Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಲ್ಯಾಣ ಕರ್ನಾಟಕದಲ್ಲಿ 150ಕ್ಕೂ ಅಧಿಕ...

ಕಲ್ಯಾಣ ಕರ್ನಾಟಕದಲ್ಲಿ 150ಕ್ಕೂ ಅಧಿಕ ಬಾಲ್ಯವಿವಾಹ ತಡೆ

60 ದಿನದಲ್ಲಿ ಬಾಲ್ಯವಿವಾಹ ಸಂಬಂಧ ಚೈಲ್ಡ್ ಲೈನ್‌ಗೆ 525 ಕರೆಗಳು !

ಯುವರಾಜ್ ಮಾಳಗಿಯುವರಾಜ್ ಮಾಳಗಿ26 May 2020 10:37 AM IST
share
ಕಲ್ಯಾಣ ಕರ್ನಾಟಕದಲ್ಲಿ 150ಕ್ಕೂ ಅಧಿಕ ಬಾಲ್ಯವಿವಾಹ ತಡೆ

ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆ ಜನರು ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದರೆ, ಇತ್ತ ಕೆಲವರು ಬಾಲ್ಯವಿವಾಹ ನಡೆಸಲು ಮುಂದಾಗುತ್ತಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯದಲ್ಲಿ 60 ದಿನಗಳಲ್ಲಿ ಬಾಲ್ಯವಿವಾಹ ಸಂಬಂಧ 1098 ಚೈಲ್ಡ್ ಲೈನ್‌ಗೆ 525 ಕರೆಗಳು ಬಂದಿವೆ!

ಬಾಲ್ಯವಿವಾಹವು ಸಾಮಾಜಿಕ ಪಿಡುಗಾಗಿದ್ದು, ಮಾ. 24 ರಿಂದ ಮೇ 15ರವರೆಗೆ ಚೈಲ್ಡ್ ಲೈನ್‌ಗೆ ಸಾವಿರಾರು ಕರೆಗಳು ಬಂದಿದ್ದು, ಅದರಲ್ಲಿ ಬಾಲ್ಯವಿವಾಹ ಸಂಬಂಧ 525 ಕರೆಗಳು ಬಂದಿವೆ. ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಚೈಲ್ಡ್ ಲೈನ್, ಪೊಲೀಸ್ ಇಲಾಖೆ ಸೇರಿ ವಿವಿಧ ಅಧಿಕಾರಿಗಳು ತೆರಳಿ ಪೋಷಕರಿಗೆ ಬಿಸಿ ಮುಟ್ಟಿಸಿದ್ದಾರೆ.

ಅಧಿಕಾರಿಗಳು ಸ್ಥಳಕ್ಕೆ ತಲುಪುವುದರಲ್ಲಿ ಕೆಲವೆಡೆ ಮದುವೆಯಾಗಿದ್ದು, ವಧು, ವರನನ್ನು ವಶಕ್ಕೆ ಪಡೆದು ಪೋಷಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಮಾರ್ಚ್, ಎಪ್ರಿಲ್, ಮೇ ತಿಂಗಳಲ್ಲಿ ವಿವಾಹಕ್ಕೆ ಹೆಚ್ಚಿನ ಮುಹೂರ್ತಗಳಿದ್ದು, ಇಂತಹ ಸಂದರ್ಭದಲ್ಲಿ ಲಾಕ್‌ಡೌನ್ ೋಷಣೆಯಾಗಿದೆ. ಸಭೆ, ಸಮಾರಂಭ, ಕಾರ್ಯಕ್ರಮಗಳಿಗೆ ಅನುಮತಿ ಇಲ್ಲದಂತಾಗಿದೆ. ಬಹುತೇಕ ಕಡೆಗಳಲ್ಲಿ ಮದುವೆಗಳನ್ನು ಅನೇಕರು ಮುಂದೂಡಿದ್ದಾರೆ. ಆದರೂ ಲಾಕ್‌ಡೌನ್ ಸಂದರ್ಭದಲ್ಲಿ ಅಧಿಕಾರಿಗಳ ಕಣ್ತಪ್ಪಿಸಿ ಬಾಲ್ಯವಿವಾಹಗಳನ್ನು ನಡೆಸುತ್ತಿದ್ದಾರೆ.

ಲಾಕ್‌ಡೌನ್ ಹಿನ್ನೆಲೆ ಹೆಚ್ಚಿನ ಜನರು ಬಾರದಿರುವುದು, ಅಧಿಕಾರಿಗಳು ತಮ್ಮ ಕೆಲಸದಲ್ಲಿಯೇ ನಿರತರಾಗಿರಲಿದ್ದು, ಈ ವೇಳೆ ಬಾಲ್ಯವಿವಾಹ ಮಾಡಿದರೆ ಹಣವೂ ಹೆಚ್ಚಾಗಿ ಖರ್ಚಾಗುವುದಿಲ್ಲ. ಹಾಗೆಯೇ ಕಾನೂನು ತೊಡಕುಗಳು ಇರುವುದಿಲ್ಲ ಎಂಬ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಾಲ್ಯವಿವಾಹ ನಡೆಯುತ್ತಿವೆ ಎಂದು ಚೈಲ್ಡ್ ಲೈನ್ ಸಿಬ್ಬಂದಿ ತಿಳಿಸಿದ್ದಾರೆ.

ಕೊರೋನ ಹಿನ್ನೆಲೆ ಸಭೆ ರದ್ದು: ಬಾಲ್ಯವಿವಾಹವನ್ನು ಪರಿಣಾಮಕಾರಿಯಾಗಿ ತಡೆಯಲು ಗ್ರಾಮ, ತಾಲೂಕು, ಜಿಲ್ಲೆ, ರಾಜ್ಯಮಟ್ಟದಲ್ಲಿ ಸಮಿತಿ ರಚಿಸಲಾಗಿದ್ದು, 2 ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಆದರೆ, ಕೊರೋನ ಹಿನ್ನೆಲೆ ಸಭೆಗಳು ನಡೆದಿಲ್ಲ.

ಕಲ್ಯಾಣ ಕರ್ನಾಟಕದಿಂದ ಹೆಚ್ಚು ಕರೆಗಳು: 1098 ಚೈಲ್ಡ್ ಲೈನ್‌ಗೆ ಬಾಲ್ಯವಿವಾಹಕ್ಕೆ ಸಂಬಂಧಿಸಿ ಕಲ್ಯಾಣ ಕರ್ನಾಟಕದಿಂದಲೇ ಅಧಿಕ ಕರೆಗಳು ಬಂದಿವೆ. ಲಾಕ್‌ಡೌನ್ ಅವಧಿಯಲ್ಲಿ 525 ಕರೆಗಳಲ್ಲಿ ಅರ್ಧಕ್ಕಿಂತ ಅಧಿಕ ಕರೆಗಳು ಕಲ್ಯಾಣ ಕರ್ನಾಟಕ ಭಾಗದಿಂದ ಬಂದಿರುವುದು ಅಚ್ಚರಿ ಮೂಡಿಸಿದೆ.

ಬಳ್ಳಾರಿಯಲ್ಲಿ 72 ಬಾಲ್ಯವಿವಾಹಗಳಿಗೆ ತಡೆ

ಮಾ.24ರಿಂದ ಈವರೆಗಿನ ಲಾಕ್‌ಡೌನ್ ಸಂದರ್ದಲ್ಲಿ ಕಲ್ಯಾಣ ಕರ್ನಾಟಕದಲ್ಲಿ 150ಕ್ಕೂ ಅಧಿಕ ಬಾಲ್ಯವಿವಾಹಗಳನ್ನು ತಡೆಯಲಾಗಿದೆ. ಬಳ್ಳಾರಿ 72, ಕೊಪ್ಪಳ 8, ಯಾದಗಿರಿ 7, ಕಲಬುರಗಿಯಲ್ಲಿ 7 ಬಾಲ್ಯವಿವಾಹಗಳನ್ನು ತಡೆಯಲಾಗಿದೆ. ಹಾಗೆಯೇ ಚಿತ್ರದುರ್ಗ 14, ಬೆಳಗಾವಿ 4, ದಾವಣಗೆರೆ 14, ಬಾಗಲಕೋಟೆ 5, ಮೈಸೂರು 11 ಬಾಲ್ಯವಿವಾಹ ತಡೆಯಲಾಗಿದೆ. ಲಾಕ್‌ಡೌನ್ ಸಂದರ್ದಲ್ಲಿಯೇ ಬಾಲ್ಯವಿವಾಹಗಳ ಸಂಖ್ಯೆ ಹೆಚ್ಚಳವಾದ ಆರೋಪಗಳು ಬಂದ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ ಉಪನಿರ್ದೇಶಕರಿಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸೂಚಿಸಿ ಆದೇಶ ಹೊರಡಿಸಿ

ಮಕ್ಕಳ ಹಕ್ಕುಗಳ ರಕ್ಷಣೆಗೆ ಸಹಾಯವಾಣಿ ಸ್ಥಾಪನೆ

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಕೋವಿಡ್-19 ಅವಧಿಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಿಗಾಗಿ ಸಹಾಯವಾಣಿಯನ್ನು ಆರಂಭಿಸಿದೆ. ಬಾಲ್ಯವಿವಾಹ, ಬಾಲಕಾರ್ಮಿಕ, ಮಕ್ಕಳ ಮೇಲೆ ನಡೆಯುವ ಅತ್ಯಾಚಾರ, ಲೈಂಗಿಕ ಕಿರುಕುಳ, ಶೋಷಣೆ, ಮಕ್ಕಳ ಸಾಗಣೆ, ಮಕ್ಕಳ ಮಾರಾಟ, ಮಕ್ಕಳು ಕಾಣೆಯಾಗುವುದು ಮತ್ತು ಶಾಲೆಗಳಿಗೆ ಸಂಬಂಧಿಸಿದ ದೂರುಗಳಿಗಾಗಿ ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ 080-47181177 ಸಂಪರ್ಕಿಸಬಹುದು.

ಲಾಕ್‌ಡೌನ್ ಅವಧಿಯಲ್ಲಿ ಬಾಲ್ಯವಿವಾಹ ಪ್ರಕರಣ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಅಪೌಷ್ಟಿಕತೆಯಿಂದ ನವಜಾತ ಶಿಶುಗಳ ಮರಣ ಸಂಖ್ಯೆ ಅಧಿಕವಾಗಿದೆ. ಇದರ ನಡುವೆ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿದ್ದು, ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಸಹಾಯವಾಣಿ ಆರಂಭಿಸಲಾಗಿದೆ.

-ಡಾ. ಅಂತೋಣಿ ಸೆಬಾಸ್ಟಿಯನ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು

share
ಯುವರಾಜ್ ಮಾಳಗಿ
ಯುವರಾಜ್ ಮಾಳಗಿ
Next Story
X