Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರ: ತಮ್ಮ ಜಮೀನಿಗಾಗಿ ಕಾನೂನು...

ಮಹಾರಾಷ್ಟ್ರ: ತಮ್ಮ ಜಮೀನಿಗಾಗಿ ಕಾನೂನು ಹೋರಾಟ ನಡೆಸಿದ ಮೂವರು ದಲಿತರ ಬರ್ಬರ ಹತ್ಯೆ

12 ಮಂದಿ ಆರೋಪಿಗಳ ಬಂಧನ, 8 ಮಂದಿ ಶಂಕಿತರು ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ16 May 2020 9:26 PM IST
share
ಮಹಾರಾಷ್ಟ್ರ: ತಮ್ಮ ಜಮೀನಿಗಾಗಿ ಕಾನೂನು ಹೋರಾಟ ನಡೆಸಿದ ಮೂವರು ದಲಿತರ ಬರ್ಬರ ಹತ್ಯೆ

ಮುಂಬೈ, ಮೇ 16: ಪ್ರಬಲ ಸಮುದಾಯದವರ ಹಿಡಿತದಲ್ಲಿದ್ದ ತಮ್ಮ ಜಮೀನನ್ನು ಮರಳಿ ಪಡೆಯಲು ಎರಡು ದಶಕಗಳಿಂದ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ಕುಟುಂಬದ ಮೂವರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಂಗ್ವಾಡ್‌ಗಾಂವ್ ಗ್ರಾಮದಲ್ಲಿ ನಡೆದಿದೆ.

ಹತ್ಯೆಯಾದವರನ್ನು ಪರಿಶಿಷ್ಟ ಪಂಗಡವಾದ ಪರ್ದಿ ಬುಡಕಟ್ಟಿಗೆ ಸೇರಿದ ಬಾಬುಪವಾರ್ ಹಾಗೂ ಆತನ ಇಬ್ಬರು ಪುತ್ರರೆಂಬುದಾಗಿ ಗುರುತಿಸಲಾಗಿದೆ.

ಬಾಬುಪವಾರ್ ಹಾಗೂ ಆತನ ಕುಟುಂಬಕ್ಕೆ ಸೇರಿದ್ದ 3.5 ಎಕರೆ ಜಮೀನು , ಪ್ರಬಲ ಮರಾಠ ಸಮುದಾಯದ ಸಚಿನ್ ಹಾಗೂ ಹನುಮಂತ ನಿಂಬಾಳ್ಕರ್ ಅವರ ವಶದಲ್ಲಿತ್ತು. ಅದನ್ನು ಬಿಡಿಸಿಕೊಳ್ಳಲು ಬಾಬುಪವಾರ್ ಕಳೆದ ಎರಡು ದಶಕಗಳಿಂದ ಕಾನೂನು ಹೋರಾಟ ನಡೆಸುತ್ತಾ ಬಂದಿದ್ದರು. ಈ ದೀರ್ಘಕಾಲದ ಕಾನೂನು ಹೋರಾಟದ ವೇಳೆ ಪವಾರ್ ಕುಟುಂಬವನ್ನು ಪ್ರಬಲ ಸಮುದಾಯದವರು ಗ್ರಾಮದಿಂದ ಹೊರಹಾಕಿದ್ದರು. ಇದರಿಂದಾಗಿ ಆತ ತನ್ನ ಕುಟುಂಬಿಕರೊಂದಿಗೆ 40 ಕಿ.ಮೀ. ದೂರದ ಅಂಬೆಜೊಗಾಯ್‌ನಲ್ಲಿ ವಾಸವಾಗಿದ್ದನು.

ಮೇ 13ರಂದು ಬಾಬು ಪವಾರ್ ಹಾಗೂ ಆತನ ಮಕ್ಕಳು ತಮ್ಮ ಕುಟುಂಬದ 27 ಮಂದಿಯೊಂದಿಗೆ ಧೈರ್ಯ ಮಾಡಿಕೊಂಡು, ಸ್ವಗ್ರಾಮಕ್ಕೆ ಹಿಂತಿರುಗಿದ್ದರು. ಅವರ ಹಿಂತಿರುಗಿದ ಬೆನ್ನಲ್ಲೇ, ಆರೋಪಿಗಳು ತಮ್ಮ ಕುಟುಂಬದ ಹಾಗೂ ಸ್ವಜಾತಿಯ ಜನರನ್ನು ಒಗ್ಗೂಡಿಸಿಕೊಂಡು, ಪವಾರ್ ಕುಟುಂಬಿಕರ ಮೇಲೆ ಹಲ್ಲೆ ನಡೆಸಿತು. ‘‘ನಾವು ಸಂಜೆ 7:30 ಗಂಟೆಗೆ ಹಳ್ಳಿಗೆ ವಾಪಸಾದೆವು. ಆದರೆ ಒಂದುಗಂಟೆಯೊಳಗೆ ತಲವಾರು ಹಾಗೂ ಕುಡುಗೋಲುಗಳನ್ನು ಹಿಡಿದುಕೊಂಡು ಟ್ರಾಕ್ಟರ್‌ಗಳಲ್ಲಿ ಧಾವಿಸಿ ಬಂದ ಆರೋಪಿಗಳು ತಮ್ಮ ಮೇಲೆ ದಾಳಿ ನಡೆಸಿದರು. ಅವರು ಎಲ್ಲರನ್ನೂ ಕಡಿದುಕೊಲ್ಲುವವರಿದ್ದರು, ಆದರೆ ಅದೃಷ್ಟವಶಾತ್ ನಾವು ನಮ್ಮ ಹೊಲದಿಂದ ಪರಾರಿಯಾಗುವಲ್ಲಿ ಸಫಲರಾದೆವು’’ ಎಂದು ಶಿವಾಜಿ ಎಂಬಾತ ಹೇಳಿದ್ದಾನೆ.

  ಬಾಬು ಪವಾರ್ ಹಾಗೂ ಆತನ ಇಬ್ಬರು ಪುತ್ರರನ್ನು ಆರೋಪಿಗಳು ಟ್ರಾಕ್ಟರ್ ಒಂದರ ಕೆಳಗೆ ದೂಡಿದರು ಹಾಗೂ ಅವರಿಗೆ ಚೂರಿ ಹಾಗೂ ತಲವಾರುಗಳಿಂದ ಹಲವಾರು ಬಾರಿ ಇರಿದು ಕೊಂದಿದ್ದಾರೆ. ಮೂವರ ಮೃತದೇಹಗಳು ಛಿದ್ರವಿಛಿದ್ರವಾದ ಸ್ಥಿತಿಯಲ್ಲಿ ಗ್ರಾಮದ ವಿವಿಧೆಡೆ ಪತ್ತೆಯಾಗಿವೆ. ದಾಳಿಯಲ್ಲಿ ಮಹಿಳೆ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಅವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿಗಳು, ದಾಳಿಗೊಳಗಾದವರಿಗೆ ಸೇರಿದ ಬೈಕ್ ಮತ್ತಿತರ ಸೊತ್ತುಗಳನ್ನು ಕೂಡಾ ಬೆಂಕಿ ಹಚ್ಚಿ ನಾಶಪಡಿಸಿದ್ದಾರೆ.

 ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 12 ಮಂದಿಯನ್ನು ಬಂಧಿಸಿದ್ದು ಅವರಲ್ಲಿ ಆರು ಮಂದಿ ನಾಪತ್ತೆಯಾಗಿದ್ದಾರೆ. ಗ್ರಾಮ ಸರಪಂಚ ಹಾಗೂ ಉಪಸರಪಂಚ ಸೇರಿದಂತೆ ಏಳು ಮಂದಿ ಶಂಕಿತರನ್ನು ಕೂಡಾ ಪೊಲೀರು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತರ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್‌ಗಳಾದ 302 (ಕೊಲೆ) ಹಾಗೂ 307 (ಕೊಲೆ ಯತ್ನ) ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X