Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ತಪಾಸಣಾ ಅಧಿಕಾರಿಗಳನ್ನೇ...

ಮಂಗಳೂರು: ತಪಾಸಣಾ ಅಧಿಕಾರಿಗಳನ್ನೇ ಯಾಮಾರಿಸಿ ದಿಲ್ಲಿಯಿಂದ ಊರು ತಲುಪಿದ್ದ ಕೊರೋನ ಸೋಂಕಿತ !

ವಾರ್ತಾಭಾರತಿವಾರ್ತಾಭಾರತಿ18 May 2020 11:08 PM IST
share
ಮಂಗಳೂರು: ತಪಾಸಣಾ ಅಧಿಕಾರಿಗಳನ್ನೇ ಯಾಮಾರಿಸಿ ದಿಲ್ಲಿಯಿಂದ ಊರು ತಲುಪಿದ್ದ ಕೊರೋನ ಸೋಂಕಿತ !

ಮಂಗಳೂರು, ಮೇ 18: ಕೊರೋನ ಸೋಂಕಿಗೊಳಗಾಗಿರುವ ನಗರದ ಜೆಪ್ಪಿನಮೊಗರು ಗ್ರಾಮದ ಜೆಪ್ಪುಪಟ್ಣದ 31ರ ಹರೆಯದ ಯುವಕನ ‘ಟ್ರಾವೆಲ್ ಹಿಸ್ಟರಿ’ಯು ರೋಮಾಂಚನಕಾರಿಯಾಗಿದೆ.

ರವಿವಾರ ಸೋಂಕು ಪತ್ತೆಯಾದೊಡನೆ ಅಧಿಕಾರಿಗಳು ಈತನ ಟ್ರಾವೆಲ್ ಹಿಸ್ಟರಿ ಸಂಗ್ರಹಕ್ಕೆ ಮುಂದಾದಾಗ ಹಲವು ಅಂಶಗಳು ಬೆಳಕಿಗೆ ಬಂದಿವೆ.

ದುಬೈಯಲ್ಲಿದ್ದ ಈತ ಲಾಕ್‌ಡೌನ್‌ಗೆ ಮುನ್ನವೇ ಭಾರತಕ್ಕೆ ಆಗಮಿಸಿದ್ದ. ಅಂದರೆ ದಿಲ್ಲಿ ತಲುಪಿದ್ದ. ಅಲ್ಲಿಂದ ಊರಿಗೆ ಬರಬೇಕೆನ್ನುವಷ್ಟರಲ್ಲಿ ಲಾಕ್‌ಡೌನ್ ವಿಧಿಸಲ್ಪಟ್ಟಿತು. ಹಾಗಾಗಿ ದಿಲ್ಲಿಯಲ್ಲಿದ್ದ ತನ್ನ ಫ್ಲಾಟ್‌ನಲ್ಲೇ ಉಳಿದಿದ್ದ. ಈ ಮಧ್ಯೆ ಊರಿಗೆ ಬರಲು ಬಯಸಿದ ಆತ ಕಾಲ್ನಡಿಗೆ ಆರಂಭಿಸಿದ. ಹಾಗೇ ಸಿಕ್ಕ ಸಿಕ್ಕ ಕಾರು, ವ್ಯಾನ್, ಲಾರಿಗೆ ಕೈಯೊಡ್ಡಿ ರಾಜ್ಯದಿಂದ ರಾಜ್ಯಕ್ಕೆ ಪ್ರಯಾಣ ಮುಂದುವರಿಸಿದ. ವಾಹನಗಳಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಗಡಿ ತಪಾಸಣಾ ಅಧಿಕಾರಿಗಳನ್ನೇ ಯಮಾರಿಸಿದ್ದ ಎನ್ನಲಾಗಿದೆ. ಅಂತೂ ಇಂತು ಬಂಟ್ವಾಳಕ್ಕೆ ತಲುಪಿದ ಈ ಯುವಕ ಆಟೊ ರಿಕ್ಷಾವೊಂದರಲ್ಲಿ ಜಪ್ಪುಪಟ್ಣಕ್ಕೆ ತಲುಪಿದ.

10 ದಿನಗಳ ಹಿಂದೆ ಮನೆಗೆ ಕಾಲಿಟ್ಟ ಮಗನನ್ನು ತಂದೆ-ತಾಯಿ ತಕ್ಷಣ ಒಳಗೆ ಸೇರಿಸಲಿಲ್ಲ. ‘ಕೊರೋನ ಟೆಸ್ಟ್ ಮಾಡಿಸಿಕೊಂಡು ಬಳಿಕ ಮನೆಗೆ ಬಾ’ ಎಂದು ಹೇಳಿದ್ದಾರೆ. ಆದರೆ ಇದನ್ನು ನಿರ್ಲಕ್ಷಿಸಿದ ಯುವಕ ಪಕ್ಕದಲ್ಲೇ ಇರುವ ಅಜ್ಜಿಯ ಮನೆಯಲ್ಲಿ ಉಳಿದುಕೊಂಡಿದ್ದ ಎನ್ನಲಾಗಿದೆ.
ಹೆತ್ತವರು ಮತ್ತೆಯೂ ಒತ್ತಡ ಹೇರಿದ್ದರಿಂದ ಯುವಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ಕೋವಿಡ್ ತಪಾಸಣಾ ಕೇಂದ್ರಕ್ಕೆ ತೆರಳಿ ಪರೀಕ್ಷೆಗೆ ಒಳಗಾಗಿದ್ದ. ರವಿವಾರ ಬಂದ ವರದಿಯಲ್ಲಿ ಆತನಿಗೆ ಕೊರೋನ ಪಾಸಿಟಿವ್ ಇರುವುದು ದೃಢವಾಗಿದೆ.

ಈ ಯುವಕನಿಗೆ ಮದುವೆ ನಿಶ್ಚಯವಾಗಿದೆ ಎನ್ನಲಾಗಿದ್ದು, ಇದೇ ಕಾರಣಕ್ಕಾಗಿ ದಿಲ್ಲಿಯಿಂದ ಮಂಗಳೂರಿಗೆ ಬಂದಿದ್ದ ಎಂದು ಮೂಲಗಳು ತಿಳಿಸಿವೆ. ಯುವಕ ದಿಲ್ಲಿಯಿಂದ ಮನೆಗೆ ಬಂದು 10 ದಿನಗಳಾಗಿದ್ದು, ಈ ನಡುವೆ ಹಲವು ಸಂಬಂಧಿಕರನ್ನು ಸಂಪರ್ಕಿಸಿದ್ದಲ್ಲದೆ ಊರಿನಲ್ಲೂ ಸುತ್ತಾಡಿದ್ದಾನೆಂದು ತಿಳಿದುಬಂದಿದೆ.

ಈ ಯುವಕ ದಿಲ್ಲಿಯಿಂದ ನಾನಾ ವಾಹನಗಳ ಮೂಲಕ ಬಂದಿರುವುದಲ್ಲದೆ, ಬಂಟ್ವಾಳದ ಆಟೊ ರಿಕ್ಷಾ, ಜೆಪ್ಪು ಪಟ್ಣಪ್ರದೇಶ... ಹೀಗೆ ಈತನ ಟ್ರಾವೆಲ್ ಹಿಸ್ಟರಿ ಕಲೆ ಹಾಕುವುದು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X