Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವಸಂಸ್ಥೆಗೆ ನೀಡಬೇಕಾದ ದೇಣಿಗೆ...

ವಿಶ್ವಸಂಸ್ಥೆಗೆ ನೀಡಬೇಕಾದ ದೇಣಿಗೆ ಪಾವತಿಸಿ: ಅಮೆರಿಕಕ್ಕೆ ಚೀನಾ ಕರೆ

ವಾರ್ತಾಭಾರತಿವಾರ್ತಾಭಾರತಿ16 May 2020 8:40 PM IST
share
ವಿಶ್ವಸಂಸ್ಥೆಗೆ ನೀಡಬೇಕಾದ ದೇಣಿಗೆ ಪಾವತಿಸಿ: ಅಮೆರಿಕಕ್ಕೆ ಚೀನಾ ಕರೆ

ವಿಶ್ವಸಂಸ್ಥೆ (ನ್ಯೂಯಾರ್ಕ್), ಮೇ 16: ವಿಶ್ವಸಂಸ್ಥೆಗೆ ದೇಣಿಗೆ ನೀಡುವ ತಮ್ಮ ಬದ್ಧತೆಗಳನ್ನು ಸದಸ್ಯ ರಾಷ್ಟ್ರಗಳು ಈಡೇರಿಸಬೇಕು ಎಂಬುದಾಗಿ ಕರೆನೀಡುವ ಹೇಳಿಕೆಯೊಂದನ್ನು ಚೀನಾ ಶುಕ್ರವಾರ ಹೊರಡಿಸಿದೆ. ಅದೇ ವೇಳೆ, ಅಮೆರಿಕವು ವಿಶ್ವಸಂಸ್ಥೆಗೆ ಎರಡು ಬಿಲಿಯ ಡಾಲರ್ (ಸುಮಾರು 15,175 ಕೋಟಿ ರೂಪಾಯಿ) ಮೊತ್ತವನ್ನು ಬಾಕಿಯಿರಿಸಿದೆ ಎಂಬುದಾಗಿಯೂ ಅದು ಹೇಳಿದೆ.

ಮೇ 14ರ ವೇಳೆಗೆ, ವಿಶ್ವಸಂಸ್ಥೆಯ ಸಾಮಾನ್ಯ ಬಜೆಟ್ ಮತ್ತು ಶಾಂತಿಪಾಲನಾ ಬಜೆಟ್‌ಗೆ ಸದಸ್ಯ ದೇಶಗಳಿಂದ ಬರಬೇಕಾಗಿರುವ ಬಾಕಿ ಮೊತ್ತವು ಕ್ರಮವಾಗಿ 1.63 ಬಿಲಿಯ ಡಾಲರ್ (ಸುಮಾರು 12,370 ಕೋಟಿ ರೂಪಾಯಿ) ಮತ್ತು 2.14 ಬಿಲಿಯ ಡಾಲರ್ (ಸುಮಾರು 16,240 ಕೋಟಿ ರೂಪಾಯಿ) ಆಗಿದೆ ಎಂದು ಚೀನಾದ ಹೇಳಿಕೆ ತಿಳಿಸಿದೆ.

ವಿಶ್ವಸಂಸ್ಥೆ ಮಹಾಕಾರ್ಯದರ್ಶಿಯ ಕಚೇರಿ ಬಿಡುಗಡೆ ಮಾಡಿದ ವರದಿ ಮತು ಗುರುವಾರ ನಡೆದ ವಿಶ್ವಸಂಸ್ಥೆಯ ಸಭೆಯೊಂದರ ನಿರ್ಣಯಗಳ ಆಧಾರದಲ್ಲಿ ಚೀನಾ ಈ ಹೇಳಿಕೆ ಬಿಡುಗಡೆ ಮಾಡಿದೆ.

 ಹಲವಾರು ವರ್ಷಗಳ ಬಾಕಿ ಇಟ್ಟಿರುವ ಅಮೆರಿಕವು ಅತಿ ಹೆಚ್ಚಿನ ಬಾಕಿದರ ದೇಶವಾಗಿದೆ . ಅದು ಕ್ರಮವಗಿ 1.165 ಬಿಲಿಯ ಡಾಲರ್ (ಸುಮಾರು 8,840 ಕೋಟಿ ರೂಪಾಯಿ) ಮತ್ತು 1.332 ಬಿಲಿಯ ಡಾಲರ್ (ಸುಮಾರು 10,107 ಕೋಟಿ ರೂಪಾಯಿ) ಬಾಕಿಗಳನ್ನು ಪಾವತಿಸಬೇಕಾಗಿದೆ ಎಂದು ಚೀನಾ ಹೇಳಿದೆ.

ಅಮೆರಿಕವು ವಿಶ್ವಸಂಸ್ಥೆಯ ದೊಡ್ಡ ದೇಣಿಗೆದಾರ ದೇಶವಾಗಿದೆ. ಅದು ವಿಶ್ವಸಂಸ್ಥೆಯ ನಿರ್ವಹಣಾ ವೆಚ್ಚದ ಸುಮಾರು 22 ಶೇಕಡದಷ್ಟನ್ನು ಹಾಗೂ ಶಾಂತಿಪಾಲನಾ ಕಾರ್ಯಾಚರಣೆಗಳ ಸುಮಾರು 25 ಶೇಕಡದಷ್ಟನ್ನು ಪಾವತಿಸುತ್ತದೆ. ವಿಶ್ವಸಂಸ್ಥೆಯ ನಿರ್ವಹಣಾ ವೆಚ್ಚವು ಸುಮಾರು 3 ಬಿಲಿಯ ಡಾಲರ್ (ಸುಮಾರು 22,763 ಕೋಟಿ ರೂಪಾಯಿ)ನಷ್ಟಾದರೆ, ಶಾಂತಿಪಾಲನಾ ಕಾರ್ಯಾಚರಣೆಗಳ ವೆಚ್ಚವು ವರ್ಷಕ್ಕೆ 6 ಬಿಲಿಯ ಡಾಲರ್ (45,526 ಕೋಟಿ ರೂಪಾಯಿ)ನಷ್ಟಾಗುತ್ತದೆ.

ಚೀನಾದಿಂದ ಗಮನ ಬೇರೆಡೆಗೆ ಸೆಳೆಯುವ ತಂತ್ರ: ಅಮೆರಿಕ

ವಿಶ್ವಸಂಸ್ಥೆಯ ಬಾಕಿಯನ್ನು ಪಾವತಿಸುವಂತೆ ಚೀನಾ ಮಾಡಿರುವ ಮನವಿಯನ್ನು ಅಮೆರಿಕ ತಳ್ಳಿಹಾಕಿದೆ. ಕೋವಿಡ್-19 ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿನ ತನ್ನ ವೈಫಲ್ಯ ಮತ್ತು ಮುಚ್ಚಿಹಾಕಲು ತಾನು ನಡೆಸಿದ ಪ್ರಯತ್ನಗಳಿಂದ ವಿಶ್ವದ ಗಮನವನ್ನು ಬೇರೆಡೆಗೆ ಸೆಳೆಯಲು ಚೀನಾ ಉತ್ಸುಕವಾಗಿದೆ. ಇದು ಅದರ ಇನ್ನೊಂದು ಉದಾಹರಣೆಯಾಗಿದೆ ಎಂದು ವಿಶ್ವಸಂಸ್ಥೆಯಲ್ಲಿನ ಅಮೆರಿಕದ ರಾಯಭಾರ ಕಚೇರಿ ತಿರುಗೇಟು ನೀಡಿದೆ.

ವಿಶ್ವಸಂಸ್ಥೆಯ ಶಾಂತಿಪಾಲನಾ ಚಟುವಟಿಕೆಗಳಿಗೆ ಅಮೆರಿಕವು ಇತ್ತೀಚೆಗೆ 726 ಮಿಲಿಯ ಡಾಲರ್ (ಸುಮಾರು 5,500 ಕೋಟಿ ರೂಪಾಯಿ) ನೀಡಿದೆ ಹಾಗೂ ಎಂದಿನಂತೆ ತನ್ನೆಲ್ಲ ದೇಣಿಗೆಯನ್ನು ಕ್ಯಾಲೆಂಡರ್ ವರ್ಷದ ಅಂತ್ಯದ ವೇಳೆಗೆ ಒಟ್ಟಾಗಿ ಪಾವತಿಸಲಿದೆ ಎಂದು ಅದು ಹೇಳಿದೆ.

ಡಬ್ಲ್ಯುಎಚ್‌ಒಗೆ ಆಂಶಿಕ ದೇಣಿಗೆ ನೀಡಲು ಅಮೆರಿಕ ನಿರ್ಧಾರ?

ವಿಶ್ವ ಆರೋಗ್ಯ ಸಂಸ್ಥೆಗೆ ನೀಡಬೇಕಾಗಿರುವ ದೇಣಿಗೆಯ ಒಂದು ಭಾಗವನ್ನು ನೀಡಲು ಅಮೆರಿಕ ಸರಕಾರ ನಿರ್ಧರಿಸಿದೆ ಎಂದು ಫಾಕ್ಸ್ ನ್ಯೂಸ್ ಶುಕ್ರವಾರ ವರದಿ ಮಾಡಿದೆ.

ವಿಶ್ವ ಆರೋಗ್ಯ ಸಂಸ್ಥೆಗೆ ಚೀನಾ ನೀಡುವಷ್ಟು ಪ್ರಮಾಣದ ದೇಣಿಗೆಯನ್ನು ನೀಡಲು ಅಮೆರಿಕದ ಟ್ರಂಪ್ ಆಡಳಿತವು ಒಪ್ಪಿಕೊಂಡಿದೆ ಎಂದು ಕರಡು ಪತ್ರವೊಂದನ್ನು ಉಲ್ಲೇಖಿಸಿ ಸುದ್ದಿ ಚಾನೆಲ್ ವರದಿ ಮಾಡಿದೆ.

ಕೊರೋನ ವೈರಸ್ ಸಾಂಕ್ರಾಮಿಕದ ವಿಷಯದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಚೀನಾದ ಕೈಗೊಂಬೆಯಾಗಿದೆ ಹಾಗೂ ಅದು ಚೀನಾ ಪರವಾದ ಧೋರಣೆಯನ್ನು ಹೊಂದಿದೆ ಎಂದು ಆರೋಪಿಸಿ ವಿಶ್ವ ಆರೋಗ್ಯ ಸಂಸ್ಥೆಗೆ ಅಮೆರಿಕ ನೀಡಬೇಕಾಗಿರುವ ದೇಣಿಗೆಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಪ್ರಿಲ್ 14ರಂದು ರದ್ದು ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X