Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿವಾದಾಸ್ಪದ ಭದ್ರತಾ ಕಾನೂನು ಜಾರಿಗೆ...

ವಿವಾದಾಸ್ಪದ ಭದ್ರತಾ ಕಾನೂನು ಜಾರಿಗೆ ಚೀನಾ ಮುಂದು

ಹಾಂಕಾಂಗ್ ಸ್ವಾತಂತ್ರ್ಯಕ್ಕೆ ಕೊನೆಯ ಮೊಳೆ ?

ವಾರ್ತಾಭಾರತಿವಾರ್ತಾಭಾರತಿ22 May 2020 11:03 PM IST
share
ವಿವಾದಾಸ್ಪದ ಭದ್ರತಾ ಕಾನೂನು ಜಾರಿಗೆ ಚೀನಾ ಮುಂದು

ಬೀಜಿಂಗ್, ಮೇ 22: ಚೀನಾದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷವು, ಹಾಂಕಾಂಗ್‌ಗಾಗಿ ವಿವಾದಾಸ್ಪದ ರಾಷ್ಟ್ರೀಯ ಭದ್ರತಾ ಕಾನೂನೊಂದನ್ನು ಜಾರಿಗೆ ತರುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಈ ಕ್ರಮವು ಹಾಂಕಾಂಗ್ ನಗರದ ಸ್ವಾತಂತ್ರ್ಯಕ್ಕೆ ದೊಡ್ಡ ಹೊಡೆತವಾಗಿದೆ ಎಂದು ವ್ಯಾಪಕವಾಗಿ ಭಾವಿಸಲಾಗಿದೆ.

ದೇಶದ್ರೋಹ, ವಿಭಜನವಾದ, ರಾಜದ್ರೋಹ ಮತ್ತು ಬುಡಮೇಲು ಕೃತ್ಯಗಳನ್ನು ನಿಷೇಧಿಸುವ ಕಾನೂನು ಹಾಂಕಾಂಗ್ ಸಂಸದರ ಬಳಿಗೆ ಹೋಗದೆಯೇ ಅನುಮೋದನೆಗೊಳ್ಳಬಹುದು ಎನ್ನಲಾಗಿದೆ.

ಚೀನಾದ ಪ್ರಧಾನ ಭೂಭಾಗದಲ್ಲಿ ಇರದ ಸ್ವಾತಂತ್ರ್ಯಗಳನ್ನು ಹಾಂಕಾಂಗ್‌ಗೆ ನೀಡುವ ಭರವಸೆಯಿಂದ ಚೀನಾ ಹಿಂದೆ ಸರಿಯುತ್ತಿದೆ ಎಂದು ಚೀನಾದ ಟೀಕಾಕಾರರು ಆರೋಪಿಸಿದ್ದಾರೆ.

ವಾರ್ಷಿಕ ನ್ಯಾಶನಲ್ ಪೀಪಲ್ಸ್ ಕಾಂಗ್ರೆಸ್ (ಎನ್‌ಪಿಸಿ)ನಲ್ಲಿ ಕರಡು ಕಾನೂನನ್ನು ಮಂಡಿಸಲಾಗಿದೆ. ಎನ್‌ಪಿಸಿಯು ಕಮ್ಯುನಿಸ್ಟ್ ನಾಯಕತ್ವವು ಈಗಾಗಲೇ ತೆಗೆದುಕೊಂಡಿರುವ ನಿರ್ಧಾರಗಳಿಗೆ ರಬ್ಬರ್ ಸ್ಟಾಂಪ್ ಒತ್ತುತ್ತದೆ.

ಬ್ರಿಟಿಶರ ನಿಯಂತ್ರಣದಲ್ಲಿದ್ದ ಆರ್ಥಿಕ ಬಲಾಢ್ಯ ಹಾಂಕಾಂಗ್ 1997ರಲ್ಲಿ ಮತ್ತೆ ಚೀನಾದ ಆಡಳಿತಕ್ಕೆ ವಾಪಸಾಗಿತ್ತು. ಅರೆ-ಸ್ವಾಯತ್ತ ಹಾಂಕಾಂಗ್ ಅಂದಿನಿಂದಲೂ ಭದ್ರತಾ ಶಾಸನವೊಂದರ ಬೆದರಿಕೆಯ ತೂಗುಗತ್ತಿಯ ಅಡಿಯಲ್ಲೇ ಇತ್ತು.

ಹೆಚ್ಚಿನ ಸ್ವಾತಂತ್ರ್ಯ ಮತ್ತು ಪ್ರಜಾಸತ್ತೆಗಾಗಿ ಆಗ್ರಹಿಸಿ ಹಾಂಕಾಂಗ್‌ನಲ್ಲಿ ಕಳೆದ ವರ್ಷ ನಡೆದ ಸುದೀರ್ಘ ಅವಧಿಯ ಬೃಹತ್ ಪ್ರತಿಭಟನೆಗಳ ಬಳಿಕ ಈ ಶಾಸನವನ್ನು ಜಾರಿಗೆ ತರಲು ಚೀನಾ ಮುಂದಾಗಿದೆ. ಭವಿಷ್ಯದಲ್ಲಿ ಇಂಥ ಪ್ರತಿಭಟನೆಗಳನ್ನು ತಡೆಯಲು ಹಾಗೂ ಪ್ರತಿಭಟನಕಾರರನ್ನು ಶಿಕ್ಷಿಸಲು ಕಾನೂನು ಆಧಾರಿತ ಹಾಗೂ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಲೇ ಬೇಕಾಗಿದೆ ಎಂದು ಚೀನಾ ಅಭಿಪ್ರಾಯಪಟ್ಟಿದೆ.

ಕಾರ್ಯಕರ್ತರಿಂದ ಹೋರಾಟಕ್ಕೆ ಕರೆ

ಹಾಂಕಾಂಗ್‌ನ ಸ್ವಾತಂತ್ರ್ಯಗಳನ್ನು ಹತ್ತಿಕ್ಕುತ್ತದೆ ಎನ್ನಲಾದ ವಿವಾದಾಸ್ಪದ ರಾಷ್ಟ್ರೀಯ ಭದ್ರತಾ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಲು ಹಾಂಕಾಂಗ್‌ನ ಹೋರಾಟಗಾರರು ಶುಕ್ರವಾರ ಆನ್‌ಲೈನ್ ಕರೆಗಳನ್ನು ನೀಡಿದ್ದಾರೆ.

ಇದೇ ಕಾಯ್ದೆಯನ್ನು ಜಾರಿಗೆ ತರಲು 2003ರಲ್ಲಿ ಚೀನಾ ಪ್ರಯತ್ನಿಸಿದಾಗ ಅದಕ್ಕೆ ಭಾರೀ ವಿರೋಧ ಎದುರಾಗಿತ್ತು. ಸುಮಾರು ಐದು ಲಕ್ಷ ಜನರು ರಸ್ತೆಯಲ್ಲಿ ಜಮಾಯಿಸಿ ಪ್ರಸ್ತಾವಿತ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಿದರು. ಬಳಿಕ ಕಾಯ್ದೆಯನ್ನ ವಾಪಸ್ ಪಡೆಯಲಾಗಿತ್ತು.

ಅಮೆರಿಕದಿಂದ ತೀವ್ರ ಪ್ರತಿಕ್ರಿಯೆ: ಟ್ರಂಪ್ ಎಚ್ಚರಿಕೆ

ವಾಶಿಂಗ್ಟನ್, ಮೇ 22: ಹಾಂಕಾಂಗ್ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಹೇರಲು ಚೀನಾ ಮುಂದಾದರೆ ಅಮೆರಿಕವು ತೀವ್ರವಾಗಿ ಪ್ರತಿಕ್ರಿಯಿಸುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಎಚ್ಚರಿಕೆ ನೀಡಿದ್ದಾರೆ.

ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್ ಈ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X