Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ: ಗರಿಷ್ಠ ಪ್ರಕರಣಗಳು ದಾಖಲಾದ...

ಕೊರೋನ: ಗರಿಷ್ಠ ಪ್ರಕರಣಗಳು ದಾಖಲಾದ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ 10ನೇ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ25 May 2020 9:48 AM IST
share
ಕೊರೋನ: ಗರಿಷ್ಠ ಪ್ರಕರಣಗಳು ದಾಖಲಾದ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ 10ನೇ ಸ್ಥಾನ

ಹೊಸದಿಲ್ಲಿ: ಗರಿಷ್ಠ ಸಂಖ್ಯೆಯ ಕೋವಿಡ್-19 ಸೋಂಕು ಪ್ರಕರಣಗಳು ದಾಖಲಾದ ದೇಶಗಳ ಪೈಕಿ ಇರಾನ್ ದೇಶವನ್ನು ಹಿಂದಿಕ್ಕಿದ ಭಾರತ ವಿಶ್ವದಲ್ಲಿ 10ನೇ ಸ್ಥಾನದಲ್ಲಿದೆ. ಮೂರು ಹಂತಗಳ ಲಾಕ್‍ಡೌನ್ ಮುಗಿದು, ನಾಲ್ಕನೇ ಹಂತದ ಲಾಕ್‍ಡೌನಲ್ಲಿ ಒಂದಿಷ್ಟು ಸಡಿಲಿಕೆ ಮಾಡಿರುವ ನಡುವೆಯೇ ದೇಶದ ಒಟ್ಟು ಸೋಂಕಿತರ ಸಂಖ್ಯೆ 1,38,474ಕ್ಕೇರಿದೆ. ಸೋಂಕಿತರ ಸಂಖ್ಯೆ ಕಳೆದ 13 ದಿನಗಳಲ್ಲಿ ಸಂಖ್ಯೆ ದ್ವಿಗುಣಗೊಂಡಿದೆ.

ಮೊಟ್ಟಮೊದಲ ಬಾರಿಗೆ ವೈರಸ್ ಕಾಣಿಸಿಕೊಂಡ ಚೀನಾದಲ್ಲಿ ಇದೇ ಮೊದಲ ಬಾರಿಗೆ ಶನಿವಾರ ಹೊಸ ಪ್ರಕರಣಗಳ ಸಂಖ್ಯೆ ಶೂನ್ಯ ತಲುಪಿದೆ. ಆದರೆ ಭಾರತ ಹಾಗೂ ದಕ್ಷಿಣ ಅಮೆರಿಕದಲ್ಲಿ ತನ್ನ ದಾಳಿ ಮುಂದುವರಿಸಿದೆ. ದುರ್ಬಲ ಆರೋಗ್ಯ ಸೇವಾ ವ್ಯವಸ್ಥೆ ಇರುವ ಮತ್ತು ಬಡಜನತೆ ಅಧಿಕ ಇರುವ ದೇಶಗಳಲ್ಲಿ ವೈರಸ್ ವಿರುದ್ಧ ಹೋರಾಡುವುದು ಕಷ್ಟಸಾಧ್ಯ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಮಾರಕ ಸಾಂಕ್ರಾಮಿಕ ಇದೀಗ ಲ್ಯಾಟಿನ್ ಅಮೆರಿಕದಲ್ಲಿ ವ್ಯಾಪಕವಾಗಿ ಹಬ್ಬಿದೆ. ಬ್ರೆಜಿಲ್ ಹಾಗೂ ಮೆಕ್ಸಿಕೊದಲ್ಲಿ ಈ ವಾರ ಪ್ರತಿ ದಿನವೂ ಸೋಂಕು ಮತ್ತು ಸಾವಿನ ಪ್ರಮಾಣದಲ್ಲಿ ಹೊಸ ದಾಖಲೆ ನಿರ್ಮಾಣವಾಗುತ್ತಿದೆ. ಸೀಮಿತ ಲಾಕ್‍ಡೌನ್ ಹೇರಿರುವ ಸರ್ಕಾರಗಳ ಬಗ್ಗೆ ವ್ಯಾಪಕ ಟೀಕೆ ಕೇಳಿ ಬರುತ್ತಿದೆ. ಪೆರು, ಚಿಲಿ ಮತ್ತು ಈಕ್ವೆಡಾರ್ ನಲ್ಲೂ ಸಾಂಕ್ರಾಮಿಕ ಹೆಚ್ಚುತ್ತಿದ್ದರೂ, ತ್ವರಿತವಾಗಿ ಹಾಗೂ ತೀವ್ರ ಲಾಕ್‍ಡೌನ್ ಘೋಷಣೆಯಿಂದಾಗಿ ಪರಿಸ್ಥಿತಿ ನಿಭಾಯಿಸುತ್ತಿವೆ.

ಭಾರತದಲ್ಲಿ ಸೋಂಕು ಏರಿಕೆ ಪ್ರಮಾಣ ಬ್ರೆಜಿಲ್‍ನಲ್ಲಿ ಇದ್ದ ಪ್ರಮಾಣಕ್ಕೆ ಅನುಸಾರವಾಗಿದೆ. ಬ್ರೆಜಿಲ್ 15 ದಿನಗಳ ಹಿಂದೆ, ಭಾರತದಲ್ಲಿ ಈಗ ಇರುವಷ್ಟು ಸಂಖ್ಯೆಯ ಸೋಂಕಿತರನ್ನು ಹೊಂದಿತ್ತು. ಭಾರತದಲ್ಲಿ ಮೊದಲ 10 ಸಾವಿರ ಪ್ರಕರಣ ದಾಖಲಾಗಲು 43 ದಿನ ತೆಗೆದುಕೊಂಡಿದ್ದರೆ, ಕೊನೆಯ 10 ಸಾವಿರ ಕೇವಲ ಎರಡು ದಿನದಲ್ಲಿ ಹೆಚ್ಚಿದೆ. ಸೋಂಕು ಪ್ರಕರಣಗಳು 20 ರಿಂದ 30 ಸಾವಿರಕ್ಕೇರಲು ಏಳು ದಿನ ಹಿಡಿದಿತ್ತು. ಅಂತೆಯೇ ಭಾರತ ಒಂದು ಲಕ್ಷ ಪ್ರಕರಣ ತಲುಪಿದ ಮೇ 18ಕ್ಕೆ, ಸೋಂಕು ದ್ವಿಗುಣಗೊಳ್ಳಲು ಬೇಕಾಗುವ ಅವಧಿ 13.9 ದಿನ ಇದ್ದರೆ, ಇದೀಗ 13.1 ದಿನಕ್ಕೆ ಇಳಿದಿದೆ. ಹಲವು ಮಂದಿ ತಜ್ಞರ ಪ್ರಕಾರ, ಭಾರತದಲ್ಲಿ ಪ್ರಕರಣಗಳ ಸಂಖ್ಯೆ ಇನ್ನಷ್ಟೇ ಗರಿಷ್ಠ ಪ್ರಮಾಣ ತಲುಪಬೇಕಿದೆ.

ವಿಶ್ವದಲ್ಲಿ ಗರಿಷ್ಠ ಸೋಂಕಿತರಿರುವ ದೇಶಗಳ ಪೈಕಿ 9ನೇ ಸ್ಥಾನದಲ್ಲಿರುವ ಟರ್ಕಿ ಕಟ್ಟುನಿಟ್ಟಿನ ಲಾಕ್‍ಡೌನ್ ಘೋಷಿಸಿದೆ. ಎಂಟನೇ ಸ್ಥಾನದಲ್ಲಿರುವ ಜರ್ಮನಿ, ಪ್ರಕರಣಗಳನ್ನು ನಿಭಾಯಿಸಿದ್ದಕ್ಕಾಗಿ ಮೆಚ್ಚುಗೆ ಪಡೆದಿತ್ತು. ಎರಡು ವಾರಗಳ ಹಿಂದೆ ವಹಿವಾಟುಗಳು ಇಲ್ಲಿ ಮಾಮೂಲಿನತ್ತ ಬಂದಿದ್ದು, ರೆಸ್ಟೋರೆಂಟ್‍ನಲ್ಲಿ ಏಳು ಹೊಸ ಪ್ರಕರಣಗಳು ಮೊದಲ ಬಾರಿಗೆ ಪತ್ತೆಯಾಗಿವೆ. ಏಳನೇ ಸ್ಥಾನದಲ್ಲಿರುವ ಫ್ರಾನ್ಸ್ ಧಾರ್ಮಿಕ ಸೇವೆಗಳ ಪುನರಾರಂಭಕ್ಕೆ ಅನುಮತಿ ನೀಡಿದೆ. ಅಮೆರಿಕದಲ್ಲಿ ಗರಿಷ್ಠ ಅಂದರೆ 16 ಲಕ್ಷ ಪ್ರಕರಣಗಳು ದಾಖಲಾಗಿದ್ದು, ರಷ್ಯಾ ಹಾಗೂ ಬ್ರೆಜಿಲ್ ನಂತರದ ಸ್ಥಾನಗಳಲ್ಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X