪ್ಪಲಿ (ಗಿಲೋಯ್) ಹಾಗೂ ಮಲೇರಿಯಾ ರೋಗದ ಚಿಕಿತ್ಸೆಗಾಗಿ ಸಂಶೋಧಿಸಲಾದ ಆಯುಶ್-64, ಹೀಗೆ ನಾಲ್ಕು ಬಗೆಯ ಔಷಧಿ ಸಂಯೋಜನೆಗಳನ್ನು ಕೋವಿಡ್-19 ಚಿಕಿತ್ಸೆಗಾಗಿ ಬಳಸಲಾಗುವುದೆಂದು ಕೊಟೇಚಾ ತಿಳಿಸಿದ್ದಾರೆ.

ಕೊರೋನ ವೈರಸ್ ರೋಗಿಗಳ ಮೇಲೆ ಹೆಚ್ಚುವರಿ ಥೆರಪಿ ಹಾಗೂ ಮಾನದಂಡನಾತ್ಮಕ ಶುಶ್ರೂಷೆಯಲ್ಲಿ ಈ ನಾಲ್ಕು ಔಷಧಿ ಸಂಯೋಜನೆಗಳನ್ನು ಪರೀಕ್ಷಿಸಲಾಗವುದೆಂದು ಕೊಟೇಟಾ ತಿಳಿಸಿದ್ದಾರೆ.

ಆಯುರ್ವೇದವು ಸಾವಿರಾರು ವರ್ಷಗಳ ಚಿಕಿತ್ಸಾ ಪದ್ಧತಿಯಾಗಿದ್ದು, ಅದರಲ್ಲಿ ಭಾರತೀಯರಿಗೆ ವಿಶ್ವಾಸವಿರುವುದಾಗಿ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X