Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಾರಾಷ್ಟ್ರ-ಕರ್ನಾಟಕ ಗಡಿ...

ಮಹಾರಾಷ್ಟ್ರ-ಕರ್ನಾಟಕ ಗಡಿ ನಿಪ್ಪಾಣಿಯಲ್ಲಿ ಸಂಕಷ್ಟದಲ್ಲಿದ್ದ 400 ಮಂದಿಗೆ ಬರಲು ಅವಕಾಶ: ಕೋಟ

ವಾರ್ತಾಭಾರತಿವಾರ್ತಾಭಾರತಿ20 May 2020 9:35 PM IST
share
ಮಹಾರಾಷ್ಟ್ರ-ಕರ್ನಾಟಕ ಗಡಿ ನಿಪ್ಪಾಣಿಯಲ್ಲಿ ಸಂಕಷ್ಟದಲ್ಲಿದ್ದ 400 ಮಂದಿಗೆ ಬರಲು ಅವಕಾಶ: ಕೋಟ

ಉಡುಪಿ, ಮೇ 20: ಕಳೆದ ರವಿವಾರ ಮಹಾರಾಷ್ಟ್ರ, ಗುಜರಾತ್ ಸೇರಿದಂತೆ ಕೆಲ ರಾಜ್ಯಗಳಿಂದ ಕರ್ನಾಟಕಕ್ಕೆ ಮರಳುವ ಕನ್ನಡಿಗರಿಗೆ ರಾಜ್ಯಕ್ಕೆ ಮರಳಲು ನೀಡಿದ ಅವಕಾಶವನ್ನು ಮತ್ತೆ ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಎರಡು ದಿನಗಳಿಂದ ಮಹಾರಾಷ್ಟ್ರ-ಕರ್ನಾಟಕ ಗಡಿಯಾದ ನಿಪ್ಪಾಣಿಯಲ್ಲಿ ಸಂಕರ್ಷದಲ್ಲಿದ್ದ ಗರ್ಭಿಣಿಯರು, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಉಡುಪಿ ಮತ್ತು ಮಂಗಳೂರಿನ ಮೂರು ಬಸ್‌ಗಳ ಜನರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಾಡಿಕೊಂಡ ವಿಶೇಷ ಮನವಿಯ ಮೇರೆಗೆ ಮಾನವೀಯ ನೆಲೆಯಲ್ಲಿ ರಾಜ್ಯ ಪ್ರವೇಶಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದಿಂದ ಉಡುಪಿಗೆ ಹೊರಟ 32 ಮಂದಿ ಪ್ರಯಾಣಿಕರಿರುವ ಬಸ್ಸಿನಲ್ಲಿದ್ದ ಏಳು ತಿಂಗಳ ಗರ್ಭಿಣಿಯೊಬ್ಬರು ನಿಪ್ಪಾಣಿಯಲ್ಲಿ ತೀವ್ರ ತೊಂದರೆ ಅನುಭವಿಸುತಿದ್ದ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯದ ಗಡಿ ದಾಟಲು ಅವಕಾಶ ನೀಡುವಂತೆ ಕೋರಿ ಬಂದ ಅಸಂಖ್ಯಾತ ದೂರವಾಣಿ ಕರೆಗಳ ಬಳಿಕ ಇಂದು ಸಂಜೆ ತಾನು ಮುಖ್ಯಮಂತ್ರಿಯವರೊಂದಿಗೆ ಮಾತನಾಡಿ, ಮಾನವೀಯತೆಯ ನೆಲೆಯಲ್ಲಿ ಉಡುಪಿ ಮತ್ತು ಮಂಗಳೂರಿನ ಮೂರು ಬಸ್ಸುಗಳಿಗೆ ಬರಲು ಅವಕಾಶ ನೀಡುವಂತೆ ಮನವಿ ಮಾಡಿದ್ದೆ ಎಂದು ಕೋಟ ರಾತ್ರಿ ‘ವಾರ್ತಾಭಾರತಿ’ಗೆ ತಿಳಿಸಿದರು.

ತಕ್ಷಣ ಮುಖ್ಯಮಂತ್ರಿ ಅವರು ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಕರೆ ಮಾಡಿ ಈ ಬಸ್‌ಗಳಿಗೆ ರಾಜ್ಯ ಪ್ರವೇಶಿಸಲು ಅವಕಾಶ ನೀಡುವಂತೆ ತಿಳಿಸಿದ್ದು, ಅದರಂತೆ ಮುಖ್ಯ ಕಾರ್ಯದರ್ಶಿಗಳು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು ಎಂದವರು ವಿವರಿಸಿದರು.

ಇವರೆಲ್ಲರು ಮಹಾರಾಷ್ಟ್ರದ ಪಾಸ್‌ಗಳನ್ನು ಹೊಂದಿದ್ದರೂ, ಕರ್ನಾಟಕ ರಾಜ್ಯ ಗಡಿ ಪ್ರವೇಶಕ್ಕಾಗಿ ಸೇವಾಸಿಂಧು ಪಾಸ್‌ಗಳನ್ನು ಹೊಂದಿರಲಿಲ್ಲ. ಹೀಗಾಗಿ ಅವರಿಗೆ ರಾಜ್ಯದೊಳಗೆ ಪ್ರವೇಶಿಸಲು ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಇವವರೆಲ್ಲ ನಿಪ್ಪಾಣಿಯಲ್ಲೇ ಕಳೆದೆರಡು ದಿನಗಳಿಂದ ಬಸ್ಸಿನಲ್ಲೇ ತಂಗಿದ್ದರು. ಉಡುಪಿ ಕುಕ್ಕೆಹಳ್ಳಿಯ ಗರ್ಭಿಣಿ ದೀಪಿಕಾ ಶೆಟ್ಟಿಯೂ ಇವರಲ್ಲಿ ಸೇರಿದ್ದರು ಎನ್ನಲಾಗಿದೆ. ಸ್ಥಳೀಯ ಹೊಟೇಲ್ ಉದ್ಯಮಿಗಳು ಇವರಿಗೆ ಊಟ-ತಿಂಡಿಯ ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಅಷ್ಟರಲ್ಲಿ ಮಂಡ್ಯ, ಚಿಕ್ಕಮಗಳೂರು, ಹಾಸನಗಳ ಸುಮಾರು 400 ಮಂದಿ 15ರಷ್ಟು ಬಸ್ಸುಗಳಲ್ಲಿ ಅಲ್ಲಿಗೆ ಬಂದು ತಮಗೂ ಈ ಅವಕಾಶ ನೀಡಬೇಕೆಂದು ಕೋರಿಕೆ ಸಲ್ಲಿಸಿದರು. ಕೊನೆಗೆ ಮುಖ್ಯ ಕಾರ್ಯದರ್ಶಿ ಗಳೊಂದಿಗೆ ಸಮಾಲೋಚಿಸಿ ಅವರಿಗೂ ರಾಜ್ಯಕ್ಕೆ ಬರಲು ಅವಕಾಶ ನೀಡಲಾಯಿತು ಎಂದು ಸಚಿವರು ತಿಳಿಸಿದರು.

ಹೀಗಾಗಿ ನಿಪ್ಪಾಣಿ ಗಡಿ ಭಾಗದಲ್ಲಿ 400ರಷ್ಟು ಮಂದಿ ಇದ್ದು, ಅವರಿಗೆಲ್ಲಾ ರಾಜ್ಯ ಪ್ರವೇಶಿಸಲು ಅವಕಾಶ ನೀಡಲಾಗುತಿದ್ದು, ಬೆಳಗಾವಿ ಜಿಲ್ಲಾಧಿಕಾರಿ ಇದಕ್ಕಾಗಿ ಸೂಕ್ತ ಕ್ರಮಕೈಗೊಂಡಿದ್ದಾರೆ. ಕರಾವಳಿಯ ಮಂದಿ ಮೂರು ಬಸ್‌ಗಳಲ್ಲಿ ಉಡುಪಿ ಮತ್ತು ಮಂಗಳೂರಿಗೆ ಬರಲಿದ್ದಾರೆ ಎಂದು ಕೋಟ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X