ಲಾಕ್ಡೌನ್ ನಿಯಮ ಉಲ್ಲಂಘನೆ: ಬಿಬಿಎಂಪಿ ಸದಸ್ಯೆಯ ಪತಿ ಸೇರಿ ಆರು ಮಂದಿ ವಿರುದ್ಧ ಎಫ್ಐಆರ್
ಬೆಂಗಳೂರು, ಮೇ 15: ಕೊರೋನ ಲಾಕ್ಡೌನ್ ನಿಯಮ ಉಲ್ಲಂಘಿಸಿದ ಆರೋಪದ ಸಂಬಂಧ ಬಿಬಿಎಂಪಿ ಸದಸ್ಯೆ ಪ್ರತಿಭಾ ಅವರ ಪತಿ ಧನರಾಜ್ ಸೇರಿದಂತೆ ಆರು ಜನರ ವಿರುದ್ಧ ಎನ್ಡಿಎಂಎ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ) ಅಡಿ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಬಿಎಂಪಿ ಅಧಿಕಾರಿಗಳ ಜೊತೆ ಪಾದಚಾರಿ ಮಾರ್ಗದಲ್ಲಿದ್ದ ಅಂಗಡಿಗಳನ್ನು ತೆರವುಗೊಳಿಸಲು ತೆರಳಿದ ವೇಳೆ ಧನರಾಜ್ ಮತ್ತು ಮಗ ವೈಷ್ಣವ್ ಮೇಲೆ ಕಳೆದ ಮೇ 13ರಂದು ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿ ಸಗಣಿ ಎರಚಿದ ಘಟನೆ ನಡೆದಿತ್ತು. ಇದನ್ನು ಪ್ರತಿಭಟಿಸಿ ಮಾಸ್ಕ್ ಧರಿಸದೆ 15 ರಿಂದ 30 ಮಂದಿ ಕಲಾಸಿಪಾಳ್ಯದ ಕೆಎಂ ರಸ್ತೆಯಲ್ಲಿ ಗುಂಪು ಸೇರಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
ಕೋವಿಡ್-19 ವೈರಸ್ ಹರಡುವಿಕೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ನಿಯಮ ಉಲ್ಲಂಘಿಸಿಸಲಾಗಿದೆ. ಲಾಕ್ಡೌನ್ ನಿಯಮಗಳು ಹಾಗೂ 144 ಸೆಕ್ಷನ್ ಉಲ್ಲಂಘಿಸಿದ ಆರೋಪದಲ್ಲಿ ಕಲಾಸಿಪಾಳ್ಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story