Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸಕ ಆರಗ ಹೇಳಿಕೆಗೆ ಮುಸ್ಲಿಂ ಒಕ್ಕೂಟ...

ಶಾಸಕ ಆರಗ ಹೇಳಿಕೆಗೆ ಮುಸ್ಲಿಂ ಒಕ್ಕೂಟ ಖಂಡನೆ

ವಾರ್ತಾಭಾರತಿವಾರ್ತಾಭಾರತಿ18 May 2020 11:14 PM IST
share

ತೀರ್ಥಹಳ್ಳಿ: ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರು ಇತ್ತೀಚಿಗೆ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಭಾಷಣ ಮಾಡಿರುವುದಲ್ಲದೆ, ನಮ್ಮ ಸಮುದಾಯದ ವಿರುದ್ಧ ತೀರಾ ಕೆಳಮಟ್ಟದಲ್ಲಿ ಮಾತನಾಡಿರುವುದು ನಮಗೆ ತುಂಬಾ ನೋವಾಗಿದೆ ಎಂದು ತೀರ್ಥಹಳ್ಳಿ ಜಮಾಅತ್ ಒಕ್ಕೂಟ ಖಂಡಿಸಿದೆ.

ಇತ್ತೀಚಿಗೆ ಉನ್ನತ ಅಧಿಕಾರಿಗಳ ಸಭೆಯಲ್ಲಿ ಸೌಲಭ್ಯಗಳ ಮಾಹಿತಿ ನೀಡುವ ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡುತ್ತಾ ನಮ್ಮ ಸಮಾಜದ ವಿರುದ್ಧ, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ. ಆದರೆ ವೈಯಕ್ತಿಕವಾಗಿ ನಡೆಯುವ ಅಚಾತುರ್ಯ ಮತ್ತು ಘಟನೆಗಳಿಗೆ ಸಮಾಜವೇ ಕಾರಣ ಎಂದು ಒಂದು ಸಮುದಾಯದ ಬಗ್ಗೆ ಸಾರ್ವಜನಿಕ ಸಭೆಯಲ್ಲಿ ನಿಂದಿಸಿ, ಅವಮಾನಿಸಿರುವುದು ನಮಗೆ ತುಂಬಾ ನೋವಾಗಿದೆ ಎಂದು ಜಮಾಅತ್ ಒಕ್ಕೂಟ ತಿಳಿಸಿದೆ.

ಕೊರೋನ ವೈರಸ್ ತಡೆಯಲು ಭಾರತ ಸರ್ಕಾರ ಮೂರು ಹಂತದ ಲಾಕ್ ಡೌನ್ ಅನ್ನು ಘೋಷಿಸಿದೆ. ಜನತೆ, ಅಧಿಕಾರಿಗಳ ಮುಂಜಾಗ್ರತೆ ಮತ್ತು ಸಹಕಾರದ ಫಲವಾಗಿ ಈ ದೇಶದಲ್ಲಿ ವೈರಸ್ ತೀವ್ರತೆಯನ್ನು ಕಳೆದು ಕೊಂಡಿದೆ. ವಿಶೇಷವಾಗಿ ತೀರ್ಥ ಹಳ್ಳಿಯಲ್ಲಿ ಕೂಡಾ ನಮ್ಮ ಸಮುದಾಯ ಸಂಪೂರ್ಣವಾಗಿ ತಾಲೂಕು ಆಡಳಿತಕ್ಕೆ ಸಹಕಾರ ನೀಡಿದೆ ಎಂದು ತಿಳಿಸಿದ್ದಾರೆ.

ಮಾರ್ಚ್ 5 ರಂದು ದಾವಣಗೆರೆ ಯಿಂದ ಗುಜರಾತಿಗೆ ಧಾರ್ಮಿಕ ಪ್ರವಾಸಕ್ಕೆ ತೆರಳಿದ ಜಿಲ್ಲೆಯ 8 ಮಂದಿ ಮಾರ್ಚ್ 24ರಂದು ಲಾಕ್ ಡೌನ್ ಆದ ಕಾರಣ ಹಿಂದಿರುಗಲು ಸಾಧ್ಯವಾಗದೆ ಅಹಮದಬಾದ್ ನಲ್ಲಿ ಸಿಲುಕಿಕೊಂಡರು. ಸರ್ಕಾರಿ ಇಲಾಖೆಗೆ ತಮ್ಮ ಇರುವಿಕೆ ಕಾರಣವನ್ನು ನೀಡಿ ಅಹ್ಮದಾಬಾದ್‌ನಲ್ಲಿ ಸರ್ಕಾರಿ ಕ್ವಾರಂಟೈನ್‌ಗೆ ಒಳಪಟ್ಟು ಕೋವಿಡ್19 ವೈದ್ಯಕೀಯ ತಪಾಸಣೆಗೆ ಒಳಗಾದರು. ಬಳಿಕ ಕೋವಿಡ್19 ವರದಿ ನೆಗೆಟಿವ್ ಬಂದ ಹಿನ್ನಲೆಯಲ್ಲಿ ಮೂರನೆ ಲಾಕ್ ಡೌನ್ ಸಡಿಲ ಆದಾಗ ಸರಕಾರದ ಅನುಮತಿ ಪಡೆದು ವಾಪಸ್ ಬಂದ ತೀರ್ಥಹಳ್ಳಿ ಕೋಣಂದೂರಿನ 8 ಮಂದಿ ಶಿವಮೊಗ್ಗದಲ್ಲಿ ಕ್ವಾರಂಟೈನ್ ಆಗಿದ್ದಾರೆ. ಇದು ಶಾಸಕರ ಗಮನಕ್ಕೆ ಬಂದಂತಹ ವಿಚಾರ. ಆದರೆ ತಾವು ಹೇಳಿದ ಹಾಗೆ ಇವರು ಎಲ್ಲೂ ಸಹ ತಪ್ಪಿಸಿಕೊಂಡು ಹೋದವರಲ್ಲ. ಸರ್ಕಾರಿ ಕ್ವಾರಂಟೈನ್ ಒಳಗಾಗಿದ್ದಾರೆ. ಆದರೆ ಇಂತಹ ಸಂದರ್ಭದಲ್ಲೂ ಏನಾದರೂ ವ್ಯತ್ಯಾಸ ಬಂದಿದ್ದರೆ ಅದಕ್ಕೆ ಅವರೇ ಹೊಣೆ ಹೊರತು ಸಮುದಾಯ ಹೊಣೆ ಆಗುವುದು ಹೇಗೆ? ಇದೇ ಪ್ರಕರಣವನ್ನು ಮುಂದಿಟ್ಟುಕೊಂಡು ಇಂದಿನ ಸಮಸ್ಯೆಗೆ ನಮ್ಮ ಸಮಾಜವೇ ಕಾರಣ  ಎಂದು ಬಿಂಬಿಸುವ ಪ್ರಯತ್ನ ಮಾಡಿದ್ದೀರಿ ಎಂದು ಜಮಾಅತ್ ಒಕ್ಕೂಟ ಆರೋಪಿಸಿದೆ.

ನಮ್ಮ ಸಮಾಜವು ಸಹ ಈ ದೇಶದ ಒಂದು ಭಾಗ. ಎಲ್ಲರಂತೆ ನೂರಾರು ವರ್ಷಗಳಿಂದ ಈ ದೇಶದಲ್ಲಿ ಬಂದಿದ್ದೇವೆ. ದೇಶ, ಸಮಾಜದ ರಕ್ಷಣೆಯಲ್ಲಿ ನಮ್ಮ ಸಮಾಜ ದುಡಿದಿದೆ, ದುಡಿಯುತ್ತಿದೆ. ಆದರೆ ಎಲ್ಲೋ ನಡೆಯುವ ಘಟನೆಗಳಿಗೆ ಒಂದು ಸಮಾಜವನ್ನು ಗುರಿಮಾಡುವುದು, ಅದರಲ್ಲೂ ದೇಶದ ಎಲ್ಲಾ ಸಮಾಜದ ಹಿತ ಕಾಯುವುದಾಗಿ ಅಧಿಕಾರಕ್ಕೆ ಬಂದ ಜನ ಪ್ರತಿನಿಧಿಗಳು ಎರಡು ಸಮುದಾಯದ ಮಧ್ಯೆ ವೈಮನಸ್ಸು ಸೃಷ್ಟಿ ಮಾಡಿ ಕಂದಕ ಸೃಷ್ಟಿಸಿ ಸಮಾಜದ ಸ್ವಾಸ್ಥ್ಯ ಕದಡುವಂತೆ ಪ್ರಚೋದನಾತ್ಮಕ ಹೇಳಿಕೆಗಳು ನಿಜವಾಗಿಯೂ ಉತ್ತಮ ಬೆಳವಣಿಗೆ ಅಲ್ಲ. ನಿಮ್ಮಿಂದ ಇಂತಹ ಮಾತುಗಳನ್ನು ನಾವು ಎಂದು ಊಹಿಸಿರಲಿಲ್ಲ. ವೈಯಕ್ತಿಕ ಘಟನೆಗಳನ್ನು, ತಪ್ಪುಗಳನ್ನು ದಯಮಾಡಿ ಹೊಣೆ ಮಾಡಬೇಡಿ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಿ, ಆ ಅಧಿಕಾರ ಸರ್ಕಾರಕ್ಕೆ ಇದೆ. ನಮಗೆ ಅರಿವಿದೆ, ಆದರೆ ಸಾಮರಸ್ಯದಿಂದ ಇರುವ ಸಮಾಜಗಳ ನಡುವೆ ತಮ್ಮ ಹೇಳಿಕೆ ಕಂದಕ ಸೃಷ್ಟಿ ಮಾಡುವುದಂತೂ ಸುಳ್ಳಲ್ಲ ಎಂದು ಜಮಾಅತ್ ಒಕ್ಕೂಟದ ಅಧ್ಯಕ್ಷ ನಾಸಿರ್ ಖಾನ್ ಪತ್ರಿಕಾ ಪ್ರಕಟನೆಯ ಮೂಲಕ ಖಂಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X