Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಂಬೈಯಿಂದ ಬಂದ 6 ಮಂದಿಗೆ ಕೊರೋನ...

ಮುಂಬೈಯಿಂದ ಬಂದ 6 ಮಂದಿಗೆ ಕೊರೋನ ಪಾಸಿಟಿವ್

ಉಡುಪಿಯಲ್ಲಿ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆ

ವಾರ್ತಾಭಾರತಿವಾರ್ತಾಭಾರತಿ20 May 2020 8:11 PM IST
share
ಮುಂಬೈಯಿಂದ ಬಂದ  6 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಮೇ 20: ಮಾ.29ರ ಬಳಿಕ ಸತತ 47 ದಿನಗಳ ಕಾಲ ಯಾವುದೇ ಕೊರೋನ ಪಾಸಿಟಿವ್ ಪ್ರಕರಣಗಳಿಲ್ಲದೇ ಹಸಿರು ವಲಯದಲ್ಲಿ ಸ್ಥಾನ ಪಡೆದು ನೆಮ್ಮದಿಯಾಗಿದ್ದ ಉಡುಪಿ ಜಿಲ್ಲೆ, ಹೊರರಾಜ್ಯದ ಸ್ಥಳೀಯರಿಗೆ ಊರಿಗೆ ಮರಳಲು ಅವಕಾಶ ನೀಡಿದ ಬಳಿಕ ಇದೀಗ ಪ್ರತಿದಿನ ವೆಂಬಂತೆ ಕೊರೋನ ಪಾಸಿಟಿವ್ ಕೇಸುಗಳನ್ನು ಕಾಣುತಿದ್ದು, ಬುಧವಾರ ಜಿಲ್ಲೆಯಲ್ಲಿ ಹೊಸದಾಗಿ ಆರು ಪಾಸಿಟಿವ್ ಪ್ರಕರಣಗಳು ವರದಿ ಯಾಗಿವೆ.ಇವೆಲ್ಲವೂ ಮಹಾರಾಷ್ಟ್ರದ ಮುಂಬಯಿಯಿಂದ ಉಡುಪಿ ಜಿಲ್ಲೆಗೆ ಆಗಮಿಸಿದವರದ್ದಾಗಿದೆ.

ಪಾಸಿಟಿವ್ ಪತ್ತೆಯಾದವರಲ್ಲಿ 4 ವರ್ಷ ಪ್ರಾಯದ ಹೆಣ್ಣು ಮಗು ಹಾಗೂ 15 ವರ್ಷ ಪ್ರಾಯದ ಬಾಲಕಿ ಕುಂದಾಪುರ ತಾಲೂಕಿನವರಾಗಿದ್ದು ಕುಂದಾಪುರದಲ್ಲೇ ಕ್ವಾರಂಟೈನ್‌ನಲ್ಲಿದ್ದರು. 31 ವರ್ಷ ಪ್ರಾಯ ಹಾಗೂ 47 ವರ್ಷ ಪ್ರಾಯದ ಇಬ್ಬರು ಮಹಿಳೆಯರು ಹೆಬ್ರಿಯವರಾಗಿದ್ದು, ಹೆಬ್ರಿಯಲ್ಲೇ ಕ್ವಾರಂಟೈನ್‌ನಲ್ಲಿದ್ದರು. ಮತ್ತಿಬ್ಬರು 74 ವರ್ಷ ಪ್ರಾಯ ಹಾಗೂ 55 ವರ್ಷ ಪ್ರಾಯದ ಪುರುಷರು. ಇವರಿಬ್ಬರೂ ಬೈಂದೂರು ತಾಲೂಕಿನವರಾಗಿದ್ದು, ಬೈಂದೂರಿನಲ್ಲೇ ಕ್ವಾರಂಟೈನ್‌ನಲ್ಲಿದ್ದರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ‌ಚಂದ್ರ ಸೂಡ ತಿಳಿಸಿದ್ದಾರೆ.

4 ವರ್ಷ ಪ್ರಾಯದ ಹೆಣ್ಣು ಮಗು ಹಾಗೂ 15 ವರ್ಷ ಪ್ರಾಯದ ಬಾಲಕಿ, ಕಳೆದ ಮೇ 13ರಂದು ಊರಿಗೆ ಬಂದು ಹೃದಯಾಘಾತದಿಂದ ಮಣಿಪಾಲ ಕೆಎಂಸಿಯಲ್ಲಿ ಮೃತಪಟ್ಟ ಬಳಿಕ ಕೋವಿಡ್ ಸೋಂಕು ಪತ್ತೆಯಾದ 54ರ ಹರೆಯದ ವ್ಯಕ್ತಿಯೊಂದಿಗೆ ಊರಿಗೆ ಬಂದಿದ್ದು ಅವರ ಪ್ರಾಮಿಕ ಸಂಪರ್ಕಕ್ಕೆ ಒಳಗಾದವರು.

74 ಮತ್ತು 55 ವರ್ಷ ಪ್ರಾಯ ಇಬ್ಬರು ಪುರುಷರು ಬೈಂದೂರಿನವರಾಗಿದ್ದು, ಇಬ್ಬರೂ ಮುಂಬಯಿಯಿಂದ ಊರಿಗೆ ಬಂದವರಾಗಿದ್ದಾರೆ. ಇವ ರಿಬ್ಬರೂ ಬೈಂದೂರಿನಲ್ಲಿ ಕ್ವಾರಂಟೈನ್‌ನಲ್ಲಿದ್ದರು. ಇದೀಗ ಎಲ್ಲರನ್ನೂ ಉಡುಪಿಯ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಇವರಲ್ಲಿ ಇಬ್ಬರು ಮಕ್ಕಳಿಗೆ ಒಟ್ಟು 24 ಮಂದಿ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದೆ. 74ರ ವೃದ್ಧರಿಗೆ 30 ಮಂದಿ, 55ರ ಪುರುಷರಿಗೆ 30, 31 ವರ್ಷ ಪ್ರಾಯದ ಮಹಿಳೆಗೆ 24 ಮಂದಿ ಹಾಗೂ 47 ವರ್ಷ ಪ್ರಾಯದ ಮಹಿಳೆಗೆ ಒಟ್ಟು 12 ಮಂದಿ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ಎಲ್ಲರನ್ನೂ ಕ್ವಾರಂಟೈನ್ ಮಾಡಿ ಗಂಟಲು ದ್ರವ ಪರೀಕ್ಷೆಗೆ ಕ್ರಮ ತೆಗೆದುಕೊಳ್ಳ ಲಾಗಿದೆ ಎಂದು ಡಾ.ಸೂಡ ತಿಳಿಸಿದರು.

ಜಿಲ್ಲೆಯಲ್ಲಿ ನಿನ್ನೆಯವರೆಗೆ 15 ಪ್ರಕರಣಗಳು ವರದಿಯಾಗಿದ್ದು, ಇಂದಿನ 6 ಸೇರಿದಂತೆ ಒಟ್ಟು 21 ಪ್ರಕರಣಗಳು ವರದಿಯಾದಂತಾಗಿದೆ. ಜಿಲ್ಲೆಯಲ್ಲಿ ನಿನ್ನೆ ವರದಿಯಾದ ಇನ್ನೊಂದು ಪ್ರಕರಣದಲ್ಲಿ ಚಿತ್ರದುರ್ಗದಿಂದ ಕ್ಯಾನ್ಸರ್ ಚಿಕಿತ್ಸೆ ಗೆಂದು ಮೇ 16ರಂದು ಕೆಎಂಸಿಗೆ ದಾಖಲಾದ 17ರ ಹರೆಯದ ಬಾಲಕಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿತ್ತು. ಇದೀಗ ಆಕೆಗೆ ಕೆಎಂಸಿಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಅವರು ಹೇಳಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X