Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಟಿಪ್ಪು ಜಯಂತಿ: ಬಿಜೆಪಿ, ಸಂಘಪರಿವಾರ...

ಟಿಪ್ಪು ಜಯಂತಿ: ಬಿಜೆಪಿ, ಸಂಘಪರಿವಾರ ನಾಯಕರ ವಿರುದ್ಧದ ಪ್ರಕರಣ ಕೈಬಿಡಲು ರಾಜ್ಯ ಸರಕಾರದ ಶಿಫಾರಸು

'ಪ್ರಕರಣ ವಾಪಸ್ ಪಡೆಯಲು ಅಸಾಧ್ಯ’ ಎಂದ ಡಿಜಿಪಿ

ವಾರ್ತಾಭಾರತಿವಾರ್ತಾಭಾರತಿ19 May 2020 10:15 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಟಿಪ್ಪು ಜಯಂತಿ: ಬಿಜೆಪಿ, ಸಂಘಪರಿವಾರ ನಾಯಕರ ವಿರುದ್ಧದ ಪ್ರಕರಣ ಕೈಬಿಡಲು ರಾಜ್ಯ ಸರಕಾರದ ಶಿಫಾರಸು

ಬೆಂಗಳೂರು: ಕರ್ನಾಟಕದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಸೃಷ್ಟಿಯಾಗಿದ್ದ ವಿವಾದದ ನಂತರ 2014ರಿಂದ 2018ರ ನಡುವೆ ನಡೆದಿದ್ದ ಹಿಂಸಾತ್ಮಕ ಘಟನೆಗಳಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪ ಹೊತ್ತ ಹಲವು ಬಿಜೆಪಿ ನಾಯಕರು, ವಿಹಿಂಪ ನಾಯಕರು ಹಾಗೂ ಸಂಘಪರಿವಾರಕ್ಕೆ ಸೇರಿದವರ ವಿರುದ್ಧ ದಾಖಲಾಗಿದ್ದ 46 ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯದ ಬಿ ಎಸ್ ಯಡಿಯೂರಪ್ಪ ಸರಕಾರ ಶಿಫಾರಸು ಮಾಡಿದೆ. ಆದರೆ ಈ ಪ್ರಕರಣಗಳನ್ನು ಹಿಂಪಡೆಯಲು ಸಾಧ್ಯವಿಲ್ಲ ರಾಜ್ಯ ಡಿಜಿಪಿ ಪ್ರತಿಕ್ರಿಯಿಸಿದ್ದಾರೆ ಎಂದು thewire.in ವರದಿ ಮಾಡಿದೆ.

ಹಿಂದಿನ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರಕಾರ ಅಧಿಕಾರದಲ್ಲಿದ್ದ ಸಂದರ್ಭ ರಾಜ್ಯದ ವಿವಿಧೆಡೆ ಈ ಹಿಂಸಾತ್ಮಕ ಘಟನೆಗಳು ನಡೆದಿದ್ದವು.

ಮಾರ್ಚ್ 5ರಂದು ಈ ಶಿಫಾರಸನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರ ಅನುಮೋದನೆಯೊಂದಿಗೆ ಮಾಡಲಾಗಿದ್ದು, ಇದಕ್ಕೆ ರಾಜ್ಯ ಪೊಲೀಸ್ ಇಲಾಖೆ ಹಾಗೂ ಕಾನೂನು ಇಲಾಖೆ ತಾತ್ವಿಕವಾಗಿ ವಿರೋಧ ವ್ಯಕ್ತಪಡಿಸಿವೆ.

ಹಿರಿಯ ಬಿಜೆಪಿ ನಾಯಕ ಸಂಜಯ್ ಪಾಟೀಲ್, ವಿಹಿಂಪ ನಾಯಕ ಸ್ವರೂಪ್ ಕಲ್ಕುಂದ್ರಿ ಹಾಗು ಹಲವಾರು ಜಿಲ್ಲಾ ಮಟ್ಟದ ಬಜರಂಗದಳದ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯಲು ಶಿಫಾರಸು ಮಾಡಲಾಗಿದೆ. ಆರೋಪಿಗಳು ಹಿಂಸೆಯಲ್ಲಿ ನೇರ ಶಾಮೀಲಾತಿಯೊಂದಿಗೆ ರಾಜ್ಯದಲ್ಲಿ ಮತೀಯ ಉದ್ವಿಗ್ನತೆ ಸೃಷ್ಟಿಸಲು, ಪ್ರಚೋದನಕಾರಿ ಭಾಷಣ ಹಾಗೂ ಟಿಪ್ಪು ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಹಾಗೂ ಆಗಿನ ಮುಖ್ಯಮಂತ್ರಿಯನ್ನು ಅಣಕಿಸುವಂತೆ ಭಾಷಣ ಮಾಡಿದ ಆರೋಪ ಸೇರಿದಂತೆ ಹಲವು ಆರೋಪ ಎದುರಿಸುತ್ತಿದ್ದಾರೆ.

ಕ್ರಿಮಿನಲ್ ದಂಡ ಸಂಹಿತೆಯ ಸೆಕ್ಷನ್ 321 ಅನ್ವಯ ಈ ಪ್ರಕರಣಗಳನ್ನು ವಾಪಸ್ ಪಡೆಯಲು ಶಿಫಾರಸು ಮಾಡಲಾಗಿದೆ. ಈ ಪ್ರಕರಣಗಳನ್ನು ವಾಪಸ್ ಪಡೆಯಲು ಸಾಧ್ಯವಿಲ್ಲವೆಂದು ಡಿಜಿ ಹಾಗೂ ಐಜಿಪಿ ಅಭಿಪ್ರಾಯಪಟ್ಟಿದ್ದರೆ, ಕಾನೂನು ಮತ್ತು ಪ್ರಾಸಿಕ್ಯೂಶನ್ ಇಲಾಖೆ ಈ ಪ್ರಕರಣಗಳು ವಾಪಸ್ ಪಡೆಯಲು ಯೋಗ್ಯವಲ್ಲ ಎಂದು ಅಭಿಪ್ರಾಯಪಟ್ಟಿದೆ. ರಾಜ್ಯ ಡಿಜಿ ಹಾಗೂ ಐಜಿಪಿ ಅದೇ ಸಮಯ ಇಂತಹ ಶಿಫಾರಸುಗಳು ‘ಸಾಮಾನ್ಯ ಪ್ರಕ್ರಿಯೆ' ಎಂದಿದ್ದಾರೆ.

“ಇಂತಹ ಪ್ರಸ್ತಾವಗಳು ನಮ್ಮ ಇಲಾಖೆಗೆ ಬರುತ್ತಲೇ ಇರುತ್ತವೆ. ಪ್ರತಿದಿನ ಅರ್ಜಿಗಳನ್ನು ಸಲ್ಲಿಸಲಾಗುತ್ತದೆ. ತಮ್ಮ ವಿವೇಚನೆಯನ್ನು ಬಳಸಿ ಈ ಪ್ರಕರಣಗಳು ಹಿಂಪಡೆಯುವಂತಹದ್ದಲ್ಲ ಎನ್ನುವುದನ್ನು ಪ್ರಕರಣದ ತನಿಖಾಧಿಕಾರಿಗಳು ನಿರ್ಧರಿಸಿದ್ದಾರೆ” ಎಂದವರು ತಿಳಿಸಿದ್ದಾರೆ.

ಕ್ರಿಮಿನಲ್ ದಂಡ ಸಂಹಿತೆಯ ಸೆಕ್ಷನ್ 321 ಅನ್ವಯ ಈ ಶಿಫಾರಸುಗಳನ್ನು ನ್ಯಾಯಾಲಯದ ಮುಂದೆ ಇರಿಸಬೇಕಾಗಿದ್ದು , ಪ್ರಕರಣಗಳ ಅರ್ಹತೆಯ ಆಧಾರದಲ್ಲಿ ಹಾಗೂ ಸರಕಾರದ ನಿಲುವಿನ ಆಧಾರದಲ್ಲಿ ನ್ಯಾಯಾಲಯ ತನ್ನ ವಿವೇಚನೆಯಂತೆ ನಿರ್ಧಾರ ಪ್ರಕಟಿಸುತ್ತದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X