Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಕರಿಬೇವಿನ ಸೊಪ್ಪಿನ ಅದ್ಭುತ...

ಕರಿಬೇವಿನ ಸೊಪ್ಪಿನ ಅದ್ಭುತ ಆರೋಗ್ಯಲಾಭಗಳು ನಿಮಗೆ ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ25 May 2020 11:17 PM IST
share
ಕರಿಬೇವಿನ ಸೊಪ್ಪಿನ ಅದ್ಭುತ ಆರೋಗ್ಯಲಾಭಗಳು ನಿಮಗೆ ಗೊತ್ತೇ?

ಆಹಾರ ಪದಾರ್ಥಗಳಲ್ಲಿ ಒಗ್ಗರಣೆಗೆ ಬಳಸುವ ಕರಿಬೇವು ಸ್ವಾದಕ್ಕಿಂತ ಹೆಚ್ಚಿನದನ್ನು ನೀಡುತ್ತದೆ. ಕಬ್ಬಿಣ,ಕ್ಯಾಲ್ಸಿಯಂ,ರಂಜಕ ಮತ್ತು ಸಿ,ಬಿ,ಎ ಇತ್ಯಾದಿ ವಿಟಾಮಿನ್‌ಗಳನ್ನು ಸಮೃದ್ಧವಾಗಿ ಒಳಗೊಂಡಿರುವ ಇದು ಶರೀರಕ್ಕೆ ನಾರನ್ನೂ ಒದಗಿಸುತ್ತದೆ. ಇದಿಷ್ಟೇ ಅಲ್ಲ,ಕರಿಬೇವು ರಕ್ತದಲ್ಲಿಯ ಸಕ್ಕರೆ ಮಟ್ಟವನ್ನು ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು,ಆರೋಗ್ಯಕರವಾದ ಜೀರ್ಣಕ್ರಿಯೆಗೆ,ಸೋಂಕುಗಳ ವಿರುದ್ಧ ಹೋರಾಡಲು ಹಾಗೂ ಚರ್ಮ ಮತ್ತು ತಲೆಗೂದಲ ಸೊಬಗನ್ನು ಹೆಚ್ಚಿಸಲೂ ನೆರವಾಗುತ್ತದೆ.

* ರಕ್ತದಲ್ಲಿಯ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ

 ಕರಿಬೇವಿನಲ್ಲಿರುವ ವಿಶೇಷ ವಿಧದ ನಾರು ರಕ್ತದಲ್ಲಿಯ ಸಕ್ಕರೆ ಮಟ್ಟವನ್ನು ತಗ್ಗಿಸುವಲ್ಲಿ ಮಹತ್ವದ ಪಾತ್ರವನ್ನು ಹೊಂದಿದೆ. ಈ ಎಲೆಗಳು ಶರೀರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇನ್ಸುಲಿನ್ ಬಿಡುಗಡೆಗೊಳಿಸಲು ಮತ್ತು ರಕ್ತದಲ್ಲಿಯ ಸಕ್ಕರೆ ಮಟ್ಟವನ್ನು ತಗ್ಗಿಸಲು ನೆರವಾಗುತ್ತವೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ. ಮಧುಮೇಹಿಗಳು ತಮ್ಮ ಎಲ್ಲ ಆಹಾರಗಳಲ್ಲಿ ಸಾಧ್ಯವಿದ್ದಷ್ಟು ಮಟ್ಟಿಗೆ ಕರಿಬೇವು ಇರುವಂತೆ ನೋಡಿಕೊಳ್ಳಬೇಕು. ಪ್ರತಿದಿನ ರಾತ್ರಿ ಖಾಲಿಹೊಟ್ಟೆಯಲ್ಲಿ ತಾಜಾ ಕರಿಬೇವನ್ನು ಸೇವಿಸುವ ಮೂಲಕ ಮಧುಮೇಹ ತೊಂದರೆಯನ್ನು ದೂರವಿಡಬಹುದು.

* ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುತ್ತದೆ

 ಉತ್ಕರ್ಷಣ ನಿರೋಧಕಗಳ ಆಗರವಾಗಿರುವ ಕರಿಬೇವು ಕೆಟ್ಟ ಕೊಲೆಸ್ಟ್ರಾಲ್ (ಎಲ್‌ಡಿಎಲ್)ನ ಉತ್ಪತ್ತಿಗೆ ಕಾರಣವಾಗುವ ಕೊಬ್ಬಿನ ಉತ್ಕರ್ಷಣ ಪ್ರಕ್ರಿಯೆಯನ್ನು ತಡೆಯುತ್ತದೆ ಮತ್ತು ಇದು ಒಳ್ಳೆಯ ಕೊಲೆಸ್ಟ್ರಾಲ್(ಎಚ್‌ಡಿಎಲ್)ನ ಮಟ್ಟವನ್ನು ಹೆಚ್ಚಿಸುತ್ತದೆ ಹಾಗೂ ಶರೀರವನ್ನು ಹೃದ್ರೋಗಗಳು ಮತ್ತು ಅಪಧಮನಿ ಕಾಠಿಣ್ಯದಿಂದ ರಕ್ಷಿಸುತ್ತದೆ. ಇದಕ್ಕಾಗಿ ಪ್ರತಿದಿನ ಕರಿಬೇವಿನ ಚಟ್ನಿಯನ್ನು ಸೇವಿಸಬೇಕು.

* ಆರೋಗ್ಯಕರ ಜೀರ್ಣಕ್ರಿಯೆಗೆ ನೆರವಾಗುತ್ತದೆ

ಕರಿಬೇವಿನ ಎಲೆಗಳು ಸೌಮ್ಯ ವಿರೇಚಕ ಗುಣವನ್ನು ಹೊಂದಿವೆಯಾದರೂ ಹೊಟ್ಟೆಯ ತೊಂದರೆಗಳನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವನ್ನು ಹೊಂದಿವೆ. ಈ ಎಲೆಗಳಲ್ಲಿರುವ ಕಾರ್ಬರೆಲ್ ಅಲ್ಕಲಾಯ್ಡೆ ಬ್ಯಾಕ್ಟೀರಿಯಾ ನಿರೋಧಕ ಮತ್ತು ಉರಿಯೂತ ನಿರೋಧಕ ಗುಣಗಳನ್ನು ಹೊಂದಿದ್ದು,ಇವು ಹೊಟ್ಟೆಯ ತೊಂದರೆಗಳನ್ನು ನಿವಾರಿಸುವಲ್ಲಿ ಪರಿಣಾಮಕಾರಿಯಾಗಿವೆ. ಉತ್ತಮ ಜೀರ್ಣಕ್ರಿಯೆಗಾಗಿ ಕೆಲವು ಕರಿಬೇವಿನ ಎಲೆಗಳನ್ನು ಚೂರುಗಳನ್ನಾಗಿಸಿ ಅದನ್ನು ಮಜ್ಜಿಗೆಯ ಜೊತೆ ಸೇವಿಸಬೇಕು

* ಕಟ್ಟಿದ ಮೂಗನ್ನು ತೆರೆಯುತ್ತದೆ

 ಎದೆ ಮತ್ತು ಮೂಗು ಕಟ್ಟಿಕೊಂಡಿದ್ದರೆ ಕರಿಬೇವಿನ ಎಲೆಯು ಅತ್ಯುತ್ತಮ ಮನೆಮದ್ದಾಗಿ ಕಾರ್ಯ ನಿರ್ವಹಿಸುತ್ತದೆ. ಸಿ ಮತ್ತು ಎ ವಿಟಾಮಿನ್‌ಗಳೊಂದಿಗೆ ಅತ್ಯಂತ ಪ್ರಬಲ ಉರಿಯೂತ ನಿರೋಧಕ ಡಿಕಂಜೆಸ್ಟಂಟ್ ಮತ್ತು ಉತ್ಕರ್ಷಣ ನಿರೋಧಕ ಏಜೆಂಟ್ ಆಗಿರುವ ಕೇಂಪ್‌ಫೆರಾಲ್ ಎಂಬ ಸಂಯುಕ್ತವನ್ನು ಒಳಗೊಂಡಿರುವ ಕರಿಬೇವಿನ ಎಲೆಯು ಕಟ್ಟಿದ ಮೂಗನ್ನು ತೆರೆಯಲು ಮತ್ತು ಕಟ್ಟಿಕೊಂಡಿದ್ದ ಲೋಳೆ ಹೊರಹೋಗಲು ನೆರವಾಗುತ್ತದೆ. ಇದಕ್ಕಾಗಿ ಕರಿಬೇವಿನ ಎಲೆಯ ಹುಡಿಯಿಂದ ಪೇಸ್ಟ್ ಮಾಡಿ ಅದಕ್ಕೆ ಒಂದು ಚಮಚ ಜೇನು ಬೆರೆಸಿಕೊಂಡು ದಿನಕ್ಕೆರಡು ಬಾರಿ ಸೇವಿಸಬೇಕು.

* ತಲೆಗೂದಲಿಗೆ ಹಾನಿಯನ್ನು ತಡೆಯುತ್ತದೆ

ಕರಿಬೇವಿನ ಎಲೆಯು ಕೂದಲು ನರೆಯುವುದನ್ನು ತಡೆಯುತ್ತದೆ,ಹಾನಿಗೀಡಾದ ಕೂದಲಿಗೆ ಚಿಕಿತ್ಸೆಯನ್ನು ನೀಡುತ್ತದೆ,ತಲೆಗೂದಲನ್ನು ದಟ್ಟವಾಗಿಸುತ್ತದೆ ಮತ್ತು ಕೂದಲನ್ನು ಹೆಚ್ಚು ಆರೋಗ್ಯಯುತವಾಗಿಸುತ್ತದೆ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ತಲೆಹೊಟ್ಟನ್ನೂ ನಿವಾರಿಸುತ್ತದೆ. ಕರಿಬೇವಿನ ಎಲೆಗಳ ರಸವನ್ನು 100 ಎಂಎಲ್ ತೆಂಗಿನೆಣ್ಣೆಗೆ ಸೇರಿಸಿ ಅದು ಕಪ್ಪಾಗುವತನಕ ಕಾಯಿಸಬೇಕು ಮತ್ತು ಇದನ್ನು ವಾರಕ್ಕೆರಡು ಬಾರಿ ನೆತ್ತಿಗೆ ಹಚ್ಚಿಕೊಳ್ಳಬೇಕು.

* ಕಲೆಗಳು ಮತ್ತು ಮೊಡವೆಗಳನ್ನು ಕಡಿಮೆ ಮಾಡುತ್ತದೆ

 ಕರಿಬೇವಿನ ಎಲೆಯು ಚರ್ಮದಲ್ಲಿ ಎಲ್ಲ ಕೊಳೆಗಳು ಮತ್ತು ಅಶುದ್ಧತೆಗಳನ್ನು ತೆಗೆಯುತ್ತದೆ. ಮೊಡವೆಗಳುಂಟಾಗುವುದನ್ನು ತಡೆಯುವ ಮೂಲಕ ಚರ್ಮವನ್ನು ತಾಜಾ ಆಗಿರಿಸಿ ಅದು ಹೊಳೆಯುವಂತಾಗಲು ನೆರವಾಗುತ್ತದೆ. ಕರಿಬೇವಿನ ಎಲೆಗಳು, ಅರಿಷಿಣ, ಲಿಂಬೆರಸ ಮತ್ತು ಸ್ವಲ್ಪ ನೀರನ್ನು ಬೆರೆಸಿ ಪೇಸ್ಟ್ ತಯಾರಿಸಿ ಅದನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿಕೊಂಡು ಅರ್ಧ ಗಂಟೆಯ ಬಳಿಕ ತೊಳೆದುಕೊಳ್ಳಬೇಕು. ದಿನಕ್ಕೆರಡು ಬಾರಿ ಹೀಗೆ ಮಾಡಬೇಕು. ಕರಿಬೇವಿನ ಹುಡಿಗೆ ಲಿಂಬೆರಸ ಮತ್ತು ಪನ್ನೀರು ಸೇರಿಸಿಯೂ ಪೇಸ್ಟ್ ತಯಾರಿಸಿ ಇದೇ ರೀತಿಯಲ್ಲಿ ಬಳಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X