Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇ 1ರಿಂದ ಶ್ರಮಿಕ್ ರೈಲಿನ ಮೂಲಕ 17...

ಮೇ 1ರಿಂದ ಶ್ರಮಿಕ್ ರೈಲಿನ ಮೂಲಕ 17 ಲಕ್ಷಕ್ಕೂ ಅಧಿಕ ವಲಸೆ ಕಾರ್ಮಿಕರ ಪ್ರಯಾಣ

ವಾರ್ತಾಭಾರತಿವಾರ್ತಾಭಾರತಿ18 May 2020 8:24 PM IST
share
ಮೇ 1ರಿಂದ ಶ್ರಮಿಕ್ ರೈಲಿನ ಮೂಲಕ 17 ಲಕ್ಷಕ್ಕೂ ಅಧಿಕ ವಲಸೆ ಕಾರ್ಮಿಕರ ಪ್ರಯಾಣ

ಹೊಸದಿಲ್ಲಿ, ಮೇ 18: ಮೇ 1ರಿಂದ 1,300 ಶ್ರಮಿಕ್ ವಿಶೇಷ ರೈಲುಗಳನ್ನು ಓಡಿಸಿದ್ದು 17 ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಅವರ ಊರಿಗೆ ಕರೆದೊಯ್ದಿದೆ. ಕಳೆದ ಮೂರು ದಿನಗಳಲ್ಲೇ, ಪ್ರತೀ ದಿನ 2 ಲಕ್ಷಕ್ಕೂ ಅಧಿಕ ಕಾರ್ಮಿಕರು ಪ್ರಯಾಣಿಸಿದ್ದಾರೆ ಎಂದು ರೈಲ್ವೇ ಮಂಡಳಿ ಹೇಳಿದೆ.

ಮುಂದಿನ ದಿನಗಳಲ್ಲಿ ಪ್ರತೀ ದಿನ 3 ಲಕ್ಷ ಪ್ರಯಾಣಿಕರು ಶ್ರಮಿಕ್ ವಿಶೇಷ ರೈಲಿನಲ್ಲಿ ಪ್ರಯಾಣಿಸುವ ನಿರೀಕ್ಷೆಯಿದೆ. ಇದುವರೆಗೆ ಉತ್ತರಪ್ರದೇಶದಿಂದ 500ಕ್ಕೂ ಅಧಿಕ ಶ್ರಮಿಕ್ ರೈಲುಗಳು ಕಾರ್ಯಾಚರಿಸಿದ್ದರೆ, ಬಿಹಾರದಿಂದ ಸುಮಾರು 300 ರೈಲುಗಳು ಸಂಚರಿಸಿವೆ ಎಂದು ರೈಲ್ವೇಯ ವಕ್ತಾರರು ಹೇಳಿದ್ದಾರೆ. ಪ್ರತೀ ದಿನ 300ಕ್ಕೂ ಹೆಚ್ಚು ಶ್ರಮಿಕ್ ರೈಲುಗಳನ್ನು ಓಡಿಸುವ ಸಾಮರ್ಥ್ಯ ರೈಲ್ವೇ ಇಲಾಖೆಗಿದೆ. ಆದರೆ ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಜಾರ್ಖಂಡ್‌ನಂತಹ ರಾಜ್ಯಗಳು ಹೆಚ್ಚು ರೈಲು ಓಡಿಸಲು ಅಂಗೀಕಾರ ನೀಡಬೇಕು ಎಂದು ರೈಲ್ವೇ ಸಚಿವ ಪಿಯೂಷ್ ಗೋಯಲ್ ಮನವಿ ಮಾಡಿದ್ದಾರೆ.

ಆರಂಭದಲ್ಲಿ ವಿಶೇಷ ಶ್ರಮಿಕ್ ರೈಲಿನಲ್ಲಿ 1,200 ಪ್ರಯಾಣಿಕರಿಗೆ ಮಾತ್ರ ಅವಕಾಶವಿದ್ದರೆ ಬಳಿಕ ಈ ಪ್ರಮಾಣವನ್ನು 1,700ಕ್ಕೆ ಹೆಚ್ಚಿಸಲಾಗಿದೆ. ವಿಶೇಷ ರೈಲು ಪ್ರಯಾಣಕ್ಕೆ ತಗುಲುವ ವೆಚ್ಚದ ಬಗ್ಗೆ ರೈಲ್ವೇ ಇಲಾಖೆ ಅಧಿಕೃತವಾಗಿ ಮಾಹಿತಿ ನೀಡಿಲ್ಲವಾದರೂ, ಪ್ರತೀ ಪ್ರಯಾಣಕ್ಕೆ ಸುಮಾರು 80 ಲಕ್ಷ ರೂ. ವೆಚ್ಚವಾಗಲಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಆರಂಭದಲ್ಲಿ ಗಮ್ಯತಾಣ(ಅಂತಿಮ ನಿಲ್ದಾಣ) ಹೊರತುಪಡಿಸಿ ಮಧ್ಯದಲ್ಲಿ ನಿಲುಗಡೆ ಇಲ್ಲ ಎಂದು ತಿಳಿಸಿದ್ದರೂ, ಬಳಿಕ ಒಂದು ಪ್ರಯಾಣದಲ್ಲಿ 3 ನಿಲುಗಡೆಗೆ ಅವಕಾಶ ನೀಡಲಾಗಿದೆ. ಶ್ರಮಿಕ್ ರೈಲು ಪ್ರಯಾಣಿಕರಿಗೆ ಟಿಕೆಟ್ ದರ ವಿಧಿಸುವ ವಿಚಾರದಲ್ಲಿ ಕೇಂದ್ರ ಸರಕಾರ ಹಾಗೂ ವಿಪಕ್ಷಗಳ ಮಧ್ಯೆ ರಾಜಕೀಯ ಕೆಸರೆರಚಾಟ ಮುಂದುವರಿದಿದೆ. ಟಿಕೆಟ್ ದರದ ವೆಚ್ಚವನ್ನು ಕೇಂದ್ರ ಹಾಗೂ ರಾಜ್ಯ ಸರಕಾರ 85:15ರ ಅನುಪಾತದಲ್ಲಿ ಭರಿಸಬೇಕು ಎಂದು ಕೇಂದ್ರ ಸರಕಾರ ಸೂಚಿಸಿದೆ. ಆದರೆ ಇದಕ್ಕೆ ಕೆಲವು ರಾಜ್ಯಗಳ ವಿರೋಧವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X