Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೌಚಾಲಯವನ್ನು ಕಡಿಮೆ ಬಳಸಬೇಕು..: ದೇಶೀಯ...

ಶೌಚಾಲಯವನ್ನು ಕಡಿಮೆ ಬಳಸಬೇಕು..: ದೇಶೀಯ ವಿಮಾನ ಪ್ರಯಾಣದ ವೇಳೆ ಪಾಲಿಸಬೇಕಾದ ನಿಯಮಗಳೇನು ?

ಇಲ್ಲಿದೆ ಸಂಪೂರ್ಣ ವಿವರ

ವಾರ್ತಾಭಾರತಿವಾರ್ತಾಭಾರತಿ21 May 2020 2:55 PM IST
share
ಶೌಚಾಲಯವನ್ನು ಕಡಿಮೆ ಬಳಸಬೇಕು..: ದೇಶೀಯ ವಿಮಾನ ಪ್ರಯಾಣದ ವೇಳೆ ಪಾಲಿಸಬೇಕಾದ ನಿಯಮಗಳೇನು ?

ಹೊಸದಿಲ್ಲಿ: ಸೋಮವಾರದಿಂದ ದೇಶೀಯ ವಿಮಾನ ಸೇವೆಗಳು ಭಾಗಶ: ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಕೋವಿಡ್-19 ಸಂದರ್ಭದಲ್ಲಿ ವಿಮಾನ ಹಾರಾಟಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಬಿಡುಗಡೆಗೊಳಿಸಿದೆ. ವೃದ್ಧರು, ಗರ್ಭಿಣಿಯರು ಮತ್ತು ಆರೋಗ್ಯ ಸಮಸ್ಯೆಯಿರುವವರು ವಿಮಾನಯಾನದಿಂದ ದೂರವಿರಬೇಕೆಂದು ಸೂಚಿಸಿದೆ.

ಸಚಿವಾಲಯ ಬಿಡುಗಡೆಗೊಳಿಸಿದ ಹೊಸ ಮಾರ್ಗಸೂಚಿ ಇಂತಿವೆ.

► ವಿಮಾನ ಹೊರಡುವುದಕ್ಕಿಂತ ಎರಡು ಗಂಟೆ ಮುಂಚಿತವಾಗಿ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕು.

► ಫೇಸ್ ಮಾಸ್ಕ್ ಅಗತ್ಯ.

► ವೆಬ್ ಚೆಕ್-ಇನ್ ಗೆ ಮಾತ್ರ ಅನುಮತಿ, ಬ್ಯಾಗೇಜ್ ಟ್ಯಾಗ್ ಅನ್ನೂ ಆನ್‍ಲೈನ್ ಮುಖಾಂತರ ಪಡೆಯಬೇಕು.

► ತಲಾ ಪ್ರಯಾಣಿಕರಿಗೆ ಒಂದು ಚೆಕ್-ಇನ್ ಬ್ಯಾಗ್‍ಗೆ ಅನುಮತಿ. ಬ್ಯಾಗೇಜ್ ಟ್ಯಾಗ್ ಅನ್ನು  ಆನ್‍ಲೈನ್ ಪ್ರಿಂಟ್ ಮಾಡಿ ಲಗೇಜ್‍ಗೆ ಜೋಡಿಸಬೇಕು.

►ಕಂಟೈನ್ಮೆಂಟ್ ವಲಯದವರಿಗೆ ಪ್ರಯಾಣಕ್ಕೆ ಅನುಮತಿಯಿಲ್ಲ.

► ಪ್ರಯಾಣಿಕರು  ಆರೋಗ್ಯ ಸೇತು ಆ್ಯಪ್ ಬಳಸಬೇಕು ಇಲ್ಲವೇ  ಸಂಪರ್ಕ ಮಾಹಿತಿಯೊಂದಿಗೆ ಸ್ವಯಂ-ಘೋಷಣೆ ಫಾರ್ಮ್ ನೀಡಬೇಕು.

► ಎಲ್ಲಾ ಸ್ಥಳಗಳಲ್ಲಿ ಸುರಕ್ಷಿತ ಅಂತರ ಕಾಪಾಡಬೇಕು, ಮಾರ್ಕರ್‍ಗಳನ್ನು ಹಾಗೂ ಚಿಹ್ನೆಗಳನ್ನು ಅನುಸರಿಸಬೇಕು.

ವಿಮಾನ ನಿಲ್ದಾಣದಲ್ಲಿ ಅನುಸರಿಸಬೇಕಾದ ನಿಯಮಗಳು

► ಪ್ರಯಾಣಿಕರು ಮಾಸ್ಕ್ ಧರಿಸಿರಬೇಕು.

► ಥರ್ಮಲ್ ಸ್ಕ್ರೀನಿಂಗ್‍ಗೆ ಒಳಗಾಗಬೇಕು.

► ಬ್ಯಾಗೇಜ್ ಪಡೆದಿರುವ ದೃಢೀಕರಣ ಎಸ್ಸೆಮ್ಮೆಸ್  ಮೂಲಕ ಮಾಡಲಾಗುವುದು.

► ವಿಮಾನ ಹೊರಡುವುದಕ್ಕಿಂತ ಕನಿಷ್ಠ ಒಂದು ಗಂಟೆ ಮೊದಲು ಬ್ಯಾಗೇಜ್ ನೀಡಬೇಕು.

► ಭದ್ರತಾ ಸಿಬ್ಬಂದಿ ಆದಷ್ಟು ಪ್ರಯಾಣಿಕರಿಂದ ದೂರ ನಿಂತಿರಬೇಕು.

► ಆರೋಗ್ಯ ಸೇತು ಸ್ಟೇಟಸ್ ಅನ್ನು ಸಿಬ್ಬಂದಿಗೆ ತೋರಿಸಬೇಕು. ಈ ಆ್ಯಪ್ ಡೌನ್‍ಲೋಡ್ ಮಾಡದೇ ಇದ್ದವರು ವಿಮಾನ ನಿಲ್ದಾಣದಲ್ಲಿ ಅದನ್ನು ಡೌನ್‍ಲೋಡ್ ಮಾಡಬೇಕು. 14 ವರ್ಷಗಳ ಕೆಳಗಿನ ಮಕ್ಕಳಿಗೆ ಈ ನಿಯಮ ಕಡ್ಡಾಯವಲ್ಲ.

►’ನಾಟ್ ಫಾರ್ ಯೂಸ್' ಕುರ್ಚಿಗಳಲ್ಲಿ ಕುಳಿತುಕೊಳ್ಳಬಾರದು.

► ಪ್ರಯಾಣಿಕರು ಸುರಕ್ಷತಾ ಕಿಟ್, ಮಾಸ್ಕ್, ಫೇಸ್ ಶೀಲ್ಡ್, ಸ್ಯಾನಿಟೈಸರ್ ಅನ್ನು ಬೋರ್ಡಿಂಗ್ ಗೇಟ್ ಸಮೀಪ ಪಡೆಯಬೇಕು.

► ಪ್ರಯಾಣಿಕರು ಬೋರ್ಡಿಂಗ್ ಪಾಸ್ ಅನ್ನು ಗೇಟ್ ಸಮೀಪ ಸ್ಕ್ಯಾನ್ ಮಾಡಬೇಕು, ಅಲ್ಲಿನ ಸಿಬ್ಬಂದಿಗೆ ಐಡಿ ಕಾರ್ಡ್ ತೋರಿಸಬೇಕು.

ವಿಮಾನದಲ್ಲಿ ಪಾಲಿಸಬೇಕಾದ ನಿಯಮಗಳು

► ಪ್ರಯಾಣಿಕರು ಅನುಕ್ರಮವಾಗಿ ವಿಮಾನ ಹತ್ತಬೇಕು.

► ವಿಮಾನದ ಶೌಚಾಲಯವನ್ನು ಆದಷ್ಟು ಕಡಿಮೆ ಬಳಸಬೇಕು.

► ಶೌಚಾಲಯದ ಹೊರಗೆ ಸರತಿ ನಿಲ್ಲುವಂತಿಲ್ಲ. ಮಕ್ಕಳು, ಹಿರಿಯರ ಜತೆ ಒಬ್ಬರು ಮಾತ್ರ ನಿಲ್ಲಬಹುದು.

► ಊಟ ನೀಡಲಾಗುವುದು, ಪ್ರಯಾಣಿಕರು ತಮ್ಮದೇ ಆಹಾರ ತರುವಂತಿಲ್ಲ, ಪ್ರತಿ ಸೀಟಿನಲ್ಲಿ ನೀರಿನ ಬಾಟಲಿ ಇಡಲಾಗುತ್ತದೆ.

► ವಿಮಾನದೊಳಗಡೆ ದಿನಪತ್ರಿಕೆ/ಮ್ಯಾಗಜೀನುಗಳಿಗೆ ಅನುಮತಿಯಿಲ್ಲ.

► ವಿಮಾನದಿಂದ ಇಳಿದ ನಂತರ ಸುರಕ್ಷಿತ ಅಂತರ ಕಾಪಾಡಿಕೊಂಡು ಬ್ಯಾಗೇಜ್‍ಗಾಗಿ ಕಾಯಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X