Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಂಬೆಯಿಂದ ಡಾನ್‌ಗಳಂತೆ ಕರೆ ಮಾಡಿದರೆ...

ಬಾಂಬೆಯಿಂದ ಡಾನ್‌ಗಳಂತೆ ಕರೆ ಮಾಡಿದರೆ ಜೈಲು: ಉಡುಪಿ ಡಿಸಿ ಜಗದೀಶ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ22 May 2020 5:10 PM IST
share
ಬಾಂಬೆಯಿಂದ ಡಾನ್‌ಗಳಂತೆ ಕರೆ ಮಾಡಿದರೆ ಜೈಲು: ಉಡುಪಿ ಡಿಸಿ ಜಗದೀಶ್ ಎಚ್ಚರಿಕೆ

ಕುಂದಾಪುರ, ಮೇ 22: ಕ್ವಾರಂಟೇನ್ ವಿಚಾರವಾಗಿ ಬಹಳಷ್ಟು ಮಂದಿ ಮುಂಬೈಯಲ್ಲಿ ಕುಳಿತು ಕೊಂಡು ಡಾನ್ ರೀತಿ ಕರೆ ಮಾಡುತ್ತಿದ್ದಾರೆ. ಇದೆಲ್ಲ ಜಿಲ್ಲಾಡಳಿತದ ಮುಂದೆ ನಡೆಯುವುದಿಲ್ಲ. ಅಂತಹ ಕಿಡಿಗೇಡಿಗಳನ್ನು ಮುಂಬೈ ಯಿಂದ ಹೇಗೆ ಕರೆದು ಕೊಂಡು ಬರಬೇಕು ಎಂಬುದು ಜಿಲ್ಲಾಡಳಿತಕ್ಕೆ ಗೊತ್ತಿದೆ. ಅಂತಹವರನ್ನು ನಾವು ಬಿಡುವುದಿಲ್ಲ. ಈ ರೀತಿ ಮಾಡಿದರೆ ನಾಳೆಯಿಂದ ಇವರು ಜೈಲಿನಲ್ಲಿ ಇರುತ್ತಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕುಂದಾಪುರ ತಾಪಂ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಸದೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆಯಲ್ಲಿ ಕರೆಯಲಾದ ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಕುಂದಾಪುರ ತಾಲೂಕಿನಲ್ಲಿ ತೆಗೆದುಕೊಂಡಿರುವ ಮುಂಜಾಗೃತಾ ಕ್ರಮ ಹಾಗೂ ಕ್ವಾರಂಟೇನ್ ಕೇಂದ್ರಗಳ ಕುರಿತ ಸಭೆಯಲ್ಲಿ ಅವರು ಮಾತನಾಡುತಿದ್ದರು.

ಕೆಲವೊಂದು ಕಿಡಿಗೇಡಿಗಳು ಸುಮ್ಮನೆ ಕರೆ ಮಾಡಿ ವಾಯ್ಸ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಅದು ಇಂದಿಗೆ ಕೊನೆಯಾಗಬೇಕು. ನಾಳೆಯಿಂದ ಯಾರಾದರೂ ಈ ರೀತಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದರೆ ಅವರನ್ನು ಜೈಲಿಗೆ ಕಳುಹಿಸಲಾಗುವುದು ಎಂದರು.

ನಾವು ಕಳೆದ ಮೂರು ತಿಂಗಳಿನಿಂದ ಹಗಲು ರಾತ್ರಿ ಊಟ ತಿಂಡಿ ಬಿಟ್ಟು ಕೆಲಸ ಮಾಡುತ್ತಿದ್ದೇವೆ. ಅದನ್ನು ಕಿಡಿಗೇಡಿಗಳು ನೆನಪಿಟ್ಟುಕೊಳ್ಳಬೇಕು. ನಾವು ಇಷ್ಟೆಲ್ಲ ಕೆಲಸ ಅವರಿಗೋಸ್ಕರ ಮಾಡುತ್ತಿದ್ದೇವೆ ಎಂಬುದು ಅವರಿಗೆ ಅರ್ಥ ಆಗಬೇಕು. ಅದು ಬಿಟ್ಟು ಸುಮ್ಮನೆ ಡಿಸಿ, ಎಸಿ, ಎಸ್ಪಿ, ಎಂಪಿ ಎಂಎಲ್‌ಎಗಳಿಗೆ ಬೈಯುವುದಲ್ಲ. ಇದೆಲ್ಲ ಆಟ ನಡೆಯುವುದಿಲ್ಲ. ಎಷ್ಟು ದೊಡ್ಡ ಜನ ಆದರೂ ಜೈಲಿಗೆ ಅಟ್ಟಿಸುವ ಕೆಲಸ ಮಾಡಲಾಗುವುದು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಕುಂದಾಪುರ ಉಪವಿಭಾಗಾಧಿಕಾರಿ ರಾಜು ಮೊದಲಾದವರು ಉಪಸ್ಥಿತರಿದ್ದರು.

'ಹೊರಗಡೆಯಿಂದ ಊಟ, ಬಟ್ಟೆಗೆ ಅವಕಾಶ ಇಲ್ಲ'
ಕ್ವಾರಂಟೇನ್‌ನಲ್ಲಿರುವವರಿಗೆ ಮನೆಯಿಂದ ಊಟ, ತಿಂಡಿ, ಬಟ್ಟೆ ತಂದು ಕೊಡಲು ಅವಕಾಶ ನೀಡದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಯಾರು ಏನೇ ಹೇಳಿದರು ಇದಕ್ಕೆಲ್ಲ ಅವಕಾಶ ನೀಡಲು ಆಗುವುದಿಲ್ಲ. ಬಟ್ಟೆ, ಊಟದ ಪಾತ್ರೆ ಜೊತೆಗೆ ಕೊರೋನ ವೈರಸ್ ಕೂಡ ಮನೆಗಳಿಗೆ ತಲುಪಲಿದೆ. ಆದುದರಿಂದ ಜಿಲ್ಲಾಡಳಿತ ಹೊರಗಿನಿಂದ ಬಂದವರಿಗೆ ಚಿಕಿತ್ಸೆ ನೀಡುವುದರ ಜೊತೆಗೆ ಇಲ್ಲಿರುವ 13ಲಕ್ಷ ಮಂದಿಯ ರಕ್ಷಣೆ ಕೂಡ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದರು.

ಈ ವೈರಸ್ ಇಲ್ಲಿರುವವರಿಗೆ ಹರಡದಂತೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಕೆಲವರು ಅದನ್ನು ತಪ್ಪು ಎಂಬ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಟಿಪನ್ ಬಾಕ್ಸ್ ಮೂಲಕ ಮನೆಗಳಿಗೆ ವೈರಸ್ ತೆಗೆದುಕೊಂಡು ಹೋಗಬಾರದೆಂಬ ಉದ್ದೇಶದಿಂದ ಕ್ವಾರಂಟೇನ್ ಕೇಂದ್ರಗಳಿಗೆ ಹೊರಗಿನಿಂದ ಯಾವುದೇ ಊಟ, ಬಟ್ಟೆ ಸರಬರಾಜು ಮಾಡದಂತೆ ಕ್ರಮಕೈಗೊಳ್ಳಬೇಕೆಂದು ಅಧಿಕಾರಗಿಳಿಗೆ ಸೂಚನೆ ನೀಡಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X