Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಳವಾಗಿ ಈದ್ ಆಚರಿಸಲು ಉಡುಪಿ ಜಿಲ್ಲಾ...

ಸರಳವಾಗಿ ಈದ್ ಆಚರಿಸಲು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಕರೆ

ವಾರ್ತಾಭಾರತಿವಾರ್ತಾಭಾರತಿ20 May 2020 1:49 PM IST
share

ಉಡುಪಿ, ಮೇ 20 : ಕೊರೋನ ಲಾಕ್ ಡೌನ್ ನಾಲ್ಕನೇ ಹಂತದಲ್ಲಿರುವ ಸಂದರ್ಭದಲ್ಲಿ ಬಂದಿರುವ ಈದುಲ್ ಫಿತ್ರ್ ನಮಾಝನ್ನು ಖಾಝಿಯವರು ಸೂಚಿಸಿದಂತೆ ಮನೆಯಲ್ಲೇ ನಿರ್ವಹಿಸಿ ಹಬ್ಬವನ್ನು ಎಲ್ಲರೂ ಅತ್ಯಂತ ಸರಳವಾಗಿ ಆಚರಿಸಬೇಕು ಹಾಗು ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ಸಾಧ್ಯವಿದ್ದಷ್ಟು ತಮ್ಮ ಸಮೀಪದಲ್ಲಿರುವ ಅರ್ಹರಿಗೆ ನೆರವು ನೀಡಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಕರೆ ನೀಡಿದೆ.

ಕೊರೋನ ಲಾಕ್ ಡೌನ್ ಸಂದರ್ಭದಲ್ಲಿ ದೇಶಾದ್ಯಂತ ಆಗಿರುವಂತೆ ಉಡುಪಿ ಜಿಲ್ಲೆಯ ಸಮಸ್ತ ಮುಸ್ಲಿಮರು ಜಿಲ್ಲಾಡಳಿತಕ್ಕೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಸರಕಾರ ವಿಧಿಸಿದ ಎಲ್ಲ ನೀತಿ ನಿಯಮಗಳನ್ನು ಪಾಲಿಸಿದ್ದಾರೆ. ಕೊರೋನ ವಿರುದ್ಧದ ಹೋರಾಟದಲ್ಲಿ ಸರಕಾರಕ್ಕೆ, ಜಿಲ್ಲಾಡಳಿತಕ್ಕೆ ಸರ್ವ ರೀತಿಯಲ್ಲಿ ಬೆಂಬಲ ನೀಡಬೇಕು ಎಂಬ ಉದ್ದೇಶದಿಂದ  ಪವಿತ್ರ  ರಮಝಾನ್ ತಿಂಗಳಲ್ಲೂ ಮಸೀದಿಗೆ ಹೋಗದೆ ನಿರ್ಬಂಧವನ್ನು ಪಾಲಿಸಿದ್ದಾರೆ. ಇವೆಲ್ಲವುಗಳ ಜೊತೆ ಸಂಕಷ್ಟದಲ್ಲಿದ್ದ ಸರ್ವಧರ್ಮೀಯರಿಗೆ  ಸಹಾಯ ಹಸ್ತ ಚಾಚಿದ್ದಾರೆ. ಇತ್ತೀಚಿಗೆ ಅಂಗಡಿಗಳು ತೆರೆದರೂ ಈದ್ ಖರೀದಿಗಾಗಿ ಹೋಗದೆ ಆ ಹಣವನ್ನು ಬಡವರಿಗೆ ನೆರವಾಗಲು ಬಳಸಿದ್ದಾರೆ. ಇದು ನಿಜಕ್ಕೂ ಅಭಿನಂದನೀಯ ನಡೆ.  ಈಗ ಒಟ್ಟಾರೆ  ಸಂಕಷ್ಟದ ಪರಿಸ್ಥಿತಿ ಇದೆ. ನಮ್ಮ ಅಕ್ಕಪಕ್ಕದಲ್ಲಿ ಮಾತ್ರವಲ್ಲದೆ ರಾಜ್ಯ ಹಾಗು ದೇಶದೆಲ್ಲೆಡೆ ಬಹಳ ದೊಡ್ಡ ಸಂಖ್ಯೆಯಲ್ಲಿ ಕಾರ್ಮಿಕರು, ರೈತರು, ಬಡ ಮಹಿಳೆಯರು, ಮಕ್ಕಳು ಅತ್ಯಂತ ಕಷ್ಟದ ಕ್ಷಣಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಈವರೆಗೆ ಅಳವಡಿಸಿಕೊಂಡಿರುವ ಸರಳತೆಯನ್ನು ಮುಂದುವರಿಸಿ ಈ ಕಠಿಣ ಸಂದರ್ಭದಲ್ಲಿ ಬಂದಿರುವ ಈದುಲ್ ಫಿತ್ರ್ ನಮಾಝನ್ನು ಮನೆಯಲ್ಲೇ ನಿರ್ವಹಿಸಿ, ಹಬ್ಬವನ್ನು ಆದಷ್ಟು ಸರಳವಾಗಿ , ಕುಟುಂಬ ಸದಸ್ಯರ ಜೊತೆಗೇ ಆಚರಿಸಿ , ದುಂದು ವೆಚ್ಚವಿಲ್ಲದೆ, ಅನಗತ್ಯ ಮನೋರಂಜನೆ, ಪ್ರಯಾಣ  ಇತ್ಯಾದಿಗಳಿಗೆ  ಹೋಗದೆ ಆಚರಿಸುವುದು ಸೂಕ್ತ. ಈ ಬಗ್ಗೆ ಜಿಲ್ಲಾ ಖಾಝಿಗಳು ಕೂಡ ಕರೆ ನೀಡಿದ್ದಾರೆ ಎಂದು ಒಕ್ಕೂಟದ ಅಧ್ಯಕ್ಷ ಯಾಸೀನ್ ಮಲ್ಪೆ ಹಾಗು ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೌಲಾ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X