Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ...

ಓ ಮೆಣಸೇ...

ಪಿ.ಎ.ರೈಪಿ.ಎ.ರೈ17 May 2020 10:58 PM IST
share
ಓ ಮೆಣಸೇ...

  ಕೊರೋನ ಹೋರಾಟದಲ್ಲಿ ಕೊನೆಯ ಗೆಲುವು ಮನುಕುಲದ್ದಾಗಬೇಕು
 - ರಮೇಶ್ ಜಾರಕಿಹೊಳಿ, ಸಚಿವ
 ಮನುಕುಲದೊಳಗೆ ವಲಸೆ ಕಾರ್ಮಿಕರು ಬರುತ್ತಾರೆಯೇ?


 ವಿದೇಶಗಳಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ತರಿಸಿಕೊಳ್ಳಲು ನಾವೇನು ಪ್ರಪಂಚದಾದ್ಯಂತ ದಂಡಯಾತ್ರೆ ಕೈಗೊಳ್ಳುತ್ತಿಲ್ಲ
 - ಜ.ಬಿಪಿನ್ ರಾವತ್, ರಕ್ಷಣಾ ಪಡೆಗಳ ಮುಖ್ಯಸ್ಥ

ದೇಶದ ಜನರ ವಿರುದ್ಧ ಬಳಸಲು ಅಗತ್ಯ ಬೀಳಬಹುದು.


ವರ್ಗಾವಣೆ ದಂಧೆಯಲ್ಲಿ ತೊಡಗಿರುವ ಸರಕಾರ ಜನರ ಕಿವಿಗೆ ಹೂಮುಡಿಸುವ, ಟೋಪಿ ಹಾಕುವ ಕೆಲಸ ಮಾಡುತ್ತಿದೆ
 - ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಟೋಪಿ ಮತ್ತು ಹೂವುಗಳ ಹೆಸರಿನಲ್ಲಿ ಹೆಚ್ಚುವರಿ ತೆರಿಗೆ ಸಂಗ್ರಹಿಸುವ ಉದ್ದೇಶವಿದೆಯಂತೆ.


ಚೆಂಡಿನ ಹೊಳಪು ಉಳಿಸಿಕೊಳ್ಳಲು ಎಂಜಲು, ಬೆವರಿನ ಬಳಕೆಯನ್ನು ನಿಷೇಧಿಸಿದರೆ ಟೆಸ್ಟ್ ಕ್ರಿಕೆಟ್ ಮಾದರಿಯು ಸೊರಗುವುದು ಖಚಿತ - ಪ್ಯಾಟ್ ಕಮಿನ್ಸ್, ಆಸ್ಟ್ರೇಲಿಯ ಬೌಲರ್
ಕ್ರಿಕೆಟ್‌ನ್ನು ನಿಷೇಧಿಸಿದರೆ ಚೆಂಡಿನ ಹೊಳಪನ್ನು ಉಳಿಸಿಕೊಳ್ಳಬಹುದಲ್ಲವೇ?


ಮದ್ಯದಂಗಡಿ ತೆರೆದರೆ ಮತ್ತೆ ಎಐಎಡಿಎಂಕೆ ಸರಕಾರ ಅಧಿಕಾರಕ್ಕೆ ಬರುವುದಿಲ್ಲ - ರಜನಿಕಾಂತ್, ನಟ

ಮುಚ್ಚಿದರೆ ಅಧಿಕಾರಕ್ಕೆ ಬಂದ ಸರಕಾರ ಉಳಿಯುವುದಿಲ್ಲವಂತೆ.


ಕಾರ್ಮಿಕ ಹಕ್ಕುಗಳ ದಮನಕ್ಕೆ ಕೊರೋನ ನೆಪವಾಗಬಾರದು - ರಾಹುಲ್‌ಗಾಂಧಿ, ಕಾಂಗ್ರೆಸ್ ನಾಯಕ
ಬೇರೆ ಯಾವ ನೆಪವಾದರೂ ನಡೆಯುತ್ತದೆ ಎಂದಾಯಿತು.


ಮದ್ಯಕ್ಕೆ ಅಧಿಕ ದರ ವಸೂಲು ಮಾಡಿದ ದೂರು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು - ಕೋಟ ಶ್ರೀನಿವಾಸ ಪೂಜಾರಿ, ಸಚಿವ

  ದೂರು ನೀಡಿದವರ ವಿರುದ್ಧ ಇರಬಹುದೇ? 


ರಾಜ್ಯ ಸರಕಾರಕ್ಕೆ ಅರ್ಚಕರ ಶಾಪ ತಟ್ಟಿದೆ - ಎಚ್.ಡಿ.ರೇವಣ್ಣ, ಮಾಜಿ ಸಚಿವ

ವಲಸೆ ಕಾರ್ಮಿಕರ ಶಾಪ ಅರ್ಚಕರಿಗೆ ತಟ್ಟಿರುವ ಸಾಧ್ಯತೆಗಳಿವೆ.


ಮದ್ಯ ಮಾರಾಟ ನಿಷೇಧಕ್ಕೆ ಇದು ಸಕಾಲ - ರಾಜುಗೌಡ, ಶಾಸಕ

ಮದ್ಯ ಮಾರಾಟಕ್ಕೆ ಇದು ಸಕಾಲ ಎಂದು ಸರಕಾರ ಭಾವಿಸಿದೆ.


ಸದ್ಯದ ಪರಿಸ್ಥಿತಿಯಲ್ಲಿ ನಮಗೆ ಕೊರೋನ ವೈರಸ್ ಮೇಲೆ ದ್ವೇಷವೇ ಹೊರತು, ಬೇರೆ ಯಾರ ಮೇಲೂ ಅಲ್ಲ - ಕೋಟ ಶ್ರೀನಿವಾಸ ಪೂಜಾರಿ, ಸಚಿವ
ಕೊರೋನಾ ವೈರಸ್ ಬರುವ ಮೊದಲು ನಮ್ಮ ನಡುವೆ ದ್ವೇಷ ಇರಲಿಲ್ಲವೇ?


ಕೊರೋನ ವೈರಸ್ ಸುದೀರ್ಘ ಕಾಲ ನಮ್ಮ ಬದುಕಿನ ಭಾಗವಾಗಿರಲಿದೆ - ನರೇಂದ್ರ ಮೋದಿ, ಪ್ರಧಾನಿ
 ಅದನ್ನು ಹೆಮ್ಮೆಯಿಂದ ಹೇಳುತ್ತಿದ್ದೀರಿ ಯಾಕೆ?


2020ಕ್ಕೆ 20ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಅದ್ಭುತ - ಬಿ.ಎಲ್.ಸಂತೋಷ್, ಬಿಜೆಪಿ ರಾ.ಪ್ರ.ಕಾರ್ಯದರ್ಶಿ
ಹೌದು, ಹಣವೇ ಇಲ್ಲವೆನ್ನುವುದು ವಿಶ್ವಕ್ಕೇ ಗೊತ್ತಿದ್ದರೂ ಪ್ಯಾಕೇಜ್ ಘೋಷಣೆ ಮಾಡುವುದು ಅದ್ಭುತವಲ್ಲದೆ ಇನ್ನೇನು?


ಕನ್ನಡದ ಕೆಲಸವನ್ನು ಮಾಡಲು ಸರಕಾರ ಅನುದಾನ ನೀಡದಿದ್ದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ರದ್ದು ಮಾಡುವುದು ಒಳ್ಳೆಯದು - ಮುಖ್ಯಮಂತ್ರಿ ಚಂದ್ರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ

ಅನುದಾನ ನೀಡುವುದಕ್ಕಾಗಿಯೇ ಬಾರ್‌ಗಳನ್ನು ತೆರೆಸಲಾಗಿದೆಯಂತೆ, ಸ್ವಲ್ಪ ಕಾಯಿರಿ.


ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಿದರೆ ಕ್ರಿಮಿನಲ್ ಕೇಸು ದಾಖಲು ಮಾಡಲಾಗುವುದು -ಶ್ರೀರಾಮುಲು, ಸಚಿವ
ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡುವುದಕ್ಕಾಗಿಯೇ ಖಾಸಗಿ ಆಸ್ಪತ್ರೆಗಳನ್ನು ತೆರೆಯಲಾಗಿದೆಯಂತೆ. 


ಸದ್ಯದ ಪರಿಸ್ಥಿತಿಯಲ್ಲಿ ಯಾರೂ ಪ್ರವಾಸಕ್ಕೆ ಹೊರಡುವ ಮನಸ್ಥಿತಿಯಲ್ಲಿ ಇಲ್ಲ - ಸಿ.ಟಿ.ರವಿ, ಸಚಿವ

ಮನೆ ಕಡೆಗೆ ಹೊರಟಿರುವ ವಲಸೆ ಕಾರ್ಮಿಕರ ಕಡೆಗೊಮ್ಮೆ ನೋಡಿ.


ಸಿದ್ದರಾಮಯ್ಯ, ಡಿಕೆಶಿ ಮತ್ತು ಕುಮಾರಸ್ವಾಮಿಯವರಿಗೆ ಈಗ ಮಾಡಲು ಬೇರೆ ಕೆಲಸ ಇಲ್ಲ, ಹಾಗಾಗಿ ಸರಕಾರವನ್ನು ಟೀಕಿಸುತ್ತಿದ್ದಾರೆ - ಜಗದೀಶ್ ಶೆಟ್ಟರ್, ಸಚಿವ
ಟೀಕಿಸುವುದು ವಿರೋಧಪಕ್ಷದ ಕೆಲಸವೇ ಅಲ್ಲವೇ?


ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಚಿವರು, ಸರಕಾರಿ ಅಧಿಕಾರಿಗಳು ಮತ್ತು ನೌಕರರು ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು - ಎಚ್.ವಿಶ್ವನಾಥ್, ಮಾಜಿ ಸಚಿವ

ಅನರ್ಹ ಶಾಸಕರಿಗಾಗಿ ವೆಚ್ಚ ಮಾಡುವ ಹಣವನ್ನು ಕಡಿತಗೊಳಿಸಿದರೆ ತುಂಬಾ ಉಳಿತಾಯವಾದೀತು.


ಗ್ರಾಮೀಣ ಗುಡಿ ಕೈಗಾರಿಕೆಗಳಿಗೆ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ನಿಂದ ಭಾರೀ ಉತ್ತೇಜನ ದೊರೆಯಲಿದೆ - ನಿತಿನ್ ಗಡ್ಕರಿ, ಕೇಂದ್ರ ಸಚಿವ
ಆ ಕೈಗಾರಿಕೆಗಳು ಎಲ್ಲಿವೆ ಎನ್ನುವುದನ್ನು ಮೊದಲು ವಿವರಿಸಿ.


ಕಾನೂನು ಬದ್ಧವಾದ ನಮ್ಮ ಮದ್ಯ ವ್ಯವಹಾರದ ಮೇಲೆ ಯಾಕೆ ಎಲ್ಲರ ಕಣ್ಣು? -ಗೋವಿಂದ ರಾಜ ಹೆಗ್ಡೆ, ಪ್ರ.ಕಾ. ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ

ಕಾನೂನು ಬದ್ಧವಾದುದೆಲ್ಲವೂ ನ್ಯಾಯಕ್ಕೆ ಬದ್ಧವಾಗಿರುವುದಿಲ್ಲ.


ಭಾರತದ ಜೈಲುಗಳಲ್ಲಿ ಇಲಿಗಳಿವೆ. ನನ್ನನ್ನು ಗಡಿಪಾರು ಮಾಡಬೇಡಿ - ನೀರವ್ ಮೋದಿ, ಉದ್ಯಮಿ

ಹೀಗೆಂದು ಹೆಗ್ಗಣದ ಮನವಿ.


ಹಸಿರು ಶಾಲು ಹಾಕಿಸಿಕೊಂಡು ಪ್ರಮಾಣವಚನ ಸ್ವೀಕರಿಸಿರುವ ನಾನು ರೈತರ ಹಿತಕ್ಕೆ ಧಕ್ಕೆಯಾದರೆ ಒಂದು ಕ್ಷಣವೂ ಸಿಎಂ ಸ್ಥಾನದಲ್ಲಿರುವುದಿಲ್ಲ - ಯಡಿಯೂರಪ್ಪ, ಮುಖ್ಯಮಂತ್ರಿ
ಹಸಿರು ಶಾಲಿನ ಬದಲು ಬೇರೆ ಬಣ್ಣದ ಶಾಲನ್ನು ಹಾಕಿ ಹೊಸದಾಗಿ ಪ್ರಮಾಣವಚನ ಮಾಡಿದರೆ ಆಯಿತು 

share
ಪಿ.ಎ.ರೈ
ಪಿ.ಎ.ರೈ
Next Story
X