Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ದುಬೈನ 1, ಹೊರರಾಜ್ಯಗಳ 25...

ಉಡುಪಿ: ದುಬೈನ 1, ಹೊರರಾಜ್ಯಗಳ 25 ಪ್ರಕರಣಗಳು ಪಾಸಿಟಿವ್

ಕೊರೋನ ವೈರಸ್

ವಾರ್ತಾಭಾರತಿವಾರ್ತಾಭಾರತಿ21 May 2020 8:28 PM IST
share
ಉಡುಪಿ: ದುಬೈನ 1, ಹೊರರಾಜ್ಯಗಳ 25 ಪ್ರಕರಣಗಳು ಪಾಸಿಟಿವ್

ಉಡುಪಿ, ಮೇ 21: ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್‌ನ ಸಂಖ್ಯೆ ನಾಗಾಲೋಟದಲ್ಲಿ ಓಡುತ್ತಿವೆ. ಗುರುವಾರ ಒಂದೇ ದಿನದಲ್ಲಿ ಒಟ್ಟು 26 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇವುಗಳಲ್ಲಿ ಒಂದು ದುಬೈ ಯಿಂದ ಆಗಮಿಸಿದ ಯುವಕನದ್ದಾದರೆ, ಉಳಿದ 25 ಮಹಾರಾಷ್ಟ್ರ, ತೆಲಂಗಾಣ ಹಾಗೂ ಕೇರಳದಿಂದ ಜಿಲ್ಲೆಗೆ ಬಂದವರದ್ದಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಪತ್ತೆಯಾದ ಪಾಸಿಟಿವ್ ಪ್ರಕರಣಗಳ ಸಂಖ್ಯೆ 48 (ಚಿತ್ರದುರ್ಗದ ಬಾಲಕಿಯದ್ದು ಸೇರಿ)ಕ್ಕೇರಿದೆ.

ಆದರೆ ಅತ್ಯಂತ ಕಳವಳದ ವಿಷಯವೆಂದರೆ ಇಂದು ಪತ್ತೆಯಾದ 26 ಪ್ರಕರಣಗಳಲ್ಲಿ 15 ಪ್ರಕರಣಗಳು ಪುಟ್ಟ ಮಕ್ಕಳದ್ದಾಗಿವೆ. ಉಳಿದಂತೆ ಏಳು ಮಂದಿ ಪುರುಷರು ಹಾಗೂ ನಾಲ್ವರು ಮಹಿಳೆಯರಲ್ಲೂ ಸೋಂಕು ಕಂಡು ಬಂದಿದೆ. 15 ಮಂದಿಯಲ್ಲಿ 10 ಬಾಲಕರು ಹಾಗೂ ಐವರು ಬಾಲಕಿಯರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇದರೊಂದಿಗೆ ಮಹಾರಾಷ್ಟ್ರದಿಂದ ಬಂದ ಬೈಂದೂರು ತಾಲೂಕು ಶಿರೂರು ಮೂಲದ ತಾಯಿ (35) ಮತ್ತು ಒಂದು ವರ್ಷದ ಮಗು ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಕ್ವಾರಂಟೈನ್‌ನಲ್ಲಿದ್ದು, ಅವರಲ್ಲೂ ಇಂದು ಕೊರೋನ ಸೋಂಕು ಪತ್ತೆಯಾಗಿದೆ. ಅವರೀಗ ಕಾರವಾರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

ಇಂದು ಕೊರೋನಕ್ಕೆ ಪಾಸಿಟಿವ್ ಆದವರಲ್ಲಿ ಮಹಾರಾಷ್ಟ್ರದಿಂದ ಬಂದವರು 21 ಮಂದಿಯಾದರೆ, ಮೂವರು ತೆಲಂಗಾಣದವರು. ಇನ್ನೊಬ್ಬರು ಕೇರಳದಿಂದ ಮಣಿಪಾಲದ ಕೆಎಂಸಿಯಲ್ಲಿ ಚಿಕಿತ್ಸೆಗಾಗಿ ಪತಿಯೊಂದಿಗೆ ಬಂದ ಮಹಿಳೆ ಯಾಗಿದ್ದಾರೆ. ಮತ್ತೊಬ್ಬ ಯುವಕ ದುಬೈಯಿಂದ ಬಂವರು ಎಂದು ಅವರು ವಿವರಿಸಿದರು.

ಗುರುವಾರ ಪತ್ತೆಯಾದ 26 ಮಂದಿ ಕೊರೋನ ಸೋಂಕಿತರಲ್ಲಿ 15 ಮಂದಿ ಬೈಂದೂರು ತಾಲೂಕಿನವರು, ಐವರು ಕುಂದಾಪುರ ತಾಲೂಕಿನ ವರು, ಮೂವರು ಕಾರ್ಕಳ ಹಾಗೂ ಮೂವರು ಉಡುಪಿ ತಾಲೂಕಿನವರು. ಈ 26 ಮಂದಿಯಲ್ಲಿ 25 ಮಂದಿಯನ್ನು ಉಡುಪಿ ನಗರದಲ್ಲಿರುವ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೇರಳದಿಂದ ಚಿಕಿತ್ಸೆಗೆ ಬಂದ ಪತಿ ಕೊರೋನಕ್ಕೆ ನೆಗೆಟಿವ್ ಆದರೆ, ಪತ್ನಿ ಪಾಸಿಟಿವ್ ಆಗಿದ್ದಾರೆ. ಇವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ಐಸೋಲೇಷನ್ ವಾರ್ಡಿಗೆ ಸೇರಿಸಲಾಗಿದೆ.

ದುಬೈಯಿಂದ ಮೇ 18ರಂದು ಊರಿಗೆ ಬಂದ 37ರ ಹರೆಯದ ಯುವಕ ಮೂಲತ: ಶಿರ್ವದವರು. ಇವರು ಮಣಿಪಾಲದ ಹೊಟೇಲ್ ಒಂದರಲ್ಲಿ ಕ್ವಾರಂಟೈನ್‌ನಲ್ಲಿದ್ದರು. ಅವರನ್ನೀಗ ಉಡುಪಿ ಕೋವಿಡ್ ಆಸ್ಪತ್ರೆಗೆ ವರ್ಗಾಯಿ ಸಲಾಗಿದೆ ಎಂದು ಡಾ.ಸೂಡ ತಿಳಿಸಿದರು.

ಕೊರೋನ ಪಾಸಿಟಿವ್ ಕಂಡುಬಂದ 15 ಮಕ್ಕಳೆಲ್ಲರೂ 10 ವರ್ಷ ಪ್ರಾಯ ದೊಳಗಿನವರು. ಇವರಲ್ಲಿ ಗರಿಷ್ಠ 11 ಮಂದಿ ಬೈಂದೂರು ತಾಲೂಕಿನವರು. ಕುಂದಾಪುರ ತಾಲೂಕಿನ ಇಬ್ಬರು ಹಾಗೂ ಕಾರ್ಕಳ ತಾಲೂಕಿನ ಇಬ್ಬರು ಪುಟಾಣಿ ಮಕ್ಕಳು ಇಂದು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರ ಪ್ರಾಯ 10, 9(ಇಬ್ಬರು), 7, 6(4), 5, 4(2), 3, 2(2) ಹಾಗೂ 1 ವರ್ಷವಾಗಿದೆ. ಉಳಿದಂತೆ 51, 33, 32, 33, 24, 21, 37ರ ಹರೆಯದ ಪುರುಷರು, 60, 26, 51, 32ರ ಹರೆಯದ ಮಹಿಳೆಯರು ಕೊರೋನಕ್ಕೆ ಪಾಸಿಟಿವ್ ಆಗಿದ್ದಾರೆ.

ಕುಂದಾಪುರದಲ್ಲಿ ಚಿಕಿತ್ಸೆಗೆ ಸಿದ್ಧತೆ

ಕಳೆದ ಒಂದು ವಾರದಿಂದ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಹಠಾತ್ ವೃದ್ಧಿಯಾಗಿದ್ದು, ಮುಂದೆ ಇದು ಇನ್ನಷ್ಟು ಹೆಚ್ಚುವ ಸಾಧ್ಯತೆ ಇರುವು ದರಿಂದ ಸೋಂಕಿತರ ಚಿಕಿತ್ಸೆಗೆ ಕುಂದಾಪುರ ಮತ್ತು ಕಾರ್ಕಳದಲ್ಲಿ ಎರಡು ಆಸ್ಪತ್ರೆಗಳನ್ನು ಸೋಂಕಿತರ ಚಿಕಿತ್ಸೆಗೆ ಸಜ್ಜುಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸೂಡ ತಿಳಿಸಿದರು.

ಉಡುಪಿಯಲ್ಲಿರುವ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಗರಿಷ್ಠ 120 ಮಂದಿಗೆ ಚಿಕಿತ್ಸೆ ನೀಡಬಹುದಾಗಿದೆ. ಇದಕ್ಕಾಗಿ ಈಗ ಕುಂದಾಪುರ ತಾಲೂಕು ಆಸ್ಪತ್ರೆಯ ಬಳಿ ಡಾ.ಜಿ.ಶಂಕರ್ ನಿರ್ಮಿಸಿರುವ ಕೊಟ್ಟಿರುವ ಮಹಿಳಾ ಘಟಕದಲ್ಲಿ 126 ಬೆಡ್‌ಗಳ ಚಿಕಿತ್ಸಾ ಘಟಕವನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಸಿದ್ಧಪಡಿಸಲಾಗಿದೆ. ಅದೇ ರೀತಿ ಕಾರ್ಕಳ ತಾಲೂಕು ಆಸ್ಪತ್ರೆಯ ಹಳೆ ಕಟ್ಟಡದಲ್ಲೂ 90 ಬೆಡ್‌ಗಳ ಘಟಕವನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಡಾ.ಸೂಡ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X