Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಲಸೆ ಕಾರ್ಮಿಕರ ಸಂಕಷ್ಟ: ಬೀದಿಗಿಳಿದು...

ವಲಸೆ ಕಾರ್ಮಿಕರ ಸಂಕಷ್ಟ: ಬೀದಿಗಿಳಿದು ಹೋರಾಡಲು ಪ್ರತಿಪಕ್ಷಗಳಿಗೆ ಯಶವಂತ ಸಿನ್ಹಾ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ23 May 2020 9:57 PM IST
share
ವಲಸೆ ಕಾರ್ಮಿಕರ ಸಂಕಷ್ಟ: ಬೀದಿಗಿಳಿದು ಹೋರಾಡಲು ಪ್ರತಿಪಕ್ಷಗಳಿಗೆ ಯಶವಂತ ಸಿನ್ಹಾ ಕಿವಿಮಾತು

ಹೊಸದಿಲ್ಲಿ,ಮೇ 23: ವಲಸೆ ಕಾರ್ಮಿಕರು ಮತ್ತು ಬಡವರ ಸಂಕಷ್ಟಗಳು ಸರಕಾರಕ್ಕೆ ಕಾಣುತ್ತಿಲ್ಲ, ಕೇಳುತ್ತಲೂ ಇಲ್ಲ. ಹೀಗಾಗಿ ಈ ಪ್ರತಿಪಕ್ಷಗಳು ಬೀದಿಗಿಳಿದು ಹೋರಾಟ ನಡೆಸುವ ಅಗತ್ಯವಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಬಿಜೆಪಿ ನಾಯಕ ಯಶವಂತ ಸಿನ್ಹಾ ಅವರು ಕಿವಿಮಾತು ಹೇಳಿದ್ದಾರೆ.

ಕೇವಲ ಸರಕಾರಕ್ಕೆ ಅರ್ಜಿಗಳನ್ನು ಸಲ್ಲಿಸುವುದರಿಂದ ಮತ್ತು ಹೇಳಿಕೆಗಳನ್ನು ನೀಡುವುದರಿಂದ ದೇಶದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಯಾವುದೇ ಉಪಯೋಗವಿಲ್ಲ ಎಂದು ಅವರು ಶನಿವಾರ ಟ್ವೀಟ್‌ನಲ್ಲಿ ಕುಟುಕಿದ್ದಾರೆ.

ಕೋವಿಡ್-19 ಪಿಡುಗು ಮತ್ತು ವಲಸೆ ಕಾರ್ಮಿಕರ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸರಕಾರದ ಕ್ರಮಗಳ ಪುನರ್‌ಪರಿಶೀಲನೆಗಾಗಿ 22 ಪ್ರತಿಪಕ್ಷಗಳು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ಆನ್‌ಲೈನ್ ಸಭೆ ನಡೆಸಿ ಬೇಡಿಕೆಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ ಮರುದಿನವೇ ಸಿನ್ಹಾರ ಈ ತೀಕ್ಷ್ಣ ಹೇಳಿಕೆ ಹೊರಬಿದ್ದಿದೆ.

ವಲಸೆ ಕಾರ್ಮಿಕರು ತಮ್ಮ ಮನೆಗಳನ್ನು ತಲುಪಲು ಸಶಸ್ತ್ರ ಪಡೆಗಳ ನೆರವು ಒದಗಿಸಬೇಕು ಎಂಬ ಬೇಡಿಕೆಯೊಂದಿಗೆ ಈ ವಾರದ ಪೂರ್ವಾರ್ಧದಲ್ಲಿ ರಾಜಘಾಟ್‌ನಲ್ಲಿ ಧರಣಿ ಕುಳಿತಿದ್ದ ಸಿನ್ಹಾರನ್ನು ದಿಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.

ಇತ್ತೀಚಿಗೆ ಆಂಗ್ಲ ಸುದ್ದಿ ಜಾಲತಾಣಕ್ಕಾಗಿ ಬರೆದಿದ್ದ ಲೇಖನವೊಂದರಲ್ಲಿ ವಲಸೆ ಕಾರ್ಮಿಕರ ಸಂಕಷ್ಟಗಳನ್ನು ಕಡೆಗಣಿಸುತ್ತಿರುವುದಕ್ಕಾಗಿ ಸರಕಾರವನ್ನು ತರಾಟೆಗೆತ್ತಿಕೊಂಡಿದ್ದ ಸಿನ್ಹಾ,ಕೇಂದ್ರದ 20 ಲ.ಕೋ.ರೂಗಳ ವಿಶೇಷ ಆರ್ಥಿಕ ಪ್ಯಾಕೇಜನ್ನು ದೋಷಪೂರಿತ ಮತ್ತು ವಂಚನೆಯಿಂದ ಕೂಡಿದೆ ಎಂದು ಬಣ್ಣಿಸಿದ್ದರು.

ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಎಷ್ಟೊಂದು ಹೃದಯಹೀನರೆಂದರೆ ತನ್ನ ಮೊದಲ ಸುದ್ದಿಗೋಷ್ಠಿಯಲ್ಲಿ ವಲಸೆ ಕಾರ್ಮಿಕರ ಉಲ್ಲೇಖವನ್ನೂ ಮಾಡಿರಲಿಲ್ಲ. ಎರಡನೇ ಸುದ್ದಿಗೋಷ್ಠಿಯಲ್ಲಿ ಅಲ್ಪಸ್ವಲ್ಪ ಪರಿಹಾರವನ್ನು ಪ್ರಕಟಿಸಿದ ಅವರು ಕಾಲ್ನಡಿಗೆಯಲ್ಲಿ ತವರು ರಾಜ್ಯಗಳನ್ನು ಸೇರುವ ಪ್ರಯತ್ನದಲ್ಲಿ ಅಪಘಾತಗಳಲ್ಲಿ,ಆಯಾಸದಿಂದ ಮೃತಪಟ್ಟ ವಲಸೆ ಕಾರ್ಮಿಕರ ಬಗ್ಗೆ ಸಂತಾಪಗಳನ್ನೂ ವ್ಯಕ್ತಪಡಿಸಿರಲಿಲ್ಲ ಎಂದು ಸಿನ್ಹಾ ಝಾಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X