ಬೆಳಗಾವಿ: ಬಿಜೆಪಿ ಯುವ ಮುಖಂಡನ ಕಾರು ಅಪಘಾತ; ಇಬ್ಬರು ಮಹಿಳೆಯರ ಸಾವು
ಆರೋಪಿ ಬಂಧನ
ಬೆಳಗಾವಿ, ಮೇ 25: ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ ಬಳಿ ನಡೆದ ಕಾರು ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಬಿಜೆಪಿ ಯುವ ಮುಖಂಡನ ನಿರ್ಲಕ್ಷ್ಯವೇ ಇಬ್ಬರು ಮಹಿಳೆಯರ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ.
ರಾತ್ರಿ ಊಟ ಮುಗಿಸಿ ವಾಕಿಂಗ್ ಹೋಗುತ್ತಿದ್ದ ಮಹಿಳೆಯರ ಮೇಲೆ ಬಿಜೆಪಿ ನಾಯಕ ಯುವರಾಜ್ ಜಾಧವ್ ಕಾರು ಹರಿಸಿದ್ದಾನೆ ಎನ್ನಲಾಗಿದ್ದು, ಘಟನೆಯಲ್ಲಿ ಸವಿತಾ ಪಾಟೀಲ್(44) ಹಾಗೂ ವಿದ್ಯಾ ಪಾಟೀಲ್(52) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಯುವರಾಜ್ ಜಾಧವ್ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದೇ ಅವಘಡಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಶಾಂತಾ ಚೌಗುಲೆ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಅಪಘಾತ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಜಿಲ್ಲಾ ಬಿಜೆಪಿ ಯುವಮೋರ್ಚಾ ಮಾಜಿ ಅಧ್ಯಕ್ಷ ಯುವರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ.
Next Story