Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ಯೋಗಿಗಳ ನೈತಿಕ ಸ್ಥೈರ್ಯ ಹೆಚ್ಚಿಸಲು...

ಉದ್ಯೋಗಿಗಳ ನೈತಿಕ ಸ್ಥೈರ್ಯ ಹೆಚ್ಚಿಸಲು ವೇತನ ಏರಿಸಿದ ಏಶಿಯನ್ ಪೇಂಟ್ಸ್ !

ವಾರ್ತಾಭಾರತಿವಾರ್ತಾಭಾರತಿ15 May 2020 11:19 PM IST
share
ಉದ್ಯೋಗಿಗಳ ನೈತಿಕ ಸ್ಥೈರ್ಯ ಹೆಚ್ಚಿಸಲು ವೇತನ ಏರಿಸಿದ ಏಶಿಯನ್ ಪೇಂಟ್ಸ್ !

ಮುಂಬೈ, ಮೇ 15: ದೇಶದ ಅತ್ಯಂತ ದೊಡ್ಡ ಬಣ್ಣ ತಯಾರಿಕೆ ಕಂಪನಿಯಾಗಿರುವ ಏಶಿಯನ್ ಪೇಂಟ್ಸ್ ಪ್ರವಾಹಕ್ಕೆ ಎದುರಾಗಿ ಈಜುತ್ತಿದೆ. ಲಾಕ್‌ಡೌನ್‌ನಿಂದಾಗಿ ತಮ್ಮ ಉತ್ಪನ್ನಗಳಿಗೆ ಬೇಡಿಕೆ ಕುಂಠಿತಗೊಂಡು ಕಂಪನಿಗಳು ವೇತನ ಮತ್ತು ಉದ್ಯೋಗಗಳನ್ನು ಕಡಿತಗೊಳಿಸುತ್ತಿರುವ ಈ ಸಮಯದಲ್ಲಿ ಏಶಿಯನ್ ಪೇಂಟ್ಸ್ ತನ್ನ ಉದ್ಯೋಗಿಗಳ ನೈತಿಕ ಸ್ಥೈರ್ಯವನ್ನು ಹೆಚ್ಚಿಸಲು ಅವರ ವೇತನಗಳಲ್ಲಿ ಏರಿಕೆ ಮಾಡುತ್ತಿದೆ.

ಮಾರಾಟ ವಿಭಾಗಕ್ಕೆ ಅದರ ನೆರವಿನ ವ್ಯಾಪ್ತಿಯು ಪಾರ್ಟ್‌ನರ್ ಸ್ಟೋರ್‌ಗಳಿಗೆ ಆಸ್ಪತ್ರೆ ವೆಚ್ಚ ಪಾವತಿ ಮತ್ತು ವಿಮಾ ಸೌಲಭ್ಯ ಹಾಗೂನೇರ ನಗದು ಬೆಂಬಲವನ್ನು ಒಳಗೊಂಡಿದೆ. ಕಂಪನಿಯು ತನ್ನ ಗುತ್ತಿಗೆದಾರರ ಖಾತೆಗಳಿಗೆ 40 ಕೋ.ರೂ.ಗಳ ವರ್ಗಾವಣೆಯನ್ನೂ ಮಾಡಿದೆ.

ಕಂಪನಿಯು ಕೇಂದ್ರ ಮತ್ತು ರಾಜ್ಯ ಕೋವಿಡ್-19 ಪರಿಹಾರ ನಿಧಿಗಳಿಗೆ 35 ಕೋ.ರೂ.ಗಳ ದೇಣಿಗೆಗಳನ್ನು ಸಲ್ಲಿಸಿದೆ. ಕೊರೋನ ವೈರಸ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ನೆರವಾಗಲು ಸ್ಯಾನಿಟೈಸರ್‌ಗಳನ್ನೂ ಅದು ತಯಾರಿಸುತ್ತಿದೆ.

‘ನಿಜವಾದ ನಾಯಕತ್ವದ ಮತ್ತು ತನ್ನೆಲ್ಲ ಪಾಲುದಾರರ ಕಾಳಜಿಯನ್ನು ವಹಿಸುವ ಸಂಸ್ಥೆಯೊಂದರ ಉದಾಹರಣೆಯೊಂದನ್ನು ನಾವು ಸ್ಥಾಪಿಸಬೇಕಿದೆ. ಇಂತಹ ಎಲ್ಲ ಉಪಕ್ರಮಗಳ ಬಗ್ಗೆ ನಾನು ನಿಯಮಿತವಾಗಿ ಆಡಳಿತ ಮಂಡಳಿಗೆ ಮಾಹಿತಿ ನೀಡುತ್ತಿರುತ್ತೇನೆ ಮತ್ತು ಅದರ ಅನುಮತಿಯನ್ನು ಪಡೆದುಕೊಳ್ಳುತ್ತೇನೆ ’ಎಂದು ಸುದ್ದಿಸಂಸ್ಥೆಗೆ ತಿಳಿಸಿದ ಏಶಿಯನ್ ಪೇಂಟ್ಸ್‌ನ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಮಿತ ಸಿಂಗ್ಲೆ ಅವರು,ನಾನಿದನ್ನು ಪ್ರತಿಯೊಬ್ಬ ಉದ್ಯೋಗಿಯ ಜೊತೆಯೂ ಸಂವಾದಿಸುವ ಮತ್ತು ಅನಿಶ್ಚಿತತೆಯ ಮಾರುಕಟ್ಟೆಯಲ್ಲಿ ಅವರ ಕಳವಳಗಳಿಗೆ ಸಾಂತ್ವನ ಹೇಳುವ ಅವಕಾಶವನ್ನಾಗಿ ಪರಿಗಣಿಸಿದ್ದೇನೆ’ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X