Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶ್ರಮಿಕ ರೈಲುಗಳ ಕುರಿತು ಕೇಂದ್ರ,...

ಶ್ರಮಿಕ ರೈಲುಗಳ ಕುರಿತು ಕೇಂದ್ರ, ರಾಜ್ಯಗಳ ನಡುವೆ ವಾಕ್ಸಮರ

ವಾರ್ತಾಭಾರತಿವಾರ್ತಾಭಾರತಿ16 May 2020 3:03 PM IST
share
ಶ್ರಮಿಕ ರೈಲುಗಳ ಕುರಿತು ಕೇಂದ್ರ, ರಾಜ್ಯಗಳ ನಡುವೆ ವಾಕ್ಸಮರ

ಹೊಸದಿಲ್ಲಿ: ವಲಸಿಗ ಕಾರ್ಮಿಕರನ್ನು ಅವರ ತವರು ರಾಜ್ಯಗಳಿಗೆ ಕಳುಹಿಸಿ ಕೊಡಲು ಆರಂಭಿಸಲಾಗಿರುವ ಶ್ರಮಿಕ ವಿಶೇಷ ರೈಲುಗಳ ಕುರಿತಂತೆ ಕೇಂದ್ರ  ಮತ್ತು ಕೆಲ ರಾಜ್ಯ ಸರಕಾರಗಳ ನಡುವೆ ವಾದವಿವಾದ ಮುಂದುವರಿದಿದೆ. ಈ ರೈಲುಗಳು ತಮ್ಮ ರಾಜ್ಯಗಳಿಗೆ ಆಗಮಿಸಲು ಪಶ್ಚಿಮ ಬಂಗಾಳ ಜಾರ್ಖಂಡ್, ಛತ್ತೀಸಗಢ ಮತ್ತು ರಾಜಸ್ಥಾನ ಸರಕಾರಗಳು ಅನುಮತಿಸಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯೆಲ್ ಆರೋಪಿಸಿದ್ದಾರೆ. ಅವರು ಹೆಸರಿಸಿರುವ ರಾಜ್ಯಗಳೆಲ್ಲವೂ ವಿಪಕ್ಷಗಳು ಆಡಳಿತಗಳಿರುವ ರಾಜ್ಯಗಳಾಗಿದ್ದು ಇದೀಗ ಈ ರಾಜ್ಯ ಸರಕಾರಗಳು ಸಚಿವರ ಆರೋಪದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.

ಪಶ್ಚಿಮ ಬಂಗಾಳವನ್ನು ಗುರಿಯಾಗಿಸಿ ಮಾತನಾಡಿದ ಗೋಯೆಲ್, ಈ ರಾಜ್ಯದ ನಿವಾಸಿಗಳಾಗಿರುವ ಹಾಗೂ ದೇಶದ ವಿವಿಧೆಡೆಗಳಲ್ಲಿರುವ 30,000ರಿಂದ 50,000  ವಲಸಿಗ ಕಾರ್ಮಿಕರು ತಮ್ಮ ಮನೆಗಳಿಗೆ ತೆರಳಲು ಬಯಸಿದ್ದಾರೆಂದರಲ್ಲದೆ  ರಾಜ್ಯ ಸರಕಾರ ಮಾತ್ರ  ಇವರನ್ನು ವಾಪಸ್ ಕರೆತರಲು ರೈಲುಗಳಿಗೆ ಬೇಡಿಕೆಯಿಡುವಲ್ಲಿ ನಿಧಾನಗತಿ ತೋರಿಸಿವೆ ಎಂದು ದೂರಿದ್ದಾರೆ.

"ಮುಂದಿನ 30 ದಿನ ಅವಧಿಯಲ್ಲಿ 105 ರೈಲುಗಳಿಗೆ ಅನುಮತಿಸಲು ಪಶ್ಚಿಮ ಬಂಗಾಳವು ಹೆಚ್ಚಿನ ಇತರ ಮಾಹಿತಿ ನೀಡದೆ ತಿಳಿಸಿದೆ. ಮುಂದಿನ 15-20 ದಿನಗಳ ಕಾಲ 100 ರೈಲುಗಳನ್ನು ಪಶ್ಚಿಮ ಬಂಗಾಳಕ್ಕೆ ಓಡಿಸಿದರೆ ಮಾತ್ರ ಈ ಕಾರ್ಮಿಕರು ತಮ್ಮ ಮನೆಗಳನ್ನು ತಲುಪಬಹುದು,'' ಎಂಬ ಸಚಿವರ ವೀಡಿಯೋ ಹೇಳಿಕೆಯನ್ನು ಎಎನ್‍ಐ ಟ್ವಿಟರ್‍ನಲ್ಲಿ ಪೋಸ್ಟ್ ಮಾಡಿದೆ.

ಪಶ್ಚಿಮ ಬಂಗಾಳದ ನಿಧಾನಗತಿಯಿಂದಾಗಿ ಶೇ 5ರಿಂದ ಶೇ 7ರಷ್ಟು ವಲಸಿಗ ಕಾರ್ಮಿಕರು ಮನೆಗಳನ್ನು ತಲುಪಬಹುದು, ಉಳಿದವರು ರಸ್ತೆಗಳಲ್ಲಿ ನಡೆದುಕೊಂಡು, ಸೈಕಲ್‍ಗಳಲ್ಲಿ, ಟ್ರಕ್‍ಗಳಲ್ಲಿ ಹೋಗಬಹುದು, ಹಲವಾರು ಅಪಘಾತಗಳೂ ನಡೆಯಬಹುದು,'' ಎಂದು ಅವರು ಹೇಳಿದರು.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗುರುವಾರ ಟ್ವೀಟ್ ಮಾಡಿ ದೇಶದ ವಿವಿಧೆಡೆಗಳಿಂದ ಪಶ್ಚಿಮ ಬಂಗಾಳಕ್ಕೆ ಬರಲಿರುವ 105 ರೈಲುಗಳ ತಾತ್ಕಾಲಿಕ ವೇಳಾಪಟ್ಟಿ ಪೋಸ್ಟ್ ಮಾಡಿದ್ದರು.

ಗೋಯೆಲ್ ಅವರ ಹೇಳಿಕೆ ನಿರಾಧಾರ ಎಂದು ಛತ್ತೀಸಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದು ತಮ್ಮ ಸರಕಾರ 30 ರೈಲುಗಳಿಗೆ ಬೇಡಿಕೆಯಿಟ್ಟಿದ್ದು 14 ರೈಲುಗಳಿಗೆ ಅನುಮತಿ ದೊರಕಿದೆ. ನಾವು ಈ ರೈಲುಗಳಿಗೆ ರೂ 1.17 ಕೋಟಿ ಪಾವತಿಸಿದ್ದೇವೆ ಎಂದರು.

ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಪ್ರತಿಕ್ರಿಯಿಸಿ ತಮ್ಮ ರಾಜ್ಯ 110 ರೈಲುಗಳಿಗೆ ನಿರಾಕ್ಷೇಪಣಾ ಪ್ರಮಾಣಪತ್ರ ಸಲ್ಲಿಸಿದೆ. ಇಲ್ಲಿಯ ತನಕ 50 ರೈಲುಗಳು ರಾಜ್ಯ ತಲುಪಿವೆ ಹಾಗೂ 60,000 ವಲಸಿಗರು ವಾಪಸಾಗಿದ್ದಾರೆ, ಎಂದರು.

ರಾಜಸ್ಥಾನ ಸರಕಾರ ಯಾವುದೇ ರೈಲಿಗೆ ಅನುಮತಿ ನೀಡುವುದನ್ನು ಬಾಕಿಯಿರಿಸಿಲ್ಲ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X