Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ನಿಶಾಂತ್ ಪ್ರಾಣ ಉಳಿಸಲು ಕೊನೆ...

ಬಂಟ್ವಾಳ: ನಿಶಾಂತ್ ಪ್ರಾಣ ಉಳಿಸಲು ಕೊನೆ ಕ್ಷಣದವರೆಗೆ ಪ್ರಯತ್ನಿಸಿದ ಆರೀಫ್ ಹೈವೇ

ನದಿಗೆ ಹಾರಿದ ಯುವಕನ ಪ್ರಾಣ ರಕ್ಷಣೆಗೆ ಪ್ರಯತ್ನಿಸಿದ ಮುಹಮ್ಮದ್ ಅವರ ತಂಡ

ವಾರ್ತಾಭಾರತಿವಾರ್ತಾಭಾರತಿ24 May 2020 9:19 PM IST
share
ಬಂಟ್ವಾಳ: ನಿಶಾಂತ್ ಪ್ರಾಣ ಉಳಿಸಲು ಕೊನೆ ಕ್ಷಣದವರೆಗೆ ಪ್ರಯತ್ನಿಸಿದ ಆರೀಫ್ ಹೈವೇ

ಬಂಟ್ವಾಳ, ಮೇ 24: ಆತ್ಮಹತ್ಯೆ ಮಾಡಲು ನದಿಗೆ ಹಾರಿದ ಯುವಕನೋರ್ವನ ಜೀವ ಉಳಿಸಲು ನದಿಗೆ ಧುಮುಕಿದ ಯುವಕರ ತಂಡವೊಂದು ಮಾಡಿದ ಅಪಾಯಕಾರಿ ಹಾಗೂ ಮಾನವೀಯ ಪ್ರಯತ್ನಕ್ಕೆ ಕರಾವಳಿಯಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. 

ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕೊಳಕೀರು ನಿವಾಸಿ ನಿಶಾಂತ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ರವಿವಾರ ತಾಲೂಕಿನ ಪಾಣೆಮಂಗಳೂರು ಹಳೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ್ದಾರೆ.‌ ವಿಷಯ ತಿಳಿದು ಧಾವಿಸಿ ಬಂದ ನದಿ ಸಮೀಪದ ನಿವಾಸಿ ಮುಹಮ್ಮದ್ ಗೂಡಿನಬಳಿ ಎಂಬವರು ನದಿಗೆ ಜಿಗಿದಿದ್ದಾರೆ. ಅವರ ಬೆನ್ನಿಗೆ ಇತರ ಮೂವರು ಯುವಕರು ನದಿಗೆ ಧುಮುಕಿ ನಿಶಾಂತ್ ಅವರನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. 

ಯುವಕನನ್ನು ನೀರಿನಿಂದ ಮೇಲೆ ತಂದ ಬಳಿಕ ಇಲ್ಲಿಗೆ ಸಮೀಪದ ಅಕ್ಕರಂಗಡಿ ನೆಹರೂ ನಗರದ ಹೈವೇ ಇನ್ ಹೊಟೇಲ್ ಮಾಲಕ ರಹೀಂ ಎಂಬವರ ಪುತ್ರ ಆರೀಫ್ ಹೈವೇ ಎಂಬವರು ನಿಶಾಂತ್ ಅವರ ಬಾಯಿಗೆ ತನ್ನ ಬಾಯಿಯನ್ನು ಇಟ್ಟು ಊದುವ ಮೂಲಕ ಉಸಿರಾಡುವಂತೆ ‌ಮಾಡಲು ಪ್ರಯತ್ನಿಸುತ್ತಿರುವ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 

ಮತೀಯತೆಗೆ ಕುಖ್ಯಾತಿಯಾಗಿರುವ ಕರಾವಳಿಯಲ್ಲಿ ಮತೀಯತೆ ಮರೆತು ಯುವಕನನ್ನು ರಕ್ಷಿಸಲು ಮಾನವೀಯತೆ ಮೆರೆದ ಯುವಕ ಆರೀಫ್ ಹೈವೇ ಹಾಗೂ ನದಿಗೆ ಧುಮುಕಿದ ಗೂಡಿನಬಳಿಯ ಮುಹಮ್ಮದ್, ಶಮೀರ್, ತೌಸೀಫ್, ಝಾಹಿದ್, ಅಕ್ಕರಂಗಡಿಯ ಮುಕ್ತಾರ್ ಅವರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. 

ನದಿಗೆ ಹಾರಿದ ಯುವಕನ ಪ್ರಾಣ ಉಳಿಸಲು ಯುವಕರ ತಂಡ ಸರ್ವ ಪ್ರಯತ್ನ ಮಾಡಿದ್ದರೂ ಯುವಕ ಕೊನೆ ಉಸಿರೆಳೆದಿದ್ದಾನೆ. 

ಯುವಕ ನದಿಗೆ ಹಾರಿದ ವಿಷಯ ತಿಳಿದಂತೆ ಓಡಿ ಬಂದು ನದಿಗೆ ಜಿಗಿದೆ. ಬಳಿಕ ಇತರ ಮೂವರು ಜಿಗಿದು ಯುವಕನನ್ನು ನೀರಿನಿಂದ ಮೇಲಕ್ಕೆತ್ತಿದೆವು. ಆದರೆ ಅವರ ಆಯುಷ್ಯ ಮುಗಿದಿತ್ತು. ಮನುಷ್ಯನ ಜೀವಕ್ಕೆ ದೊಡ್ಡ ಬೆಲೆ ಇದೆ. ಅದರಲ್ಲಿ ಜಾತಿ, ಧರ್ಮ ನೋಡಬಾರದು. ಈ ಹಿಂದೆಯೂ ನಾನು ನೀರಿಗೆ ಬಿದ್ದ ಕೆಲವರ ಜೀವ ಉಳಿಸಿದ್ದೇನೆ.‌ ಹಲವು ಮೃತದೇಹಗಳನ್ನು ನೀರಿನಿಂದ ತೆಗೆದಿದ್ದೇನೆ. ಅವರಲ್ಲಿ ಎಲ್ಲಾ ಜಾತಿ, ಧರ್ಮದವರೂ ಸೇರಿದ್ದಾರೆ. 

- ಮುಹಮ್ಮದ್, ಗೂಡಿನಬಳಿ ನಿವಾಸಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X