Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನ ವೈರಸ್ ಒಂದೇ ಅಲ್ಲ, ಹಲವು...

ಕೊರೋನ ವೈರಸ್ ಒಂದೇ ಅಲ್ಲ, ಹಲವು ಸಾಂಕ್ರಾಮಿಕಗಳು ಬರಲಿವೆ: ಚೀನಾದ ವೈರಾಣು ಪರಿಣತೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ26 May 2020 8:40 PM IST
share
ಕೊರೋನ ವೈರಸ್ ಒಂದೇ ಅಲ್ಲ, ಹಲವು ಸಾಂಕ್ರಾಮಿಕಗಳು ಬರಲಿವೆ: ಚೀನಾದ ವೈರಾಣು ಪರಿಣತೆ ಎಚ್ಚರಿಕೆ

ಬೀಜಿಂಗ್, ಮೇ 26: ಈಗ ಪತ್ತೆಯಾಗುತ್ತಿರುವ ವೈರಸ್‌ಗಳು ನೀರಿನಡಿಯ ಮಂಜುಗಡ್ಡೆಯ ಮೇಲ್ಭಾಗದಲ್ಲಿ ಕಾಣುವ ತುದಿ ಮಾತ್ರ ಎಂದು ಚೀನಾದ ಖ್ಯಾತ ವೈರಾಣು ತಜ್ಞೆ ಶಿ ಝೇಂಗ್ಲಿ ಎಚ್ಚರಿಸಿದ್ದಾರೆ ಹಾಗೂ ಸಾಂಕ್ರಾಮಿಕಗಳ ವಿರುದ್ಧದ ಹೋರಾಟದಲ್ಲಿ ಅಂತರ್‌ರಾಷ್ಟ್ರೀಯ ಭಾಗೀದಾರಿಕೆಯ ಅಗತ್ಯವನ್ನು ಪ್ರತಿಪಾದಿಸಿದ್ದಾರೆ.

ಬಾವಲಿಗಳಲ್ಲಿರುವ ಕೊರೋನ ವೈರಸ್ ಬಗ್ಗೆ ಮಾಡಿರುವ ಸಂಶೋಧನೆಗಳಿಗಾಗಿ ಪ್ರಸಿದ್ಧಿ ಪಡೆದಿರುವ ಅವರು, ಚೀನಾದ ಸರಕಾರಿ ಟೆಲಿವಿಶನ್‌ಗೆ ನೀಡಿರುವ ಸಂದರ್ಶನವೊಂದರಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಾವಲಿಗಳ ವಿಷಯದಲ್ಲಿ ಅವರು ಮಾಡಿರುವ ಸಂಶೋಧನೆಗಳಿಗಾಗಿ ಅವರನ್ನು ‘ಬ್ಯಾಟ್‌ವುಮನ್’ ಎಂಬುದಾಗಿ ಅಡ್ಡ ಹೆಸರಿನಿಂದ ಕರೆಯಲಾಗುತ್ತಿದೆ.

ವೈರಸ್‌ಗಳ ಬಗ್ಗೆ ಮಾಡುವ ಸಂಶೋಧನೆಗಳಲ್ಲಿ ವಿಜ್ಞಾನಿಗಳು ಮತ್ತು ಸರಕಾರಗಳು ಪಾರದರ್ಶಕ ಹಾಗೂ ಸಹಕಾರ ಮನೋಭಾವ ಹೊಂದಿರುವ ಅಗತ್ಯವಿದೆ ಹಾಗೂ ವಿಜ್ಞಾನವನ್ನು ರಾಜಕೀಯಗೊಳಿಸುವುದು ತುಂಬಾ ವಿಷಾದನೀಯ ಎಂದು ವುಹಾನ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯ ಉಪ ನಿರ್ದೇಶಕರೂ ಆಗಿರುವ ಶಿ ಝೇಂಗ್ಲಿ ಹೇಳಿದರು.

ಚೀನಾದ ವುಹಾನ್ ನಗರದಲ್ಲಿ ಕಳೆದ ವರ್ಷದ ಕೊನೆಯಲ್ಲಿ ಕೊರೋನ ವೈರಸ್ ಸಾಂಕ್ರಾಮಿಕ ಸ್ಫೋಟಗೊಂಡಂದಿನಿಂದ ಅದೇ ನಗರದಲ್ಲಿರುವ ಈ ವೈರಸ್ ಸಂಶೋಧನಾ ಸಂಸ್ಥೆಯು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಭಾರೀ ವಿವಾದಕ್ಕೆ ಸಿಲುಕಿಕೊಂಡಿದೆ. ನೋವೆಲ್-ಕೊರೋನ ವೈರಸನ್ನು ಅದೇ ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಇತರ ದೇಶಗಳ ನಾಯಕರು ಆರೋಪಿಸಿದ್ದಾರೆ.

ಮುಂದಿನ ಸಂಭಾವ್ಯ ಸಾಂಕ್ರಾಮಿಕ ರೋಗ ಸ್ಫೋಟದಿಂದ ಮಾನವರು ನರಳುವುದನ್ನು ತಪ್ಪಿಸಲು ನಾವು ಬಯಸಿದರೆ, ಪ್ರಕೃತಿಯಲ್ಲಿರುವ ಕಾಡು ಪ್ರಾಣಿಗಳು ಹೊತ್ತಿರುವ ಈ ಅಜ್ಞಾತ ವೈರಸ್‌ಗಳ ಬಗ್ಗೆ ತಿಳಿಯಲು ಹಾಗೂ ಆರಂಭದಲ್ಲೇ ಮುನ್ನೆಚ್ಚರಿಕೆ ಕೊಡಲು ನಾವು ಈಗಲೇ ಸಂಶೋಧನೆಗೆ ಇಳಿಯಬೇಕಾಗುತ್ತದೆ ಎಂದು ಸಿಜಿಟಿಎನ್‌ಗೆ ನೀಡಿದ ಸಂದರ್ಶನದಲ್ಲಿ ಶಿ ನುಡಿದರು.

ಈಗಲೇ ನಾವು ಅಧ್ಯಯನಕ್ಕೆ ಮುಂದಾಗದಿದ್ದರೆ ಮುಂದೊಂದು ದಿನ ಇನ್ನೊಂದು ಸಾಂಕ್ರಾಮಿಕ ಕಾಯಿಲೆಯು ಸ್ಫೋಟಗೊಳ್ಳುತ್ತದೆ ಎಂದು ಅವರು ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X