ಬೆಂಗಳೂರಿನಲ್ಲಿ ಭಾರೀ ಮಳೆ: ಧರೆಗುರುಳಿದ 60ಕ್ಕೂ ಹೆಚ್ಚು ಮರಗಳು
![ಬೆಂಗಳೂರಿನಲ್ಲಿ ಭಾರೀ ಮಳೆ: ಧರೆಗುರುಳಿದ 60ಕ್ಕೂ ಹೆಚ್ಚು ಮರಗಳು ಬೆಂಗಳೂರಿನಲ್ಲಿ ಭಾರೀ ಮಳೆ: ಧರೆಗುರುಳಿದ 60ಕ್ಕೂ ಹೆಚ್ಚು ಮರಗಳು](https://www.varthabharati.in/sites/default/files/images/articles/2020/05/24/244831-1590327660.jpg)
ಬೆಂಗಳೂರು, ಮೇ.24: ರವಿವಾರ ರಾಜಧಾನಿ ಬೆಂಗಳೂರಿನಲ್ಲಿ ಹಲವೆಡೆ ಗಾಳಿ ಸಹಿತ ಭಾರಿ ಮಳೆಯಾಗಿದೆ.
ಇಲ್ಲಿನ ಕೆಆರ್ ಮಾರುಕಟ್ಟೆ, ಶಿವಾಜಿನಗರ, ಎಂ ಜಿ ರಸ್ತೆ ಸೇರಿದಂತೆ ನಗರದ ವಿವಿಧೆಡೆ ಮಳೆಯಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣವಿದ್ದು, ದಿಢೀರ್ ಗಾಳಿ ಸಹಿತ ಸುರಿದಿದೆ.
ಗಾಳಿ ಸಹಿತ ನಗರದಲ್ಲಿ ಸುರಿದ ಗಾಳಿ ಸಹಿತ ಮಳೆಗೆ ಸುಮಾರು 60ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಬೆಂಗಳೂರಿನ ದಕ್ಷಿಣ ಭಾಗದ ಜಯನಗರ, ಯಶವಂತಪುರ ಭಾಗದಲ್ಲಿ ಮರಗಳು ಮುರಿದುಬಿದ್ದಿವೆ.
ಶೀಘ್ರ ತೆರವು: ಈ ಕುರಿತು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಪ್ರತಿಕ್ರಿಯಿಸಿ, ಶೀಘ್ರದಲ್ಲಿಯೇ ಅಗ್ನಿಶಾಮಕದವರ ಜೊತೆಗೂಡಿ ತೆರವು ಕಾರ್ಯಾಚರಣೆ ಮಾಡಲಾಗುವುದು ಎಂದು ಹೇಳಿದರು.