Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೆಲಂಗಾಣದಲ್ಲಿ 9 ಜನರನ್ನು ಕೊಂದು ಬಾವಿಗೆ...

ತೆಲಂಗಾಣದಲ್ಲಿ 9 ಜನರನ್ನು ಕೊಂದು ಬಾವಿಗೆ ಎಸೆದ ಪ್ರಕರಣ ಭೇದಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ26 May 2020 11:01 AM IST
share
ತೆಲಂಗಾಣದಲ್ಲಿ 9 ಜನರನ್ನು ಕೊಂದು ಬಾವಿಗೆ ಎಸೆದ ಪ್ರಕರಣ ಭೇದಿಸಿದ ಪೊಲೀಸರು

ಹೈದರಾಬಾದ್,ಮೇ 26: ಕಳೆದ ವಾರ ತೆಲಂಗಾಣದ ವಾರಂಗಲ್‌ನಲ್ಲಿ 9 ಜನರನ್ನು ಕೊಲೆಗೈದು ಬಾವಿಗೆ ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 24ರ ವಯಸ್ಸಿನ ವ್ಯಕ್ತಿಯೊಬ್ಬನನ್ನು ಸೋಮವಾರ ಬಂಧಿಸಿದ್ದಾರೆ.

ಒಂದೇ ಕುಟುಂಬದ ಆರು ಜನ ಹಾಗೂ ಬಿಹಾರದ ಇಬ್ಬರು ಹಾಗೂ ತ್ರಿಪುರಾದ ಒಬ್ಬನ ಮೃತದೇಹ ಹೈದರಾಬಾದ್‌ನಿಂದ 150 ಕಿ.ಮೀ. ದೂರದ ಹಳ್ಳಿಯೊಂದರ ಬಾವಿಯೊಳಗೆ ಪತ್ತೆಯಾಗಿತ್ತು. ಆರೋಪಿಯು ತಾನು ಮಾಡಿದ್ದ ಮಹಿಳೆಯ ಕೊಲೆ ಕೃತ್ಯವನ್ನು ಮುಚ್ಚಿಹಾಕಲು 9 ಜನರನ್ನು ಸಾಯಿಸಿದ್ದಾಗಿ ಬಾಯಿ ಬಿಟ್ಟಿದ್ದಾನೆ. ಮಹಿಳೆಯು ಮಾರ್ಚ್‌ನಿಂದ ನಾಪತ್ತೆಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸಂಜಯಕುಮಾರ್ ಯಾದವ್ ಊಟದಲ್ಲಿ ನಿದ್ದೆ ಮಾತ್ರೆ ಬೆರಸಿ ಕೊಲೆಗೈದಿದ್ದ. ಬಳಿಕ ಎಲ್ಲರನ್ನು ಬಾವಿಗೆ ಎಸೆದಿದ್ದ. ತನ್ನ ಕುಟುಂಬದ ಸಂಬಂಧಿ ಮಹಿಳೆಯೊಬ್ಬಳ ಕೊಲೆ ಕೃತ್ಯ ಮುಚ್ಚಿಹಾಕಲು ಯಾದವ್ 9 ಜನರನ್ನು ಸಾಯಿಸಿದ್ದ ಎಂದು ವಾರಂಗಲ್ ಪೊಲೀಸ್ ಕಮಿಶನರ್ ರವಿಂದರ್ ವರದಿಗಾರರಿಗೆ ತಿಳಿಸಿದ್ದಾರೆ.

ಮಕ್ಸೂದ್, ಆತನ ಪತ್ನಿ,ಇಬ್ಬರು ಪುತ್ರರು,ಪುತ್ರಿ ಹಾಗೂ ಮೊಮ್ಮಗಳು ಸಹಿತ ಒಂದೇ ಕುಟುಂಬದ ಆರು ಜನ ಹಾಗೂ ಇತರ ಮೂವರು ಕಳೆದ ವಾರ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತಪಟ್ಟ ಏಳು ಜನ ಗೋಣಿಚೀಲ ಹೊಲಿಗೆ ಘಟಕದಲ್ಲಿ ಕೆಲಸ ಮಾಡುತ್ತಿದ್ದರು. 20 ವರ್ಷಗಳ ಹಿಂದೆ ಪಶ್ಚಿಮಬಂಗಾಳದಿಂದ ವಲಸೆ ಬಂದಿದ್ದ ಮಕ್ಸೂದ್ ವಾರಂಗಲ್‌ನಲ್ಲಿ ನೆಲೆ ನಿಂತಿದ್ದರು. ಘಟಕದ ಆವರಣದ ಕೊಠಡಿಯಲ್ಲಿ ವಾಸವಾಗಿದ್ದರು.

ಬಿಹಾರದ ಯಾದವ್‌ಗೆ ಮಕ್ಸೂದ್ ಪತ್ನಿಯು ಮಹಿಳೆ ನಾಪತ್ತೆಯಾಗಿರುವ ವಿಚಾರವನ್ನು ಪೊಲೀಸರಿಗೆ ತಿಳಿಸುವುದಾಗಿ ಬೆದರಿಕೆ ಹಾಕುತ್ತಿದ್ದರು. ಹೀಗಾಗಿ ಯಾದವ್ ಕೊಲೆಯ ಪಿತೂರಿ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

 ಬಾವಿಯಲ್ಲಿ 9 ಜನರ ಶವ ಕಂಡುಬಂದಾಗ ಆರಂಭದಲ್ಲಿ ಅದನ್ನು ಸಾಮೂಹಿಕ ಆತ್ಮಹತ್ಯೆ ಎಂದು ಭಾವಿಸಲಾಗಿತ್ತು. ಮೃತದೇಹದಲ್ಲಿ ಯಾವುದೇ ಗಾಯದ ಗುರುತು ಇರಲಿಲ್ಲ. ಆದರೆ, ಶವದ ಮೇಲೆ ಗೀಚಿದ ಗುರುತು ಪತ್ತೆಯಾದ ಕಾರಣ ಪೊಲೀಸರ ಆರು ವಿಶೇಷ ತಂಡ ಕೊಲೆಯ ರಹಸ್ಯ ಬೇಧಿಸಿದೆ. ಆರೋಪಿ ಯಾದವ್ ಹತ್ಯೆಯ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X