Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳದ ಕುಟುಂಬ ದಾಖಲಾತಿ ಸಂದರ್ಭದಲ್ಲಿ...

ಭಟ್ಕಳದ ಕುಟುಂಬ ದಾಖಲಾತಿ ಸಂದರ್ಭದಲ್ಲಿ ಸುಳ್ಳು ಮಾಹಿತಿ ನೀಡಿಲ್ಲ : ತೇಜಸ್ವಿನಿ ಆಸ್ಪತ್ರೆ ಸ್ಪಷ್ಟನೆ

ಬಯಲಾಯಿತು ಕೆಲವು ಪತ್ರಿಕೆಗಳ ಸುಳ್ಳು ಸುದ್ದಿಯ ಬಂಡವಾಳ

ವಾರ್ತಾಭಾರತಿವಾರ್ತಾಭಾರತಿ16 May 2020 4:35 PM IST
share
ಭಟ್ಕಳದ ಕುಟುಂಬ ದಾಖಲಾತಿ ಸಂದರ್ಭದಲ್ಲಿ ಸುಳ್ಳು ಮಾಹಿತಿ ನೀಡಿಲ್ಲ : ತೇಜಸ್ವಿನಿ ಆಸ್ಪತ್ರೆ ಸ್ಪಷ್ಟನೆ

ಮಂಗಳೂರು, ಮೇ 16: ಮೂಳೆ ಮುರಿತಕ್ಕೊಳಗಾಗಿ ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಗುವಿನ ಕುಟುಂಬದ ಬಗ್ಗೆ ಕೆಲವು ಮಾಧ್ಯಮಗಳು ಪ್ರಕಟಿಸಿದ್ದ ವರದಿಯು ಕಪೋಲಕಲ್ಪಿತ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ನೀಡಿರುವ ಸ್ಪಷ್ಟನೆಯಲ್ಲಿ ಬಹಿರಂಗಗೊಂಡಿದೆ.

ಭಟ್ಕಳದ ಕುಟುಂಬವೊಂದು ತಮ್ಮ ಮಗುವಿನ ಚಿಕಿತ್ಸೆಗಾಗಿ ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ದಾಖಲಾಗುವಾಗ ನಾವು ಕುಂದಾಪುದಿಂದ ಬಂದಿರುವುದಾಗಿ ಸುಳ್ಳು ಮಾಹಿತಿ ನೀಡಿತ್ತು. ಇದರಿಂದ ಭಟ್ಕಳದಿಂದ ಸೋಂಕಿತರು ಮಂಗಳೂರಿಗೆ ಬಂದು ಕೊರೋನ ಹರಡುವ ಅಪಾಯವಿದೆ. ಹಾಗಾಗಿ ತೇಜಸ್ವಿನಿ ಆಸ್ಪತ್ರೆ ಸಂಪೂರ್ಣ ಸೀಲ್ ಡೌನ್ ಮಾಡಿ ಎಲ್ಲಾ ಸಿಬ್ಬಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು.

ಆದರೆ, ಈ ಸಂಬಂಧ ಪತ್ರಿಕಾ ಪ್ರಟಣೆ ನೀಡಿರುವ ತೇಜಸ್ವಿನಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಎಂ. ಶಾಂತರಾಮ ಶೆಟ್ಟಿಯವರು ಭಟ್ಕಳದ ಕುಟುಂಬ ಆಸ್ಪತ್ರೆಗೆ ದಾಖಲಾತಿ ಸಮಯದಲ್ಲಿ ಅವರು ಯಾವುದೇ ವಿಷಯವನ್ನು ಗೌಪ್ಯವಾಗಿಡದೆ ಆಧಾರ್ ಕಾರ್ಡ್‌ನ್ನು ಕೊಟ್ಟಿದ್ದರು ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ತೇಜಸ್ವಿನಿ ಆಸ್ಪತ್ರೆಯ ಆಡಳಿತ ನಿದೇರ್ಶಕ ಡಾ. ಎಂ ಶಾಂತರಾಮ ಶೆಟ್ಟಿ ಅವರು ನೀಡಿರುವ ಪತ್ರಿಕಾ ಹೇಳಿಕೆ ಇಂತಿದೆ.

''ನಾವು ಈ ಮೂಲಕ ಧೃಡಪಡಿಸುವುದೇನೆಂದರೆ ಮೂರು ದಿವಸಗಳ ಮುಂಚೆ ಭಟ್ಕಳದ ಆರು ವರ್ಷ ವಯಸ್ಸಿನ ಬಾಲಕಿಯು ಮೊಣಕೈಯ ಎಲುಬು ಮುರಿತದ ಒಟ್ಟಿಗೆ ರಕ್ತನಾಳಕ್ಕು ಪೆಟ್ಟಾಗಿ ರಕ್ತ ಚಲನೆಯಿಲ್ಲದೆ ತುರ್ತು ಚಿಕಿತ್ಸೆಗಾಗಿ ಬಾಲಕಿ ಮತು ಆಕೆಯ ತಾಯಿ ಮೇ 11ರಂದು ಬೆಳಗಿನ ಜಾವ 5 ಗಂಟೆಗೆ ಮಂಗಳೂರಿನ ನಮ್ಮ ಆಸ್ಪತ್ರೆಗೆ (ತೇಜಸ್ವಿನಿ ಆಸ್ಪತ್ರೆ) ದಾಖಲಾಗಿದ್ದು ಅದೇ ದಿನ ಬೆಳಗ್ಗೆ ತುರ್ತು ಶಸ್ತ್ರ ಚಿಕಿತ್ಸೆಯನ್ನು (Closed Reduction and K-wire fixation) ಮಾಡಲಾಯಿತು.

ಭಟ್ಕಳವು ಕೊರೋನ hotspot ಪ್ರದೇಶವಾಗಿದ್ದು ಅಲ್ಲಿ ಸುಮಾರು 10-12 ಕೊರೋನ ಕೇಸ್‌ಗಳು ಪತ್ತೆಯಾಗಿರುವುದರಿಂದ ಹಾಗೂ ತಾಯಿ ಮಗಳು ಅದೇ ಪ್ರದೇಶದವರಾಗಿದ್ದರು. ತಾಯಿಯು ಭಾವನಾತ್ಮಕ ಹಾಗೂ ಆತಂಕಗೊಳಗಾಗಿದ್ದರಿಂದ ಅವರು ಸ್ವಲ್ಪಮಟ್ಟಿನ ಶ್ವಾಸೇಂದ್ರಿಯ ಲಕ್ಷಣಗಳನ್ನು ಹೊಂದಿದ್ದರು. ಈ ವಿಷಯವನ್ನು ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಯಿತು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳು ತಾಯಿ ಮತ್ತು ಮಗುವಿನ ಗಂಟಲಿನ ದ್ರವ ಮಾದರಿ ಪರೀಕ್ಷೆ ಮಾಡಲು ತಿಳಿಸಿದ್ದರು. ಹಾಗೆಯೇ ತಾಯಿ ಹಾಗೂ ಮಗುವಿನ ಗಂಟಲ ಮಾದರಿಯನ್ನು ಮೇ 11 ರಂದು ಸಂಜೆ ಜಿಲ್ಲಾ ಆಡಳಿತ ಆಸ್ಪತ್ರೆ ಸಿಬ್ಬಂದಿ ತೆಗೆದು ಕೊಂಡು ಹೋಗಿರುತ್ತಾರೆ.

ಆಸ್ಪತ್ರೆಗೆ ದಾಖಲಾತಿ ಸಮಯದಲ್ಲಿ ಅವರು ಯಾವುದೇ ವಿಷಯವನ್ನು ಗೌಪ್ಯವಾಗಿಡದೆ ಆಧಾರ್ ಕಾರ್ಡ್‌ನ್ನು ಕೊಟ್ಟಿದ್ದರು. ಮೇ 13 ರಂದು ಬಂದ ಮೇಲೆ ವೆನ್ಲಾಕ್ ಆಸ್ಪತ್ರೆಯ ವರದಿಯ ಪ್ರಕಾರ ತಾಯಿ ಮತ್ತು ಮಗುವಿನ ದ್ರವ ಮಾದರಿ ವರದಿಗಳು (Report) ನಕರಾತ್ಮಕ (Negative) ಆಗಿರುತ್ತದೆ. ಇಷ್ಟರಲ್ಲಿಯೇ ಮಗು ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಳು ಹಾಗೂ ನಾಡಿ ಮಿಡಿತವು ಮರಳಿತ್ತು. ಮೇ 13 ರಂದು ಸಂಜೆ ಮಗು ಮತ್ತು ತಾಯಿಯನ್ನು ಆಸ್ಪತ್ರೆಯಿಂದ ಬಿಡುಗಡೆ (Discharge) ಮಾಡಲಾಯಿತು''.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X