Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಮಳೆ ಹಾನಿಗೆ...

ಬೆಂಗಳೂರಿನಲ್ಲಿ ಮಳೆ ಹಾನಿಗೆ ಮೇಯರ್-ಆಯುಕ್ತರು ನೇರ ಹೊಣೆ: ಆಮ್ ಆದ್ಮಿ ಪಕ್ಷ

ವಾರ್ತಾಭಾರತಿವಾರ್ತಾಭಾರತಿ18 May 2020 5:22 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಬೆಂಗಳೂರು, ಮೇ 18: ಕೊರೋನ ಮಹಾ ಭೀತಿಯ ಪರಿಹಾರ ಕಾರ್ಯಗಳಲ್ಲಿ ಮಗ್ನರಾಗಿ ಮುಂಬರುವ ಮುಂಗಾರಿನಿಂದ ಬೆಂಗಳೂರಿನ ಹಲವು ಭಾಗಗಳು ಹಾನಿಯಾಗಿ ಸಾವು ನೋವುಗಳು ಸಂಭವಿಸುವ ಮುನ್ನೆಚ್ಚರಿಕೆ ಗೊತ್ತಿದ್ದರೂ ಬಿಬಿಎಂಪಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೂನ್ 4 ರಿಂದ  ಮುಂಗಾರು  ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೂ ಕೇವಲ ವಿಪತ್ತು ನಿರ್ವಹಣಾ ಪಡೆಯನ್ನು ಸ್ಥಾಪಿಸಿ, ಕೈಚೆಲ್ಲಿ ಕುಳಿತಿರುವ ಬಿಬಿಎಂಪಿಯಿಂದ ಸರ್ಮರ್ಥ ಆಡಳಿತ ನಿರ್ವಹಣೆ ಇದುವರೆವಿಗೂ ಸಾಧ್ಯವಾಗಿಲ್ಲ ಎಂದು ಅವರು ದೂರಿದ್ದಾರೆ.

ನಗರದಲ್ಲಿ ಮಳೆಯಿಂದ ಹಾನಿಗೆ ಒಳಗಾಗುವ ಸುಮಾರು 211 ತಗ್ಗು ಪ್ರದೇಶಗಳಿವೆ ಎಂಬುದು ಒಂದು ಲೆಕ್ಕಾಚಾರವಾದರೆ ಒಂದು ಸಮೀಕ್ಷೆಯ ಪ್ರಕಾರ ಸುಮಾರು 517 ತಗ್ಗು ಪ್ರದೇಶಗಳಿದ್ದು ಪ್ರತಿ ವರ್ಷ ಮಳೆಗಾಲದಲ್ಲಿ ಕಿರಿಕಿರಿ ಅನುಭವಿಸುತ್ತಲೇ ಇವೆ. ಮನೆ ಮುಳುಗಡೆ, ಮನೆ ಕುಸಿತ, ರಸ್ತೆ ಕುಸಿತ, ನೀರು ನುಗ್ಗುವುದು ಹೀಗೆ ನೂರಾರು ತೊಂದರೆಗಳು ಇದ್ದರು ಬಿಬಿಎಂಪಿ ಎನ್ನುವ ಬೃಹತ್ ಭ್ರಷ್ಟಾಚಾರ ಸಂಸ್ಥೆ ಯುದ್ದ ಕಾಲದಲ್ಲಿ ಮತ್ತೆ ಶಸ್ತ್ರಾಭ್ಯಾಸ ಮಾಡುವುದನ್ನು ಮಾತ್ರ ನಿಲ್ಲಿಸಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಕಾಲರ ರೋಗ ವ್ಯಾಪಕವಾಗಿ ಎಲ್ಲ ಕಡೆ ಹಬ್ಬುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಮಳೆ ನೀರಿನಿಂದ ಉಂಟಾಗುವ ಅವಘಡ ಗಂಭೀರ ಸ್ವರೂಪ ಪಡೆದರೆ ಹರಡಬಹುದಾದ ಸಾಂಕ್ರಮಿಕ ರೋಗಗಳಿಂದ ಜನ ಇನ್ನಷ್ಟು ಬಳಲಬೇಕಾಗುತ್ತದೆ. ಕಳೆದ ವರ್ಷ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಸುಮಾರು 1,380 ಕೋಟಿ ರೂ.ಗಳಷ್ಟು ಬೆಂಗಳೂರು ನಗರ ಒಂದರಲ್ಲೆ ನಷ್ಟ ಉಂಟಾಗಿತ್ತು ಎಂದು ಮೋಹನ್ ದಾಸರಿ ತಿಳಿಸಿದ್ದಾರೆ.

ಇಷ್ಟಾದರೂ ಎಚ್ಚೆತ್ತುಕೊಳ್ಳದ  ಬಿಬಿಎಂಪಿ ಆಡಳಿತ  ಪಕ್ಷ  ತಣ್ಣಗೆ ಎಸಿ ಕೊಠಡಿಯಲ್ಲಿ ಕುಳಿತುಕೊಂಡಿತ್ತು. ಅವಘಡ ಸಂಭವಿಸಿದ ದಿವಸ ಮೇಯರ್ ಹಾಗೂ ಇನ್ನಿತರ ಅಧಿಕಾರಿಗಳು ಕಾಲ್‍ಸೆಂಟರ್‍ನಲ್ಲಿ ಕುಳಿತುಕೊಂಡು ಸಂತ್ರಸ್ತರ ಅಳಲನ್ನು ಕೇಳಿಸಿಕೊಳ್ಳುವ ಕಾರ್ಯದಲ್ಲಿ ಮಾತ್ರ ತೃಪ್ತರಾಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಮೇ ತಿಂಗಳಲ್ಲಿ ಅಲ್ಲಲ್ಲಿ ಸುರಿದ ಸಣ್ಣ ಪ್ರಮಾಣದ ಮಳೆಯಿಂದಲೇ ಬೆಂಗಳೂರಿನ ಹಲವು ಭಾಗಗಳ ರಸ್ತೆಗಳು, ಚರಂಡಿಗಳಲ್ಲಿ ನೀರು ತುಂಬಿ ರಸ್ತೆಯ ಮೇಲಿದ್ದ ಒಂದೆರಡು ವಾಹನಗಳೇ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಕಸ್ಮಾತ್ ಮನೆಗಳಿಗೆ ನೀರು ನುಗ್ಗಿದರೆ ಜನ ಎಲ್ಲಿಗೆ ಹೋಗಬೇಕು? ಏನು ಮಾಡಬೇಕು ಎಂದು ಅವರು ಪ್ರಶ್ನಿಸಿದ್ದಾರೆ.

ಕೊರೋನ ಸೋಂಕು ಇನ್ನೂ ತಹಬದಿಗೆ ಬರದ ಈ ಹೊತ್ತಿನಲ್ಲಿ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ಹರಿದರೆ ಅಲ್ಲಿನ ನಿವಾಸಿಗಳ ಗತಿ ಏನು ಹಾಗೂ ಅವರಿಗೆ ಆಹಾರ, ವಸತಿ ಹೀಗೆ ಮೂಲ ಸೌಕರ್ಯಗಳ ಪೂರೈಕೆಗೆ ಹೆಣಗಾಡಬೇಕಾಗುತ್ತದೆ.  ಈ ಸಂದಿಗ್ಧ ಪರಿಸ್ಥಿತಿಗೆ, ಆತಂಕಕ್ಕೆ ಸರಕಾರ ಹಾಗೂ ಬಿಬಿಎಂಪಿಯ ಬೇಜವಾಬ್ದಾರಿತನವೇ ಕಾರಣವಾಗಿದೆ ಎಂದು ಮೋಹನ್ ದಾಸರಿ ಹೇಳಿದ್ದಾರೆ.

ಕೊರೋನ ಕಾರಣವನ್ನು ಮುಂದಿಟ್ಟುಕೊಂಡು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದೆ ಇದ್ದರೆ, ಮುಂದಾಗುವ ಅವಘಡಗಳಿಗೆ ಬಿಬಿಎಂಪಿಯ ಜವಾಬ್ದಾರಿ ಹೊತ್ತಿರುವ ಮೇಯರ್ ಮತ್ತು ಆಯುಕ್ತರನ್ನೆ ನೇರ ಹೊಣೆ ಮಾಡಬೇಕಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X