Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಎಸ್ಆರ್‌ಟಿಸಿ ಬಸ್ ಚಾಲಕ-ನಿರ್ವಾಹಕರಿಗೆ...

ಕೆಎಸ್ಆರ್‌ಟಿಸಿ ಬಸ್ ಚಾಲಕ-ನಿರ್ವಾಹಕರಿಗೆ ಊಟದ ಸಮಸ್ಯೆ !

ವಾರ್ತಾಭಾರತಿವಾರ್ತಾಭಾರತಿ25 May 2020 11:38 PM IST
share
ಕೆಎಸ್ಆರ್‌ಟಿಸಿ ಬಸ್ ಚಾಲಕ-ನಿರ್ವಾಹಕರಿಗೆ ಊಟದ ಸಮಸ್ಯೆ !

ಬೆಂಗಳೂರು, ಮೇ 25: ಕೋವಿಡ್-19 ಲಾಕ್‍ಡೌನ್ ಸಡಿಲಿಕೆ ಬಳಿಕ ದೂರದ ಊರುಗಳಿಗೆ ತೆರಳುವ ಕೆಎಸ್ಆರ್‌ಟಿಸಿ ಬಸ್‍ಗಳ ಚಾಲಕ-ನಿರ್ವಾಹಕರು ಊಟ-ತಿಂಡಿಯಿಲ್ಲದೆ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯ ಎದುರಾಗಿದೆ.

ರಾಜಧಾನಿಯಿಂದ ದೂರದ ನಗರಗಳಾದ ಮಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕ್ಕೆ ತೆರಳುವ ಬಸ್ ಸಿಬ್ಬಂದಿಗೆ ಮುಂಜಾನೆ ಹಾಗೂ ರಾತ್ರಿಯ ವೇಳೆಯಲ್ಲಿ ಊಟ-ತಿಂಡಿಯ ಸಮಸ್ಯೆ ಎದುರಾಗಿದೆ.

ಬೆಂಗಳೂರಿನಿಂದ ಮುಂಜಾನೆ ಅಥವಾ ರಾತ್ರಿ ಪಾಳಿಯಲ್ಲಿ ಬಸ್‍ಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಒಂದೊಂದು ನಗರವನ್ನು ತಲುಪಲು ಕನಿಷ್ಠ 5 ರಿಂದ 7-8 ತಾಸುಗಳ ಅಗತ್ಯವಿದೆ. ಆದರೆ, ಎಲ್ಲಿಯೂ ಹೊಟೇಲ್‍ಗಳಿಲ್ಲದೇ ಅನ್ನ-ನೀರಿಗಾಗಿ ಚಾಲಕ ಮತ್ತು ನಿರ್ವಾಹಕರು ಪರದಾಡುವಂತಾಗಿದೆ. ಅಲ್ಲದೆ, ಕೊರೋನ ಆತಂಕದ ನಡುವೆಯೇ ಪ್ರಯಾಣ ಮಾಡಬೇಕಾಗಿದೆ.

ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಮುಂಜಾನೆ 7 ಗಂಟೆಯಿಂದಲೇ ಬಸ್‍ಗಳು ಕಾರ್ಯಾಚರಿಸಲು ಆರಂಭಿಸುತ್ತವೆ. ಪ್ರಯಾಣಿಕರು ಸಹಜವಾಗಿಯೇ ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತುಕೊಂಡು ಟಿಕೆಟ್ ಖರೀದಿ ಮಾಡುತ್ತಿರುತ್ತಾರೆ. ಅವರನ್ನು ಬಸ್‍ಗೆ ಹತ್ತಿಸುವ ಪ್ರಕ್ರಿಯೆಯಲ್ಲಿ ಬೆಳಗ್ಗೆ ಸಿಬ್ಬಂದಿಗೆ ತಿಂಡಿ ಮಾಡಲು ಸಮಯವೇ ಇರುವುದಿಲ್ಲ.

ರಾಜ್ಯ ಸರಕಾರದ ಮಾರ್ಗಸೂಚಿಯಂತೆ ಚಾಲನೆಯ ವೇಳೆ ಮಾರ್ಗ ಮಧ್ಯೆ ಯಾವುದೇ ಕಡೆಗಳಲ್ಲಿ ಬಸ್ ನಿಲ್ಲಿಸುವ ಹಾಗಿಲ್ಲ. ಅಷ್ಟೇ ಅಲ್ಲ, ಈ ಹಿಂದಿನ ವ್ಯವಸ್ಥೆಯಂತೆ ಬಸ್ ಚಾಲಕ, ನಿರ್ವಾಹಕ ಸಹಿತ ಪ್ರಯಾಣಿಕರಿಗೆ ಊಟಕ್ಕೆಂದು ಮಾರ್ಗ ಮಧ್ಯೆ ಬಸ್ ನಿಲ್ಲಿಸುವಂತಿಲ್ಲ. ಪ್ರಯಾಣಿಕರು ಬಸ್ ಹತ್ತುವಾಗಲೇ ಪಾರ್ಸೆಲ್ ತರಬೇಕು. ಇನ್ನು, ಚಾಲಕರು, ನಿರ್ವಾಹಕರು ನಿಗದಿತ ಡಿಪೋಗೆ ತೆರಳಿದ ಬಳಿಕ ಊಟ-ತಿಂಡಿ ಸೇವಿಸಬೇಕು.

ಊಟ, ತಿಂಡಿಗಾಗಿ ಬಸ್ ಚಾಲಕರು-ನಿರ್ವಾಹಕರು ಹೊಟೇಲ್‍ಗಳನ್ನು ಅವಲಂಬಿಸಿರುತ್ತಾರೆ. ಅಲ್ಲದೆ, ಹೊಟೇಲ್‍ಗಳಲ್ಲಿಯೂ ಪಾರ್ಸಲ್‍ಗಷ್ಟೇ ಅವಕಾಶ ನೀಡಲಾಗಿದೆ. ಅದಕ್ಕೂ ಹೊಟೇಲ್‍ನಲ್ಲಿ ದುಪ್ಪಟ್ಟು ದರ ನೀಡಬೇಕು. ಒಂದೆಡೆ ಈ ಸಮಸ್ಯೆಯಾದರೆ, ಮತ್ತೊಂದಡೆ ನಿರ್ವಾಹಕರಿಗೆ ಪ್ರಯಾಣಿಕರ ಗೋಳು ತಪ್ಪುತ್ತಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಚಾರವು ಪ್ರಯಾಣಿಕರ ನಡುವೆ ವಾಗ್ವಾದಕ್ಕೆ ಕಾರಣವಾಗುತ್ತಿದೆ.

ಮಾರ್ಗಸೂಚಿಯಂತೆ ಸಂಚಾರ: ರಾಜ್ಯ ಸರಕಾರದ ಮಾರ್ಗಸೂಚಿಯಂತೆ ಕೆಎಸ್ಸಾರ್ಟಿಸಿ ಬಸ್ ಕಾರ್ಯಾಚರಿಸುತ್ತಿವೆ. ಹೊಟೇಲ್‍ಗಳು ಈಗಾಗಲೇ ಬಂದ್ ಆಗಿದ್ದು, ಸಿಬಂದಿಗೆ ಅಥವಾ ಪ್ರಯಾಣಿಕರಿಗೆ ಊಟ-ತಿಂಡಿಗೆಂದು ಎಲ್ಲಿಯೂ ನಿಲ್ಲಿಸುವುದಿಲ್ಲ. ಪ್ರಯಾಣಿಕರು ಮನೆಯಿಂದ ಬರುವಾಗ ಊಟ-ತಿಂಡಿ ತರಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X