Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಾಂಕಾಂಗ್‌ನ ವಿಶೇಷ ವ್ಯಾಪಾರ ಸ್ಥಾನಮಾನ...

ಹಾಂಕಾಂಗ್‌ನ ವಿಶೇಷ ವ್ಯಾಪಾರ ಸ್ಥಾನಮಾನ ವಾಪಸ್

ಚೀನಾಕ್ಕೆ ಅಮೆರಿಕ ಬೆದರಿಕೆ

ವಾರ್ತಾಭಾರತಿವಾರ್ತಾಭಾರತಿ23 May 2020 11:07 PM IST
share
ಹಾಂಕಾಂಗ್‌ನ ವಿಶೇಷ ವ್ಯಾಪಾರ ಸ್ಥಾನಮಾನ ವಾಪಸ್

ವಾಶಿಂಗ್ಟನ್, ಮೇ 23: ಹಾಂಕಾಂಗ್‌ನ ಸ್ವಾಯತ್ತೆಯನ್ನು ರದ್ದುಪಡಿಸಲು ಚೀನಾ ತೆಗೆದುಕೊಂಡಿರುವ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅಮೆರಿಕವು, ಹಾಂಕಾಂಗ್‌ಗೆ ನೀಡಿರುವ ವಿಶೇಷ ವ್ಯಾಪಾರ ಸ್ಥಾನಮಾನವನ್ನು ವಾಪಸ್ ಪಡೆಯುವುದಾಗಿ ಶುಕ್ರವಾರ ಬೆದರಿಕೆ ಹಾಕಿದೆ.

ಅಮೆರಿಕ ಮತ್ತು ಚೀನಾ ನಡುವೆ ಈಗಾಗಲೇ ನೆಲೆಸಿರುವ ಉದ್ವಿಗ್ನತೆಯು ಈಗ ಹಾಂಕಾಂಗ್ ವಿಷಯದಲ್ಲಿ ಮತ್ತೊಮ್ಮೆ ತಾರಕಕ್ಕೇರಿದೆ. ಹಾಂಕಾಂಗ್ ವಿಷಯದಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಮೆರಿಕದ ಸಂಸದರು ತಮ್ಮ ಸರಕಾರವನ್ನು ಒತ್ತಾಯಿಸುತ್ತಿದ್ದಾರೆ.

ಚೀನಾ ಪ್ರಸ್ತಾಪಿಸಿರುವ ಹಾಂಕಾಂಗ್ ರಾಷ್ಟ್ರೀಯ ಭದ್ರತಾ ಕಾನೂನು, ಪ್ರಜಾಪ್ರಭುತ್ವಕ್ಕಾಗಿ ಹಾಗೂ ಹೆಚ್ಚಿನ ಸ್ವಾತಂತ್ರ್ಯಗಳಿಗಾಗಿ ಒತ್ತಾಯಿಸಿ ಧರಣಿ ನಡೆಸುವುದನ್ನು ದೇಶದ್ರೋಹವಾಗಿ ಪರಿಗಣಿಸುತ್ತದೆ ಹಾಗೂ ಅಂಥ ಹೋರಾಟಗಳಲ್ಲಿ ಪಾಲ್ಗೊಂಡವರಿಗೆ ಕಠಿಣ ಶಿಕ್ಷೆಗಳನ್ನು ನೀಡುತ್ತದೆ.

ಕಳೆದ ವರ್ಷವಿಡೀ ನಡೆದ ಬೃಹತ್ ಪ್ರಜಾಪ್ರಭುತ್ವ ಪರ ಚಳವಳಿಗಳ ಹಿನ್ನೆಲೆಯಲ್ಲಿ, ಹಾಂಕಾಂಗನ್ನು ತನ್ನ ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದಕ್ಕಾಗಿ ಚೀನಾ ನೂತನ ಕಾನೂನು ಜಾರಿಗೆ ತರಲು ಮುಂದಾಗಿದೆ ಎನ್ನಲಾಗಿದೆ.

ಹಾಂಕಾಂಗ್ ಸ್ವಾಯತ್ತೆಗೆ ಮರಣ ಗಂಟೆ: ಅಮೆರಿಕ ವಿದೇಶ ಕಾರ್ಯದರ್ಶಿ ಮೈಕ್ ಪಾಂಪಿಯೊ

ಹಾಂಕಾಂಗ್‌ನ ಸುವ್ಯವಸ್ಥಿತ ಶಾಸಕಾಂಗ ಪ್ರಕ್ರಿಯೆಯನ್ನು ಹೊರಗಿಟ್ಟು ಹಾಗೂ ಹಾಂಕಾಂಗ್ ಜನರ ಇಚ್ಛೆಯನ್ನು ಕಡೆಗಣಿಸಿ ನೂತನ ರಾಷ್ಟ್ರೀಯ ಭದ್ರತಾ ಕಾನೂನನ್ನು ಜಾರಿಗೊಳಿಸಲು ಚೀನಾ ಮುಂದಾಗಿರುವುದು, ಹಾಂಕಾಂಗ್‌ಗೆ ಗರಿಷ್ಠ ಸ್ವಾಯತ್ತೆಯನ್ನು ನೀಡುವುದಾಗಿ ಚೀನಾ ನೀಡಿರುವ ಭರವಸೆಯ ಮರಣ ಗಂಟೆಯಾಗಿದೆ ಎಂದು ಅಮೆರಿಕದ ವಿದೇಶ ಕಾರ್ಯದರ್ಶಿ ಮೈಕ್ ಪಾಂಪಿಯೊ ಶುಕ್ರವಾರ ಹೇಳಿದ್ದಾರೆ.

ಕಳೆದ ವರ್ಷ ಹಾಂಕಾಂಗ್‌ನಲ್ಲಿ ನಡೆದ ಪ್ರಜಾಪ್ರಭುತ್ವ ಪರ ಚಳವಳಿಗೆ ಬೆಂಬಲ ಸೂಚಿಸಿ ಅಮೆರಿಕದ ಸಂಸತ್ತು ಕಾನೂನೊಂದನ್ನು ಅಂಗೀಕರಿಸಿತ್ತು. ಆ ಕಾನೂನಿನ ಪ್ರಕಾರ, ಹಾಂಕಾಂಗ್‌ನ ವಿಶೇಷ ವ್ಯಾಪಾರ ಸ್ಥಾನಮಾನ ಮುಂದುವರಿಯಬೇಕಾದರೆ, ಹಾಂಕಾಂಗ್‌ನಲ್ಲಿ ಸ್ವಾಯತ್ತೆ ನೆಲೆಸಿದೆ ಎಂಬುದಾಗಿ ಅಮೆರಿಕದ ವಿದೇಶ ಇಲಾಖೆಯು ಪ್ರಮಾಣಪತ್ರ ನೀಡಬೇಕಾಗುತ್ತದೆ.

ಆದರೆ, ಚೀನಾದ ಈ ಕ್ರಮದಿಂದಾಗಿ ಇಂಥ ಪ್ರಮಾಣಪತ್ರ ನೀಡಲು ಅಮೆರಿಕಕ್ಕೆ ಕಷ್ಟವಾಗಬಹುದು ಎಂದು ಪಾಂಪಿಯೊ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X