Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಿಂದ 1.2 ಲಕ್ಷ ಕೋಟಿ ರೂ. ವಿದೇಶಿ...

ಭಾರತದಿಂದ 1.2 ಲಕ್ಷ ಕೋಟಿ ರೂ. ವಿದೇಶಿ ಹೂಡಿಕೆ ಹಿಂದೆಗೆತ: ವರದಿ

ಕೊರೋನ ಲಾಕ್‌ಡೌನ್

ವಾರ್ತಾಭಾರತಿವಾರ್ತಾಭಾರತಿ20 May 2020 9:41 PM IST
share
ಭಾರತದಿಂದ 1.2 ಲಕ್ಷ ಕೋಟಿ ರೂ. ವಿದೇಶಿ ಹೂಡಿಕೆ ಹಿಂದೆಗೆತ: ವರದಿ

ಹೊಸದಿಲ್ಲಿ, ಮೇ 20: ಮಾರಕ ಕೊರೋನ ವೈರಸ್ ಸೋಂಕಿನ ಮಧ್ಯೆಯೇ ವಿದೇಶಿ ಹೂಡಿಕೆದಾರರು ಏಶ್ಯಾ ಖಂಡದಲ್ಲಿ ಹೂಡಿಕೆ ಮಾಡಿದ್ದ ಸುಮಾರು 1.9 ಲಕ್ಷ ಕೋಟಿ ರೂ. ಬಂಡವಾಳ ಹಿಂಪಡೆದಿದ್ದು, ಇದರಲ್ಲಿ ಭಾರತದಿಂದ ಹಿಂಪಡೆದ ಹೂಡಿಕೆಯ ಮೊತ್ತ ಸುಮಾರು 1.2 ಲಕ್ಷ ಕೋಟಿ ರೂ. ಎಂದು ಅಮೆರಿಕದ ಕಾಂಗ್ರೆಷನಲ್ ರಿಸರ್ಚ್ ಸೆಂಟರ್ ವರದಿ ಮಾಡಿದೆ.

ಆರ್ಥಿಕ ಚಟುವಟಿಕೆಗಳಿಗೆ ಬೆಂಬಲ ನೀಡುವ ವಿತ್ತೀಯ ಮತ್ತು ಹಣಕಾಸಿನ ನೀತಿಗಳನ್ನು ಜಾರಿಗೊಳಿಸಲು ಸರಕಾರಗಳಿಗೆ ಕೊರೋನ ವೈರಸ್ ಸೋಂಕು ಬಹುದೊಡ್ಡ ಸವಾಲಾಗಿದೆ ಎಂದು ‘ಜಾಗತಿಕ ಅರ್ಥವ್ಯವಸ್ಥೆಯ ಮೇಲೆ ಕೋವಿಡ್-19ರ ಪ್ರಭಾವ’ ಎಂಬ ಶೀರ್ಷಿಕೆಯ ವರದಿಯಲ್ಲಿ ಅಭಿಪ್ರಾಯಪಡಲಾಗಿದೆ.

ಈ ನೀತಿ, ವಿಧಾನಗಳು ರಾಷ್ಟ್ರೀಯತೆಯನ್ನು ಉತ್ತೇಜಿಸುವ ದೇಶ ಹಾಗೂ ಸಂಘಟಿತ ಅಂತರಾಷ್ಟ್ರೀಯ ಪ್ರತಿವರ್ತನೆಯ ಪರವಿರುವ ದೇಶಗಳ ನಡುವಿನ ವ್ಯತ್ಯಾಸವನ್ನು ಪ್ರಕಟಿಸುತ್ತವೆ. ಅಲ್ಲದೆ ಅಭಿವೃದ್ಧಿ ಹೊಂದಿದ ಮತ್ತು ಹೊಂದುತ್ತಿರುವ ದೇಶಗಳ ಕಾರ್ಯನೀತಿಗಳಲ್ಲಿ ಇರುವ ವ್ಯತ್ಯಾಸಗಳನ್ನು ಪ್ರದರ್ಶಿಸುತ್ತದೆ ಎಂದು ವರದಿ ತಿಳಿಸಿದೆ.

ತುಸು ವಿಳಂಬವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಬ್ಯಾಂಕ್‌ಗಳು ಹಣಕಾಸು ಮಾರುಕಟ್ಟೆಗಳಲ್ಲಿ ಸರಣಿ ಉಪಕ್ರಮಗಳನ್ನು ಜಾರಿಗೊಳಿಸಿವೆ. ಸರಕಾರಗಳೂ ಅರ್ಥವ್ಯವಸ್ಥೆಗೆ ಉತ್ತೇಜನ ನೀಡಲು ಹಣಕಾಸು ನೀತಿ ಉಪಕ್ರಮಗಳಿಗೆ ಚಾಲನೆ ನೀಡಿವೆ. ಆದರೆ ಈಗಿನ ಆರ್ಥಿಕ ಪರಿಸ್ಥಿತಿಯಲ್ಲಿರುವ ಅನಿಶ್ಚಿತತೆ, ಜಾಗತಿಕವಾಗಿ ಹಬ್ಬಿರುವ ಕೊರೋನ ಸೋಂಕು, ಮತ್ತು ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಿರುವ ನಿರ್ಬಂಧಗಳು ಮಾರುಕಟ್ಟೆಯ ಚಂಚಲತೆಗೆ ಕೊಡುಗೆ ನೀಡುತ್ತಿವೆ. ಇದರ ಜೊತೆಗೆ ಕಚ್ಛಾತೈಲದ ಬೆಲೆಯಲ್ಲಿ ಐತಿಹಾಸಿಕ ಕುಸಿತವಾಗಿದೆ. ಈ ಪ್ರವೃತ್ತಿ ಜಾಗತಿಕ ಮಟ್ಟದಲ್ಲಿ ಆರ್ಥಿಕ ಕುಸಿತವನ್ನು ಪ್ರತಿಬಿಂಬಿಸುತ್ತಿದೆ ಎಂದು ವರದಿ ತಿಳಿಸಿದೆ.

ಕೊರೋನ ವೈರಸ್‌ನ ಪ್ರಭಾವದಿಂದಾಗಿ ಬಹುತೇಕ ಪ್ರಮುಖ ದೇಶಗಳ ಅರ್ಥವ್ಯವಸ್ಥೆ ಕುಸಿತದ ಹಾದಿಯಲ್ಲಿದ್ದರೂ 2020ರಲ್ಲಿ ಚೀನಾ, ಭಾರತ ಮತ್ತು ಇಂಡೋನೇಶ್ಯಾ ದೇಶಗಳ ಅರ್ಥವ್ಯವಸ್ಥೆ ಮಾತ್ರ ಸಣ್ಣಪ್ರಮಾಣದಲ್ಲಿ ಆದರೂ ಸಕಾರಾತ್ಮಕ ರೀತಿಯ ಅಭಿವೃದ್ಧಿ ದಾಖಲಿಸಲಿದೆ ಎಂದು ವರದಿ ತಿಳಿಸಿದೆ. ಯುರೋಪ್‌ನಲ್ಲಿ ಜರ್ಮನಿ, ಫ್ರಾನ್ಸ್, ಇಂಗ್ಲೆಂಡ್, ಸ್ಪೇನ್ ಮತ್ತು ಇಟಲಿ ಮುಂತಾದ ದೇಶಗಳ 30 ಮಿಲಿಯನ್ ಜನತೆ ಸರಕಾರದ ನೆರವಿಗೆ ಅರ್ಜಿ ಸಲ್ಲಿಸಿದ್ದಾರೆ. 2020ರ ಪ್ರಥಮ ತ್ರೈಮಾಸಿಕ ಅವಧಿಯಲ್ಲಿ ಯುರೋ ವಲಯದ ಅರ್ಥವ್ಯವಸ್ಥೆ 3.8% ಕುಗ್ಗಿದ್ದು 1995ರ ಬಳಿಕದ ಅತೀ ದೊಡ್ಡ ತ್ರೈಮಾಸಿಕ ಕುಸಿತವಾಗಿದೆ. ಪ್ರಾಥಮಿಕ ಮಾಹಿತಿಯಂತೆ ಈ ವಿತ್ತವರ್ಷದ ಪ್ರಥಮ ತ್ರೈಮಾಸಿಕದಲ್ಲಿ ಅಮೆರಿಕದ ಜಿಡಿಪಿ 4.8% ಕುಗ್ಗಿದ್ದು, 2008ರ ಬಳಿಕದ ಅತೀ ದೊಡ್ಡ ತ್ರೈಮಾಸಿಕ ಕುಸಿತವಾಗಿದೆ.

ಮಾರ್ಚ್ ಮಧ್ಯಭಾಗದಿಂದ ಎಪ್ರಿಲ್ ಅಂತ್ಯದವರೆಗಿನ 5 ವಾರಗಳ ಅವಧಿಯಲ್ಲಿ 30 ಮಿಲಿಯನ್‌ಗೂ ಹೆಚ್ಚಿನ ಅಮೆರಿಕನ್ನರು ನಿರುದ್ಯೋಗ ವಿಮೆಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೊರೋನ ವೈರಸ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಭಾರತದಲ್ಲಿ ಜಾರಿಗೊಳಿಸಿದ ಲಾಕ್‌ಡೌನ್‌ನಿಂದ ಭಾರತದ ಅರ್ಥವ್ಯವಸ್ಥೆ ಅತೀ ಕೆಟ್ಟ ಆರ್ಥಿಕ ಹಿಂಜರಿತ ದಾಖಲಿಸಲಿದೆ ಎಂದು ಅಮೆರಿಕ ಮೂಲದ ಬಹುರಾಷ್ಟ್ರೀಯ ಹೂಡಿಕೆ ಬ್ಯಾಂಕ್ ಗೋಲ್ಡ್‌ಮನ್ ಸ್ಯಾಚ್ಸ್ ಇತ್ತೀಚೆಗೆ ಅಂದಾಜಿಸಿದೆ. ವಿಶ್ವದ ಅರ್ಥವ್ಯವಸ್ಥೆಯ ಪುನಶ್ಚೇತನದ ಪ್ರಮಾಣ ಈ ಹಿಂದೆ ಅಂದಾಜಿಸಿದ್ದಕ್ಕಿಂತ ಕಡಿಮೆಯಾಗಲಿದೆ ಎಂಬ ಅಂತರಾಷ್ಟ್ರೀಯ ಹಣಕಾಸು ಸಂಘಟನೆಯ ವರದಿಯನ್ನು ಕಾಂಗ್ರೆಷನಲ್ ರಿಸರ್ಚ್ ಸೆಂಟರ್‌ನ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜಾಗತಿಕ ಅರ್ಥವ್ಯವಸ್ಥೆಯ ಯೋಜಿತ ಕುಸಿತವನ್ನು ‘ಮಹಾನ್ ಲಾಕ್‌ಡೌನ್’ ಎಂದು ಬಣ್ಣಿಸಲಾಗಿದ್ದು, ಜಾಗತಿಕ ಅರ್ಥವ್ಯವಸ್ಥೆಯು ದಶಕಗಳ ಹಿಂದೆ ಕಂಡುಬಂದಿದ್ದ ಜಾಗತಿಕ ಆರ್ಥಿಕ ಬಿಕ್ಕಟ್ಟಿಗಿಂತಲೂ ಹೆಚ್ಚಿನ ಹಿಂಜರಿತಕ್ಕೆ ಸಾಕ್ಷಿಯಾಗಲಿದೆ ಎಂದು ವರದಿ ಹೇಳಿದೆ.

ಭಾರತದ ಜಿಡಿಪಿ ದರ ಕುಸಿತ

ಐಎಂಎಫ್ ಭಾರತದ ಅಭಿವೃದ್ಧಿ ದರ ಈ ಹಿಂದೆ ಅಂದಾಜಿಸಿದ್ದಕ್ಕಿಂತ ಕಡಿಮೆ ಪ್ರಮಾಣದಲ್ಲಿ ಇರಲಿದೆ ಎಂದು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ(ಐಎಂಎಫ್) ತಿಳಿಸಿದೆ. 2020-21ರ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ದರ 5.8%ರ ಪ್ರಮಾಣದಲ್ಲಿ ಇರಲಿದೆ ಎಂದು ಈ ಹಿಂದೆ ತಿಳಿಸಿದ್ದ ಐಎಂಎಫ್, ಇದೀಗ ಕೊರೋನ ವೈರಸ್ ಮತ್ತು ಲಾಕ್‌ಡೌನ್‌ನಿಂದಾಗಿ ಈ ಪ್ರಮಾಣ 1.9%ಕ್ಕೆ ಇಳಿಯಲಿದೆ ಎಂದು ಅಂದಾಜಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X