Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಲಯಾಳಂ ಚಿತ್ರಕ್ಕಾಗಿ ನಿರ್ಮಿಸಲಾಗಿದ್ದ...

ಮಲಯಾಳಂ ಚಿತ್ರಕ್ಕಾಗಿ ನಿರ್ಮಿಸಲಾಗಿದ್ದ ಚರ್ಚ್ ಸೆಟ್ ಧ್ವಂಸಗೊಳಿಸಿದ ಸಂಘಪರಿವಾರ ಕಾರ್ಯಕರ್ತರು

ವಾರ್ತಾಭಾರತಿವಾರ್ತಾಭಾರತಿ25 May 2020 3:13 PM IST
share
ಮಲಯಾಳಂ ಚಿತ್ರಕ್ಕಾಗಿ ನಿರ್ಮಿಸಲಾಗಿದ್ದ ಚರ್ಚ್ ಸೆಟ್ ಧ್ವಂಸಗೊಳಿಸಿದ ಸಂಘಪರಿವಾರ ಕಾರ್ಯಕರ್ತರು

ತಿರುವನಂತಪುರಂ:  ಕೇರಳದ ಕಲಡಿ ಎಂಬಲ್ಲಿ ಮಲಯಾಳಂ ಚಿತ್ರವೊಂದರ ಚಿತ್ರೀಕರಣಕ್ಕಾಗಿ ನಿರ್ಮಿಸಲಾಗಿದ್ದ ಚರ್ಚ್ ಸೆಟ್ ಒಂದನ್ನು ಸಂಘಪರಿವಾರ ಕಾರ್ಯಕರ್ತರು ಧ್ವಂಸಗೊಳಿಸಿದ ಘಟನೆ ರವಿವಾರ ನಡೆದಿದೆ.

ಬಾಸಿಲ್ ಜೋಸೆಫ್ ಅವರ ನಿರ್ದೇಶನದ ಹಾಗೂ ಟೊವಿನೊ ಥಾಮಸ್ ಹಾಗೂ ಫೆಮಿನಾ ತಾರಾಗಣದ `ಮಿನ್ನಲ್ ಮುರಳಿ' ಎಂಬ ಮಲಯಾಳಂ ಚಿತ್ರೀಕರಣಕ್ಕಾಗಿ ಈ ಚರ್ಚ್ ಸೆಟ್ ನಿರ್ಮಿಸಲಾಗಿತ್ತು.

ಅಂತರಾಷ್ಟ್ರ ಹಿಂದು ಪರಿಷದ್ ತನ್ನ ಸಹ ಸಂಸ್ಥೆ ಅಂತರಾಷ್ಟ್ರ ಬಜರಂಗದಳ ಜತೆ ಸೇರಿ ಕಲಡಿ ಎಂಬಲ್ಲಿ ಪೆರಿಯಾರ್ ನದಿಯಲ್ಲಿನ ದ್ವೀಪವೊಂದರಲ್ಲಿ ನಿರ್ಮಿಸಲಾಗಿದ್ದ ಈ ಚರ್ಚ್ ಸೆಟ್  ಅನ್ನು ಧ್ವಂಸಗೈದಿದ್ದಾಗಿ ಎಎಚ್‍ಪಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹರಿ ಪಲೊಡೆ ಫೇಸ್ ಬುಕ್‍ನಲ್ಲಿ ಹೇಳಿಕೊಂಡಿದ್ದಾರೆ. ತಮಗೆ ಯಾರಲ್ಲಿಯೂ ಬೇಡಿ ಅಭ್ಯಾಸವಿಲ್ಲ,  ಆದುದರಿಂದ ಆದಿ ಶಂಕರಾಚಾರ್ಯ ಮಠದ ಸಮೀಪ ನಿರ್ಮಿಸಲಾಗಿದ್ದ ಈ ಸೆಟ್ ಅನ್ನು ಧ್ವಂಸಗೈದಿದ್ದಾಗಿ ಅವರು ಬರೆದಿದ್ದಾರೆ.

ಅನುಮತಿ ಪಡೆಯದೆಯೇ ಈ ಸೆಟ್ ನಿರ್ಮಿಸಲಾಗಿದೆ ಎಂದು ಸಂಘಟನೆ ಹೇಳಿಕೊಂಡಿದ್ದರೂ ಸ್ಥಳೀಯ ಪಂಚಾಯತ್ ಈ ಆರೋಪ ನಿರಾಕರಿಸಿದೆ ಹಾಗೂ ಚಿತ್ರ ತಂಡ ಅನುಮತಿ ಪಡೆದಿದೆ ಎಂದು ಪಂಚಾಯತ್ ಸದಸ್ಯ ಮಿನಿ ಬಿಜು ದೃಢೀಕರಿಸಿದ್ದಾರೆ. ಫೆಬ್ರವರಿಯಲ್ಲಿ ಅನುಮತಿ ನೀಡಲಾಗಿತ್ತು ಆದರೆ ನಂತರ ಲಾಕ್ ಡೌನ್‍ನಿಂದಾಗಿ ಚಿತ್ರೀಕರಣ ಮುಂದೂಡಲ್ಪಟ್ಟಿತ್ತು.

ಸೆಟ್ ಭಾಗವಾಗಿ ಚರ್ಚ್ ಕಟ್ಟಡ ಹಾಗೂ ಗಂಟೆ ಗೋಪುರ ನಿರ್ಮಿಸಲಾಗಿತ್ತು.

ಘಟನೆ ಕುರಿತು ಮಾತನಾಡಿದ ಚಿತ್ರ ನಿರ್ದೇಶಕ ಬಾಸಿಲ್ ಜೋಸೆಫ್ “ಈ ದ್ವೀಪದಲ್ಲಿ ಸಣ್ಣ ದೇವಾಲಯವಿದೆ ಹಾಗೂ ಅಲ್ಲಿ ಪ್ರತಿ ವರ್ಷ ಮಹಾಶಿವರಾತ್ರಿ ಆಚರಿಸಲಾಗುತ್ತದೆ.  ನದಿಯ ವಿರುದ್ಧ ದಿಕ್ಕಿನ ದಂಡೆಯಲ್ಲಿ ಖ್ಯಾತ ಆದಿ ಶಂಕರಾಚಾರ್ಯ ಮಠವಿದೆ. ಸ್ಥಳೀಯ ದೇವಳ, ಪಂಚಾಯತ್ ಹಾಗೂ ನೀರಾವರಿ ಇಲಾಖೆಯಿಂದಲೂ ಅನುಮತಿ ಪಡೆದಿದ್ದೆವು'' ಎಂದು  ಹೇಳಿದ್ದಾರೆ.

ಈಗ ಸೆಟ್ ಧ್ವಂಸಗೊಂಡಿರುವ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕುರಿತಂತೆ ಚಿತ್ರ ನಿರ್ಮಾಕರು ಚಿತ್ರ ಸಂಘಟನೆಗಳ ಜತೆ ಚರ್ಚಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

Woke up to this shocking news. The set of Minnal Murali, an under production Malayalam film was vandalized by AHP and Rashtriya Bajrang Dal for hurting religious sentiments.
The set which was near Aluva Mahadeva Temple had a Church, and apparently that hurts religious sentiments. pic.twitter.com/reXGUPhPpO

— BobinsAbraham #StayHomeStaySafe (@BobinsAbraham) May 25, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X