Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಜರಂಗದಳ ಕಾರ್ಯಕರ್ತರ ವಿರುದ್ಧದ ದೂರನ್ನು...

ಬಜರಂಗದಳ ಕಾರ್ಯಕರ್ತರ ವಿರುದ್ಧದ ದೂರನ್ನು ಅಂಗಡಿ ಮಾಲಕರ ವಿರುದ್ಧ ದೂರು ಎಂದು ತಿರುಚಿದ opindia ವೆಬ್ ಸೈಟ್

ಬೆಂಗಳೂರು ಅಂಗಡಿಗಳ ಮೇಲೆ ಭಗವಾಧ್ವಜ

ವಾರ್ತಾಭಾರತಿವಾರ್ತಾಭಾರತಿ24 May 2020 11:57 PM IST
share
ಬಜರಂಗದಳ ಕಾರ್ಯಕರ್ತರ ವಿರುದ್ಧದ ದೂರನ್ನು ಅಂಗಡಿ ಮಾಲಕರ ವಿರುದ್ಧ ದೂರು ಎಂದು ತಿರುಚಿದ opindia ವೆಬ್ ಸೈಟ್

ಬೆಂಗಳೂರು, ಮೇ.24: ಬೆಂಗಳೂರಿನ ವಿಜಯನಗರದಲ್ಲಿ ಕೆಲವು ಅಂಗಡಿಗಳ ಮೇಲೆ ಭಗವಾಧ್ವಜ ಹಾರಿಸಿದ ಪ್ರಕರಣದಲ್ಲಿ ಬಜರಂಗದಳ ಕಾರ್ಯಕರ್ತರ ವಿರುದ್ಧ ನೀಡಿದ ದೂರಿನ ವರದಿಯನ್ನು ತಿರುಚಿದ opindia ವೆಬ್ ಸೈಟ್ ಬೀದಿ ಬದಿ ವ್ಯಾಪಾರಿಗಳ ಮೇಲೆಯೇ ದೂರು ದಾಖಲಾಗಿದೆ ಎಂದು ವರದಿ ಮಾಡಿದೆ. 

ಶುಕ್ರವಾರ ಇಲ್ಲಿನ ವಿಜಯನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ವಕೀಲೆ ಮೈತ್ರೆಯಿ ಕೃಷ್ಣನ್, ಕೊರೋನ ಸೋಂಕಿನ ವಿರುದ್ಧ ಜಾತಿ, ಧರ್ಮ ಮರೆತು ಪ್ರತಿಯೊಬ್ಬರು ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ವಿಜಯನಗರ ವ್ಯಾಪ್ತಿಯ ಅಂಗಡಿಗಳ ಮೇಲೆ ಕೇಸರಿ ಧ್ವಜ ಹಾರಿಸಿ, ಕೋಮು ಭಾವನೆ ಹುಟ್ಟು ಹಾಕುತ್ತಿರುವವ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು  ಒತ್ತಾಯಿಸಿದ್ದರು. 

ಏನಿದು ಪ್ರಕರಣ?: ನಾಲ್ಕು ದಿನಗಳ ಹಿಂದೆ ಬಜರಂಗದಳದ ಮುಖಂಡ ಎಂ.ಎಲ್.ಶಿವಕುಮಾರ್ ಗೌಡ ಎಂಬಾತ, ಇಲ್ಲಿನ ವಿಜಯನಗರ ವ್ಯಾಪ್ತಿಯ ಬೀದಿ ಬದಿ ಅಂಗಡಿಗಳ ಮೇಲೆ ಕೇಸರಿ ಧ್ವಜ ಹಾರಿಸಿದ್ದಾನೆ. ಇದೇ ಸಂದರ್ಭದಲ್ಲಿ ಸಂಘಪರಿವಾರದ ಕೆಲ ಕಾರ್ಯಕರ್ತರು ಹಿಂದೂಗಳು ಮಾತ್ರ ಇಲ್ಲಿ ವ್ಯಾಪಾರ ಮಾಡಬೇಕು. ಬೇರೆ ಧರ್ಮದ ವ್ಯಾಪಾರಿಗಳಿಗೆ ಅವಕಾಶ ಇಲ್ಲ ಎಂದು ವಿವಾದಿತ ಘೋಷಣೆಗಳು ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಈ ಬಗ್ಗೆ ವಾರ್ತಾಭಾರತಿ ಜೊತೆ ಮಾತನಾಡಿದ್ದ ಬೆಂಗಳೂರು ಜಿಲ್ಲಾಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ(ಎಐಸಿಸಿಟಿಯು)ದ ಕೆ.ಎಸ್.ವಿನಯ್ ಅವರು "ವಿಜಯನಗರ ಮಾರುಕಟ್ಟೆ ವ್ಯಾಪ್ತಿಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಉದ್ದೇಶ ಪೂರ್ವಕವಾಗಿಯೇ ಅಂಗಡಿಗಳ ಮೇಲೆ ಕೇಸರಿ ಧ್ವಜ ಹಾರಿಸಿದ್ದಾರೆ. ಈ ಸಂದರ್ಭದಲ್ಲಿ ಬಹುತೇಕ ಅಂಗಡಿ ಮಾಲಕರು ವಿರೋಧ ವ್ಯಕ್ತಪಡಿಸಿದರು. ಬಳಿಕ, ಅವರೆಲ್ಲಾ ಹೋದ ಮೇಲೆ ರಾತ್ರಿ ವೇಳೆ ಧ್ವಜ ಕಟ್ಟಿ ಹೋಗಿದ್ದು, ಈ ಸಂಬಂಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು" ಎಂದು ಹೇಳಿದ್ದರು. 

ಆದರೆ ಈ ಬಗ್ಗೆ ವರದಿ ಮಾಡಿದ ಕಟ್ಟಾ ಬಲಪಂಥೀಯ ಹಾಗು ಸುಳ್ಳು, ತಿರುಚಿದ ಸುದ್ದಿಗಳನ್ನು ಪ್ರಕಟಿಸುವುದಕ್ಕೆ ಕುಖ್ಯಾತವಾಗಿರುವ ವೆಬ್ ಸೈಟ್ opindia ಕೇಸರಿ ಧ್ವಜ ಹಾರಿಸಿದ್ದಕ್ಕೆ ಬೀದಿ ಬದಿ ವ್ಯಾಪಾರಿಗಳ ವಿರುದ್ಧವೇ ದೂರು ನೀಡಲಾಗಿದೆ ಎಂದು ವರದಿ ಪ್ರಕಟಿಸಿದೆ. ಆದರೆ ದೂರು ದಾಖಲಾಗಿರುವುದು ಸ್ವತಃ ಬಿಜೆಪಿ ಹಾಗು ಸಂಘಪರಿವಾರದ ಕಾರ್ಯಕರ್ತ ಎಂದು ಗುರುತಿಸಿಕೊಂಡಿರುವ ಎಂ.ಎಲ್.ಶಿವಕುಮಾರ್ ಗೌಡ ಹಾಗೂ ‘Uttara Kannada Mandi’ ಎಂಬ ಹೆಸರಿನ ಫೇಸ್ ಬುಕ್ ಪೇಜ್ ವಿರುದ್ಧ. ಯಾವುದೇ ಅಂಗಡಿ ಮಾಲಕರ ವಿರುದ್ಧ ದೂರು ನೀಡಲಾಗಿಲ್ಲ. ಇನ್ನು ಶಿವಕುಮಾರ್ ಗೆ ಈ ಪ್ರದೇಶದಲ್ಲಿ ಯಾವುದೇ ಅಂಗಡಿ ಅಥವಾ ಬೀದಿ ಬದಿ ವ್ಯಾಪಾರ ಇರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. 

opindia ಪ್ರಕಟಿಸಿರುವ 'ಸುದ್ದಿಯ' ಶೀರ್ಷಿಕೆ ಹಾಗು ಅದರ ಕೆಳಗಿರುವ ಸುದ್ದಿಗೂ ವ್ಯತ್ಯಾಸವಿದೆ. ಶೀರ್ಷಿಕೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ದೂರು ಎಂದು ಹೇಳಿದ್ದಾರೆ ಒಳಗೆ ಸುದ್ದಿಯಲ್ಲಿ ಒಬ್ಬ ವ್ಯಕ್ತಿ ಹಾಗು ಫೇಸ್ ಬುಕ್ ಪೇಜ್ ವಿರುದ್ಧ ದೂರು ನೀಡಲಾಗಿದೆ. opindia  ತನ್ನ ವರದಿಯನ್ನು https://thefederal.com/ ವೆಬ್ ಸೈಟ್ ನಲ್ಲಿ ಪ್ರಕಟಿತ ಸುದ್ದಿಯ ಆಧರಿತ ಎಂದು federal ಸುದ್ದಿಯ ಲಿಂಕ್ ಹಾಕಿದೆ (https://thefederal.com/states/south/karnataka/plaint-filed-over-saffron-flags-in-bengalurus-commercial-spaces/).  ಆದರೆ https://thefederal.com/ ಸುದ್ದಿಯಲ್ಲಿ ತನಗೆ ಬೇಕಾದ ಅಂಶಗಳನ್ನು ಮಾತ್ರ ತೆಗೆದುಕೊಂಡು ಉಳಿದವುಗಳನ್ನು ಬಿಟ್ಟು ಬಿಟ್ಟಿದೆ. 

ಉದಾಹರಣೆಗೆ ಶಿವಕುಮಾರ್ ಬಿಜೆಪಿ ಹಾಗು ಸಂಘಪರಿವಾರದೊಂದಿಗೆ ಗುರುತಿಸಿಕೊಂಡಿರುವ ವಿಷಯ federal ವೆಬ್ ಸೈಟ್ ಪ್ರಕಟಿಸುವ ಸುದ್ದಿಯಲ್ಲಿದೆ. ಆದರೆ ಅದೇ ವರದಿ ಆಧಾರದಲ್ಲಿ ಪ್ರಕಟಿಸುವ opindia ವರದಿಯಲ್ಲಿ ಈ ವಿಷಯವೇ ಇಲ್ಲ ! ಎರಡೆರಡು ಭಗವಾಧ್ವಜ ತನ್ನ ಅಂಗಡಿ ಮೇಲಿರುವ ವ್ಯಕ್ತಿಯೊಬ್ಬ ಅದನ್ನು ಯಾರು ಹಾಕಿದರು ಎಂದು ನನಗೇ ಗೊತ್ತಿಲ್ಲ ಎಂದು ಹೇಳಿದ ಎಂದು federal ವರದಿಯಲ್ಲಿದೆ. ಆದರೆ opindia ಆ ವಿಷಯವನ್ನು ಉಲ್ಲೇಖಿಸಿಲ್ಲ. 

Opindia ದ ಈ ಸುದ್ದಿ ತಿರುಚುವಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ. ಇಂತಹ ಸುಳ್ಳು ಸುದ್ದಿ ಪ್ರಕಟಿಸಬೇಡಿ ಎಂದು ಓದುಗರು ಟ್ವಿಟರ್ ನಲ್ಲಿ opindia ವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

Stop lying @OpIndia_com . I was in vijayanagar on may 22. Complaint filed against Shivakumar Gowda and others for fueling hatred. They put flag on street vendors cart without asking vendors causing fear among vendors. See the complaint. pic.twitter.com/TCpcQCZBtD

— vinaysreenivasa ವಿನಯ (@vinaysreeni) May 23, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X