Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂಫಾನ್ ಚಂಡಮಾರುತದಿಂದ ವಿದ್ಯುತ್ ಸಂಪರ್ಕ...

ಅಂಫಾನ್ ಚಂಡಮಾರುತದಿಂದ ವಿದ್ಯುತ್ ಸಂಪರ್ಕ ಅಸ್ತವ್ಯಸ್ತ: ಪ. ಬಂಗಾಳದಲ್ಲಿ ಜನರ ಪ್ರತಿಭಟನೆ

ಸಾವಿನ ಸಂಖ್ಯೆ 86ಕ್ಕೇರಿಕೆ

ವಾರ್ತಾಭಾರತಿವಾರ್ತಾಭಾರತಿ23 May 2020 10:21 PM IST
share
ಅಂಫಾನ್ ಚಂಡಮಾರುತದಿಂದ ವಿದ್ಯುತ್ ಸಂಪರ್ಕ ಅಸ್ತವ್ಯಸ್ತ: ಪ. ಬಂಗಾಳದಲ್ಲಿ ಜನರ ಪ್ರತಿಭಟನೆ

ಕೋಲ್ಕತಾ,ಮೇ 24: ಪಶ್ಚಿಮಬಂಗಾಳದಲ್ಲಿ ಅಂಫಾನ್ ಚಂಡಮಾರುತಕ್ಕೆ ಬಲಿಯಾದವರ ಸಂಖ್ಯೆ 86ಕ್ಕೇರಿದೆಯೆಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ತಿಳಿಸಿದ್ದಾರೆ.

ಬುಧವಾರ ಒಡಿಶಾ, ಪಶ್ಚಿಮಬಂಗಾಳಗಳ ಬಂಗಾಳಕೊಲ್ಲಿ ತೀರಪ್ರದೇಶಗಳಿಗೆ ಅಪ್ಪಳಿಸಿದ್ದು, ತಗ್ಗುಪ್ರದೇಶಗಳಲ್ಲಿರುವ ಸಾವಿರಾರು ಮನೆಗಳು ಸಾಗರದಲೆಗಳಿಗೆ ಕೊಚ್ಚಿಹೋಗಿದ್ದವು ಹಾಗೂ ಹಲವಾರು ನಗರಗಳಲ್ಲಿ ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳು ಸ್ಥಗಿತಗೊಂಡಿದ್ದವು.

ಅಂಫಾನ್ ಚಂಡಮಾರುತದ ರೌದ್ರವತಾರಕ್ಕೆ ಸಾಕ್ಷಿಯಾಗಿರುವ ಕೋಲ್ಕತಾ ನಗರದಲ್ಲಿ ಸತತ ಮೂರನೆಯ ದಿನವೂ ವಿದ್ಯುತ್ ಹಾಗೂ ದೂರವಾಣಿ ಸಂಪರ್ಕಗಳು ಕಡಿತಗೊಂಡಿವೆ. ವಿದ್ಯುತ್ ಸಂಪರ್ಕವನ್ನು ಇನ್ನೂ ಸರಿಪಡಿಸಲಾಗದೆ ಇರುವುದನ್ನು ಖಂಡಿಸಿ, ಕೋಲ್ಕತಾದಲ್ಲಿ ಶನಿವಾರ ನೂರಾರು ಮಂದಿ ಪ್ರತಿಭಟನೆ ನಡೆಸಿದರು.

ಕೋಲ್ಕತಾದ ಆಸುಪಾಸಿನ ಜಿಲ್ಲೆಗಳಾದ ಹೌರಾ ಹಾಗೂ ಹೂಗ್ಲಿಗೂ ಪ್ರತಿಭಟನೆಗಳು ಹರಡಿದ್ದು ನೂರಾರು ಜನರು ಬೀದಿಗಿಳಿದು ಪ್ರದರ್ಶನ ನಡೆಸಿದರು.

ಬಂಗಾಳಕೊಲ್ಲಿಗೆ ಈವರೆಗೆ ಅಪ್ಪಳಿಸಿದ ಚಂಡಮಾರುತಗಳಲ್ಲೇ ಅತ್ಯಂತ ಪ್ರಬಲವೆನ್ನಲಾದ ಅಂಫಾನ್, ಪಶ್ಚಿಮಬಂಗಾಳದ ಹಲವೆಡೆ ಭಾರೀ ನಾಶ ನಷ್ಟವನ್ನುಂಟು ಮಾಡಿತ್ತು. ಕೋಲ್ಕತ್ತಾ ಹಾಗೂ ಆಸುಪಾಸಿನ ಪ್ರದೇಶಗಳ ಹಲವೆಡೆ ನೂರಾರು ವಿದ್ಯುತ್ ಕಂಬಗಳು ಹಾಗೂ ಮರಗಳು ಧರೆಗುರುಳಿದ್ದವು.

ಕೋಲ್ಕತ್ತಾದಲ್ಲಿ 5 ಸಾವಿರಕ್ಕೂ ಅಧಿಕ ಮರಗಳು ಹಾಗೂ ಸುಮಾರು ನಾಲ್ಕು ಸಾವಿರ ವಿದ್ಯುತ್‌ ತಂತಿಗಳು ಧರಾಶಾಯಿಯಾಗಿರುವುದಾಗಿ ದಿ ಟೆಲಿಗ್ರಾಫ್ ವರದಿ ಮಾಡಿದೆ.

ವಿದ್ಯುದಾಘಾತವನ್ನು ತಡೆಯಲು ನಗರದ ಹಲವೆಡೆ ವಿದ್ಯುತ್‌ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಂಫಾನ್ ಚಂಡಮಾರುತ ಹಾವಳಿಯಿಂದಾಗಿ ಪಶ್ಚಿಮಬಂಗಾಳದಲ್ಲಿ 10 ಲಕ್ಷಕ್ಕೂ ಅಧಿಕ ಮನೆಗಳು ನಾಶವಾಗಿವೆ ಹಾಗೂ 1.5 ಕೋಟಿ ಮಂದಿ ಸಂತ್ರಸ್ತರಾಗಿದ್ದಾರೆ.

ಕೋಲ್ಕತ್ತಾ ಹಾಗೂ ಉತ್ತರ ಮತ್ತು ದಕ್ಷಿಣ 24 ಪರಗಣ ಜಿಲ್ಲೆಗಳಲ್ಲಿ ಶನಿವಾರ ಮೊಬೈಲ್‌ಫೋನ್ ಹಾಗೂ ವಿದ್ಯುತ್ ಸಂಪರ್ಕವನ್ನು ಮರುಸ್ಥಾಪಿಸಲು ಸಾಧ್ಯವಾಗಿದೆಯಾದರೂ, ಹಲವು ಪ್ರದೇಶಗಳು ಇಂದೂ ಕೂಡಾ ಕತ್ತಲಲ್ಲೇ ಉಳಿದಿವೆ.

ನೆರವಿಗೆ ಸೇನೆಗೆ ಬುಲಾವ್

ಅಂಫಾನ್ ಚಂಡಮಾರುತ ಆರ್ಭಟದಿಂದ ತತ್ತರಿಸಿರುವ ಪಶ್ಚಿಮಬಂಗಾಳದ ಕೋಲ್ಕತಾ ಹಾಗೂ ಆಸುಪಾಸಿನ ಜಿಲ್ಲೆಗಳಲ್ಲಿ ವಿದ್ಯುತ್ ಮತ್ತಿತರ ಮೂಲಭೂತ ಸೌಕರ್ಯಗಳ ಮರುಸ್ಥಾಪನೆಗಾಗಿ ಶನಿವಾರ ಸೇನೆಯನ್ನು ನಿಯೋಜಿಸಲಾಗಿದೆ.

ಆಂಫಾನ್ ಚಂಡಮಾರುತದಿಂದ ಕೋಲ್ಕತಾ ನಗರ ಹಾಗೂ ಉತ್ತರ ಮತ್ತು ದಕ್ಷಿಣ 24 ಪರಗಣ ಜಿಲ್ಲೆಗಳಲ್ಲಿ ಸೇನೆಯ ಐದು ತುಕಡಿಗಳನ್ನು ನಿಯೋಜಿಸಲಾಗಿದೆಯೆಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿದ್ಯುತ್ ಮತ್ತಿತರ ಮೂಲಸೌಕರ್ಯಗಳ ಮರುಸ್ಥಾಪನೆಗೆ ನೆರವಾಗುವಂತೆ ಪಶ್ಚಿಮಬಂಗಾಳ ಸರಕಾರದ ಮನವಿ ಮಾಡಿದ ಮೇರೆಗೆ ಸೇನೆಯನ್ನು ನಿಯೋಜಿಸಲಾಗಿದೆಯೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X