Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಿಯಾದ ಸಂಖ್ಯೆ 20 ಲಕ್ಷ ಕೋಟಿ ರೂ....

ಸರಿಯಾದ ಸಂಖ್ಯೆ 20 ಲಕ್ಷ ಕೋಟಿ ರೂ. ಅಲ್ಲ, 1.86 ಲಕ್ಷ ಕೋಟಿ ರೂ.: ಚಿದಂಬರಂ

ವಾರ್ತಾಭಾರತಿವಾರ್ತಾಭಾರತಿ20 May 2020 11:02 PM IST
share
ಸರಿಯಾದ ಸಂಖ್ಯೆ 20 ಲಕ್ಷ ಕೋಟಿ ರೂ. ಅಲ್ಲ, 1.86 ಲಕ್ಷ ಕೋಟಿ ರೂ.: ಚಿದಂಬರಂ

ಹೊಸದಿಲ್ಲಿ, ಮೇ 20: ಕುಸಿದಿರುವ ಆರ್ಥಿಕತೆಗೆ ಉತ್ತೇಜನ ತುಂಬಲು ಕೇಂದ್ರ ಸರಕಾರ ಘೋಷಿಸಿರುವ 20 ಲಕ್ಷ ಕೋಟಿ ರೂ. ಮೊತ್ತದ ಪ್ಯಾಕೇಜ್ ಕೇವಲ ತಮಾಷೆಯಾಗಿದೆ. ಈ 20 ಲಕ್ಷ ಕೋಟಿ ರೂ. ಎಲ್ಲಿಂದ ಬಂತು. ಸರಿಯಾದ ಸಂಖ್ಯೆ 1,86,650 ಕೋಟಿ ರೂ. ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಹೇಳಿದ್ದಾರೆ.

 ಪ್ಯಾಕೇಜ್‌ನ ಆರ್ಥಿಕ ಮೌಲ್ಯವನ್ನು ಪ್ರತಿಯೊಂದು ಬ್ಯಾಂಕ್ ಕೂಡಾ ನಿಗದಿಮಾಡಿದ್ದು 3 ಲಕ್ಷ ಕೋಟಿ ಅತ್ಯಂತ ಯಥೇಚ್ಛ ವೌಲ್ಯಾಂಕನವಾಗಿದೆ. ಸರಕಾರದ ಬಳಿ ಇಷ್ಟು ಹಣವಿಲ್ಲ. ಅವರು ಬೇರೆಡೆಯಿಂದ ಸಾಲ ಪಡೆಯಬೇಕಾಗಿದೆ. ಆದರೆ ವಿತ್ತ ಸಚಿವೆ ಸಾಲ ಪಡೆಯುವ ಬಗ್ಗೆ ಸೊಲ್ಲೆತ್ತುತ್ತಿಲ್ಲ. ಆದರೆ ಆರ್ಥಿಕ ಹಿಂಜರಿತದ ಪ್ರಮಾಣವನ್ನು ಕಡಿಮೆ ಅಂದಾಜಿಸುವುದು ಸರಿಯಲ್ಲ. ಭಾರತ ಮಾತ್ರವಲ್ಲ, ಎಲ್ಲಾ ರಾಷ್ಟ್ರಗಳೂ ಆರ್ಥಿಕ ಹಿಂಜರಿತದ ಹಾದಿಯಲ್ಲಿವೆ. ಭಾರತವನ್ನು ಕೆಳದರ್ಜೆಗೆ ಇಳಿಸುವುದಾದರೆ, ವಿಶ್ವದ ನೂರಾರು ದೇಶಗಳನ್ನೂ ಕೆಳದರ್ಜೆಗೆ ಇಳಿಸಬೇಕು. ತುಲನಾತ್ಮಕ ರೇಟಿಂಗ್ ಕೂಡಾ ಒಂದೇ ಆಗಿರುತ್ತದೆ ಎಂದು ಚಿದಂಬರಂ ಹೇಳಿದ್ದಾರೆ.

ಸರಕಾರವನ್ನು ಭಾರತದ ಜನತೆ ಕ್ಷಮಿಸಬಹುದು. ಆದರೆ ಸರಕಾರ ತಮ್ಮ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ಅವರೆಂದಿಗೂ ಮರೆಯುವುದಿಲ್ಲ. ಮುಂದಿನ ಸಾರ್ವತ್ರಿಕ ಚುನಾವಣೆಗೆ 4 ವರ್ಷಗಳ ಅವಧಿಯಿದೆ ಎಂಬ ಧೈರ್ಯದಿಂದ ಕೇಂದ್ರ ಸರಕಾರ ಹೀಗೆ ಮಾಡುತ್ತಿದೆ. ಆದರೆ ಭಾರತದ ಜನತೆ ಮೂರ್ಖರಲ್ಲ. ಕಳೆದ ಎರಡು ವರ್ಷದಿಂದ ಅವರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ ಮತ್ತು ಈಗ ಅಭೂತಪೂರ್ವ ತೊಂದರೆ ಎದುರಾಗಿದೆ. ಇದನ್ನು ಅವರು ನಾಲ್ಕು ವರ್ಷದ ಬಳಿಕವೂ ನೆನಪಿನಲ್ಲಿರಿಸಿಕೊಳ್ಳುತ್ತಾರೆ ಎಂದರು.

 ಸರಕಾರದ ಆತ್ಮನಿರ್ಭರತೆ ಉಪಕ್ರಮದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸ್ವಾವಲಂಬನೆಯ ಬಗ್ಗೆ ಯಾರದ್ದೂ ದೂರು ಇಲ್ಲ. ಪ್ರತೀ ದೇಶವೂ ಸಾಧ್ಯವಿದ್ದಷ್ಟು ಮಟ್ಟಿಗೆ ಸ್ವಾವಲಂಬಿಯಾಗಲು ಬಯಸುತ್ತದೆ. ಆದರೆ ಜಗತ್ತಿನಿಂದ ವಿಮುಖರಾಗುವುದು ಎಂದು ಇದರರ್ಥವಲ್ಲ. ಓರ್ವ ವ್ಯಕ್ತಿ ಸ್ಪರ್ಧಾತ್ಮಕ ಮನೋಭಾವ ಹೊಂದಿರಬೇಕು. ಆದರೆ ದಕ್ಷತೆ, ಪೈಪೋಟಿ, ವಿಶ್ವದ ಒಂದು ಭಾಗವಾಗಿರುವುದನ್ನು ತ್ಯಜಿಸಿ ಸ್ವಾವಲಂಬಿಯಾಗುವುದರಲ್ಲಿ ಅರ್ಥವಿಲ್ಲ ಎಂದರು.

ಈಗಿನ ಸರಕಾರ ಅರ್ಥಶಾಸ್ತ್ರಜ್ಞರ ಮತ್ತು ತಜ್ಞರ ಸಲಹೆ ಮತ್ತು ಶಿಫಾರಸುಗಳನ್ನು ಪರಿಗಣಿಸುವುದಿಲ್ಲ ಎಂದು ಅಸಮಾಧಾನ ಸೂಚಿಸಿದ ಅವರು, 2020-21ರ ಸಾಲಿನಲ್ಲಿ ದೇಶದ ಆರ್ಥಿಕತೆ ಬಣ್ಣಗೆಡಲಿದ್ದು ಮಂಕಾಗುವ ಸೂಚನೆಗಳಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X