Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವ ಆರೋಗ್ಯ ಸಂಸ್ಥೆಗೆ ಬೆಂಬಲ ನೀಡಿದ...

ವಿಶ್ವ ಆರೋಗ್ಯ ಸಂಸ್ಥೆಗೆ ಬೆಂಬಲ ನೀಡಿದ ಐರೋಪ್ಯ ಒಕ್ಕೂಟ

ವಾರ್ತಾಭಾರತಿವಾರ್ತಾಭಾರತಿ19 May 2020 10:30 PM IST
share

ಬ್ರಸೆಲ್ಸ್ (ಬೆಲ್ಜಿಯಮ್), ಮೇ 19: ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)ಯಿಂದ ಹೊರಬರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ ಬೆನ್ನಿಗೇ, ಐರೋಪ್ಯ ಒಕ್ಕೂಟವು ಮಂಗಳವಾರ ಅದರ ಬೆಂಬಲಕ್ಕೆ ಧಾವಿಸಿದೆ ಹಾಗೂ ಕೊರೋನ ವೈರಸ್ ವಿರುದ್ಧದ ಹೋರಾಟಕ್ಕೆ ಬಹುಪಕ್ಷೀಯ ವ್ಯವಸ್ಥೆಯೊಂದರ ಅಗತ್ಯವಿದೆ ಎಂದು ಅದು ಪ್ರತಿಪಾದಿಸಿದೆ.

ಇದು ಏಕತೆ ಅಗತ್ಯವಾಗಿರುವ ಸಮಯ, ಯಾರ ವಿರುದ್ಧವಾದರೂ ಬೆರಳು ತೋರಿಸುವ ಅಥವಾ ಬಹುಪಕ್ಷೀಯ ಸಹಕಾರವನ್ನು ಕಡೆಗಣಿಸುವ ಕಾಲವಲ್ಲ ಎಂದು ಯುರೋಪಿಯನ್ ವಿದೇಶ ವ್ಯವಹಾರಗಳ ವಕ್ತಾರೆ ವರ್ಜಿನೀ ಬ್ಯಾಟು ಹೆನ್ರಿಕ್ಸನ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಕೊರೋನ ವೈರಸ್ ಸಾಂಕ್ರಾಮಿಕಕ್ಕೆ ಅಂತರ್‌ರಾಷ್ಟ್ರೀಯ ಪ್ರತಿಕ್ರಿಯೆ ಹೇಗಿತ್ತು ಎಂಬ ಬಗ್ಗೆ ನಿಷ್ಪಕ್ಷಪಾತ, ಸ್ವತಂತ್ರ ಮತ್ತು ಸಮಗ್ರ ವೌಲ್ಯಮಾಪನ ನಡೆಯಬೇಕೆಂದು ಒತ್ತಾಯಿಸುವ ನಿರ್ಣಯವೊಂದನ್ನು ಮಂಗಳವಾರ ನಡೆದ ವಿಶ್ವ ಆರೋಗ್ಯ ಸಂಸ್ಥೆಯ ವಾರ್ಷಿಕ ಅದಿವೇಶನನಲ್ಲಿ ಐರೋಪ್ಯ ಒಕ್ಕೂಟ ಮಂಡಿಸಿದೆ.

ಕೋವಿಡ್-19 ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ನಡೆಸಿರುವ ಪ್ರಯತ್ನಗಳಿಗಾಗಿ ವಿಶ್ವ ಆರೋಗ್ಯ ಸಂಸ್ಥೆಯನ್ನು ಐರೋಪ್ಯ ಒಕ್ಕೂಟವು ಬೆಂಬಲಿಸುತ್ತದೆ ಹಾಗೂ ಈ ಪ್ರಯತ್ನಗಳನ್ನು ಮುಂದುವರಿಸುವುದಕ್ಕಾಗಿ ಅದಕ್ಕೆ ಈಗಾಗಲೇ ವಿಶೇಷ ಅನುದಾನಗಳನ್ನು ಒದಗಿಸಲಾಗಿದೆ ಎಂದು ವಕ್ತಾರೆ ಹೇಳಿದರು.

30 ದಿನದೊಳಗೆ ಸುಧಾರಿಸಿ; ಇಲ್ಲವೇ ಖಾಯಂ ದೇಣಿಗೆ ಬಂದ್

ಮುಂದಿನ 30 ದಿನಗಳೊಳಗೆ ಸಮರ್ಪಕ ಸುಧಾರಣೆಗಳನ್ನು ಮಾಡಿಕೊಳ್ಳದಿದ್ದರೆ ವಿಶ್ವ ಆರೋಗ್ಯ ಸಂಸ್ಥೆಗೆ ಅಮೆರಿಕ ನೀಡುವ ದೇಣಿಗೆಯನ್ನು ಶಾಶ್ವತವಾಗಿ ನಿಲ್ಲಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಬೆದರಿಕೆ ಹಾಕಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯು ಚೀನಾಕ್ಕೆ ಅತ್ಯಂತ ನಿಕಟವಾಗಿದೆ ಹಾಗೂ ಕೊರೋನ ವೈರಸ್ ಸಾಂಕ್ರಾಮಿಕವನ್ನು ಚೀನಾ ಕೆಟ್ಟದಾಗಿ ನಿಭಾಯಿಸಿದ್ದರೂ ಅದನ್ನು ಮುಚ್ಚಿಹಾಕಿದೆ ಹಾಗೂ ಚೀನಾವನ್ನು ಸಮರ್ಥಿಸುತ್ತಾ ಬಂದಿದೆ ಎಂಬುದಾಗಿ ಟ್ರಂಪ್ ಆರೋಪಿಸಿದ್ದಾರೆ ಹಾಗೂ ಅದಕ್ಕೆ ನೀಡಬೇಕಾಗಿರುವ ದೇಣಿಗೆಯನ್ನು ಎಪ್ರಿಲ್ ತಿಂಗಳಲ್ಲಿ ನಿಲ್ಲಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾ ನಿರ್ದೇಶಕ ಟೆಡ್ರಾಸ್ ಅದನಾಮ್ ಗೇಬ್ರಿಯೇಸಸ್‌ಗೆ ಬರೆದ ಪತ್ರವೊಂದರ ಚಿತ್ರಗಳನ್ನು ಸೋಮವಾರ ಟ್ರಂಪ್ ಟ್ವೀಟ್ ಮಾಡಿದ್ದಾರೆ.

ಪತ್ರದಲ್ಲಿ ಸಾಂಕ್ರಾಮಿವನ್ನು ನಿಭಾಯಿಸುವಲ್ಲಿನ ವಿಶ್ವ ಆರೋಗ್ಯ ಸಂಸ್ಥೆಯ ವೈಫಲ್ಯಗಳನ್ನು ಟ್ರಂಪ್ ಪಟ್ಟಿ ಮಾಡಿದ್ದಾರೆ. ವೈರಸ್ ಹುಟ್ಟಿಕೊಂಡಿರುವುದಕ್ಕೆ ಸಂಬಂಧಿಸಿದ ಆರಂಭಿಕ ವರದಿಗಳನ್ನು ಸಂಸ್ಥೆಯು ನಿರ್ಲಕ್ಷಿಸಿದೆ ಹಾಗೂ ಅದು ಚೀನಾಕ್ಕೆ ತೀರಾ ಹತ್ತಿರವಾಗಿದೆ ಎಂಬುದಾಗಿ ಪತ್ರದಲ್ಲಿ ಟ್ರಂಪ್ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X