Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್ ಡೌನ್: ತಂದೆಯನ್ನು ಸೈಕಲ್‌ನಲ್ಲಿ...

ಲಾಕ್ ಡೌನ್: ತಂದೆಯನ್ನು ಸೈಕಲ್‌ನಲ್ಲಿ ಕೂರಿಸಿ 1,200 ಕಿ.ಮೀ. ಕ್ರಮಿಸಿದ 15 ವರ್ಷದ ಬಾಲಕಿ

ವಾರ್ತಾಭಾರತಿವಾರ್ತಾಭಾರತಿ20 May 2020 10:27 PM IST
share
ಲಾಕ್ ಡೌನ್: ತಂದೆಯನ್ನು ಸೈಕಲ್‌ನಲ್ಲಿ ಕೂರಿಸಿ 1,200 ಕಿ.ಮೀ. ಕ್ರಮಿಸಿದ 15 ವರ್ಷದ ಬಾಲಕಿ

ಪಾಟ್ನ, ಮೇ 20: ಬಿಹಾರದ 15 ವರ್ಷದ ಹುಡುಗಿಯೊಬ್ಬಳು ತೀವ್ರ ಅಸ್ವಸ್ಥಗೊಂಡಿದ್ದ ತಂದೆಯನ್ನು ಸೈಕಲ್‌ನ ಕ್ಯಾರಿಯರ್ ಮೇಲೆ ಕೂರಿಸಿಕೊಂಡು ಸುಮಾರು 1,200 ಕಿ.ಮೀ ದೂರದವರೆಗೆ ಸೈಕಲ್ ತುಳಿದು ಸ್ವಂತ ಗ್ರಾಮ ತಲುಪಿದ ಸಾಹಸ ಮೆರೆದಿದ್ದಾಳೆ.

ಹರ್ಯಾಣದ ಗುರುಗ್ರಾಮದಿಂದ ಬಿಹಾರದ ದರ್ಭಾಂಗ ಜಿಲ್ಲೆಗೆ ತಲುಪಿದ ತಂದೆ- ಮಗಳನ್ನು ಈಗ ಅವರ ಗ್ರಾಮ ಸಿರುಲಿಯ ಬಳಿ ಇರುವ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಿಹಾರ ಮೂಲದ ಮೋಹನ್ ಪಾಸ್ವಾನ್ ಎಂಬಾತ ಗುರುಗ್ರಾಮದಲ್ಲಿ ಆಟೋರಿಕ್ಷಾ ಚಾಲಕನ ಕೆಲಸ ಮಾಡುತ್ತಿದ್ದ. ಈತನ ಪತ್ನಿ ಊರಿನಲ್ಲೇ ಅಂಗನವಾಡಿ ಶಿಕ್ಷಕಿಯಾಗಿದ್ದರೆ, ಪಾಸ್ವಾನ್ ಜೊತೆ ಆತನ 15 ವರ್ಷದ ಪುತ್ರಿ ಜ್ಯೋತಿ ಕುಮಾರಿ ಇದ್ದಳು. ಆದರೆ ಕೆಲವು ತಿಂಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡ ಪಾಸ್ವಾನ್‌ಗೆ ಚಾಲಕ ವೃತ್ತಿ ನಿರ್ವಹಿಸಲು ಸಾಧ್ಯವಾಗದೆ ಮನೆಯಲ್ಲೇ ಹಾಸಿಗೆ ಹಿಡಿದಿದ್ದ. ಈ ಮಧ್ಯೆ, ಬಾಡಿಗೆ ನೀಡಿ, ಇಲ್ಲಾ ಮನೆ ಖಾಲಿ ಮಾಡಿ ಎಂದು ಮನೆಯ ಮಾಲಕರು ಒತ್ತಡ ಹೇರತೊಡಗಿದರು. ಈ ಮಧ್ಯೆ ಲಾಕ್‌ಡೌನ್ ಜಾರಿಯಾದ ಕಾರಣ ಪಾಸ್ವಾನ್‌ಗೆ ಯಾವುದೇ ಕೆಲಸ ಸಿಗಲಿಲ್ಲ. ಆದ್ದರಿಂದ ಹಣದ ಕೊರತೆಯಾಗಿ ಔಷಧವನ್ನೂ ತ್ಯಜಿಸಬೇಕಾಯಿತು. ಆಗ ಜ್ಯೋತಿ ಕುಮಾರಿ ತಂದೆಯ ಆರೈಕೆಯ ಹೊಣೆ ಹೊತ್ತಳು. ಲಾಕ್‌ಡೌನ್ ವಿಸ್ತರಣೆಯಾದ ಕಾರಣ ಹುಟ್ಟೂರಿಗೆ ವಾಪಸಾಗಲು ತಂದೆ ಮಗಳು ನಿರ್ಧರಿಸಿದರು. ಆದರೆ ವಾಹನ ಸೌಕರ್ಯವಿರಲಿಲ್ಲ ಮತ್ತು ಪಾಸ್ವಾನ್‌ಗೆ ನಡೆದುಕೊಂಡು ಹೋಗಲು ಸಾಧ್ಯವಿರಲಿಲ್ಲ. ಕಡೆಗೆ ಮಗಳ ಒತ್ತಾಯದ ಮೇರೆಗೆ, ಕೈಯಲ್ಲಿದ್ದ ಅಲ್ಪಸ್ವಲ್ಪ ಹಣವನ್ನು ತೆತ್ತು ಹಳೆಯ ಸೈಕಲ್ ಒಂದನ್ನು ಖರೀದಿಸಿದರು. ಆದರೆ ಸೈಕಲ್‌ನಲ್ಲಿ ಅಷ್ಟು ದೂರ ಪ್ರಯಾಣಿಸುವುದು ಸುಲಭವಲ್ಲ ಎಂದು ಮಗಳಿಗೆ ಬುದ್ಧಿ ಹೇಳಿದರೂ ಆಕೆ ಹಟ ಬಿಡಲಿಲ್ಲ. ಅಂತಿಮವಾಗಿ ಪಾಸ್ವಾನ್‌ನನ್ನು ಸೈಕಲ್ ಕ್ಯಾರಿಯರ್ ಮೇಲೆ ಕೂರಿಸಿಕೊಂಡು ಜ್ಯೋತಿ ಗುರುಗ್ರಾಮದಿಂದ ಹೊರಟಳು.

ದಿನಾ 30ರಿಂದ 40 ಕಿ.ಮೀ ದೂರ ಕ್ರಮಿಸುತ್ತಿದ್ದೆವು. ದಾರಿಯಲ್ಲಿ ಕೆಲವೆಡೆ ಅನಾಥರಿಗೆ, ಬಡವರಿಗೆ ಆಹಾರ ವಿತರಿಸುತ್ತಿದ್ದಾಗ ನಾವೂ ಕೈಯೊಡ್ಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದೆವು. ಒಮ್ಮೊಮ್ಮೆ ಕೆಲವು ಲಾರಿಯವರು ನಿಲ್ಲಿಸಿ ನಮ್ಮನ್ನು ಸೈಕಲ್ ಸಮೇತ ಕರೆದೊಯ್ಯುತ್ತಿದ್ದರು. ಅಂತೂ ಕೆಲವು ವಾರದ ಬಳಿಕ ನಮ್ಮ ರಾಜ್ಯವನ್ನು ಸೇರಿಕೊಂಡೆವು ಎಂದು ಪಾಸ್ವಾನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X