ಮೇ 22: ಎಸ್ಸೆಸ್ಸೆಫ್ ರಾಜ್ಯ ಮಟ್ಟದ ತರ್ತೀಲ್ ಸಮಾರೋಪ

ಮಂಗಳೂರು, ಮೇ 21: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಪೆಢರೇಶನ್ ಕ್ಯಾಂಪಸ್ ಹಾಗೂ ವಿಸ್ಡಂ ವಿಭಾಗವು ಕ್ಯಾಂಪಸ್ ವಿದ್ಯಾರ್ಥಿಗಳಿಗೆ ಲಾಕ್ ಡೌನ್ ಸಮಯದಲ್ಲಿ ಆನ್ ಲೈನ್ ಮೂಲಕ ನಡೆಸಿದ ರಾಜ್ಯ ಮಟ್ಟದ ತರ್ತೀಲ್ ಸ್ಪರ್ಧೆಗಳ ಸಮಾರೋಪ ಸಮಾರಂಭವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸೈಯದ್ ಸಿಟಿಎಂ ಉಮರ್ ಅಸ್ಸಖಾಫ್ ತಂಙಳ್ ಮದನಿ ಅಧ್ಯಕ್ಷತೆಯಲ್ಲಿ ಮೇ 22ರಂದು ಬೆಳಗ್ಗೆ 10:30 ಗಂಟೆಗೆ ಆನ್ಲೈನ್ ನಲ್ಲಿ ಜರುಗಲಿದೆ.
ಎಸ್.ವೈ.ಎಸ್. ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಅಬ್ದುರ್ರಶೀದ್ ಝೈನಿ ಸಖಾಫಿ ಕಾಮಿಲ್ ಕಾರ್ಯಕ್ರಮ ಉದ್ಘಾಟಿಸಲಿರುವರು. ಹಝ್ರತ್ ಡಾ.ಮುಹಮ್ಮದ್ ಫಾಝಿಲ್ ರಝ್ವಿ ಕಾವಲ್ಕಟ್ಟೆ ದುಆಗೆ ನೇತೃತ್ವ ನೀಡಲಿರುವರು. ಎಸ್ಸೆಸ್ಸೆಫ್ ರಾಷ್ಟ್ರೀಯ ಅಧ್ಯಕ್ಷ ಶೌಕತ್ ನಈಮಿ ಬುಖಾರಿ ಅಭಿನಂದನಾ ಭಾಷಣ ಮಾಡಿ, ತರ್ತೀಲ್ ರಾಜ್ಯ ಮಟ್ಟದ ವಿಜೇತರನ್ನು ಘೋಷಣೆ ಮಾಡಲಿರುವರು.
ಸುನ್ನೀ ಕೋಆರ್ಡಿನೇಶನ್ ಚೆಯರ್ ಮ್ಯಾನ್ ಎಸ್.ಪಿ ಹಂಝ ಸಖಾಫಿ ಬಂಟ್ವಾಳ, ಪ್ರಧಾನ ಕಾರ್ಯದರ್ಶಿ ಪಿ.ಪಿ.ಮುಹಮ್ಮದ್ ಸಖಾಫಿ, ಎಸ್.ವೈ.ಎಸ್. ವೆಲ್ಫೇರ್ ರಾಜ್ಯ ಚೆಯರ್ ಮ್ಯಾನ್ ಜಿ.ಎಂ.ಮುಹಮ್ಮದ್ ಕಾಮಿಲ್ ಸಖಾಫಿ, ಇಶಾರ ಪಾಕ್ಷಿಕದ ಪ್ರಧಾನ ಸಂಪಾದಕ ಕೆ.ಎಂ. ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್, ಕೋಶಾಧಿಕಾರಿ ರವೂಫ್ ಖಾನ್, ಉಪಾಧ್ಯಕ್ಷ ಹಝ್ರತ್ ಗುಲಾಮುದ್ದೀನ್ ನೂರಿ, ಎಸ್ಸೆಸ್ಸೆಫ್ ರಾಜ್ಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ನಾವುಂದ, ರಾಜ್ಯ ಕಾರ್ಯದರ್ಶಿಗಳಾದ ಹಾಫಿಳ್ ಯಾಕೂಬ್ ಸಅದಿ ನಾವೂರು, ಕೆ.ಎಂ.ಮುಸ್ತಫ ನಈಮಿ ಹಾವೇರಿ, ಸಿರಾಜುದ್ದೀನ್ ಸಖಾಫಿ ಕನ್ಯಾನ, ಅಶ್ರಫ್ ರಝಾ ಅಂಜದಿ, ಹುಸೈನ್ ಸಅದಿ ಹೊಸ್ಮಾರ್, ನವಾಝ್ ಭಟ್ಕಳ ಮೊದಲಾದವರು ಭಾಗವಹಿಸಿ ಅಭಿನಂದನಾ ಭಾಷಣ ಮಾಡಲಿರುವರು ಎಂದು ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯೀಲ್ ಮಾಸ್ಟರ್ ಮೊಂಟೆಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.







