Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಇಂದು 9 ಮಂದಿಯಲ್ಲಿ ಕೊರೋನ ಸೋಂಕು...

ಉಡುಪಿ: ಇಂದು 9 ಮಂದಿಯಲ್ಲಿ ಕೊರೋನ ಸೋಂಕು ಪತ್ತೆ

ವಾರ್ತಾಭಾರತಿವಾರ್ತಾಭಾರತಿ27 May 2020 8:29 PM IST
share
ಉಡುಪಿ: ಇಂದು 9 ಮಂದಿಯಲ್ಲಿ ಕೊರೋನ ಸೋಂಕು ಪತ್ತೆ

ಉಡುಪಿ, ಮೇ 27: ಜಿಲ್ಲೆಯಲ್ಲಿ ಬುಧವಾರ ಇನ್ನೂ 9 ಮಂದಿಯಲ್ಲಿ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಉಡುಪಿಯಲ್ಲಿ ಇಂದು ಪಾಸಿಟಿವ್ ಬಂದವರೆಲ್ಲರೂ ಮಹಾರಾಷ್ಟ್ರ ರಾಜ್ಯದಿಂದ ಬಂದವರಾಗಿದ್ದಾರೆ. ಇವರಲ್ಲಿ 6 ಮಂದಿ ಪುರುಷರು, ಇಬ್ಬರು ಯುವತಿಯರು ಹಾಗೂ ಓರ್ವ ಬಾಲಕ ಸೇರಿದ್ದಾರೆ ಎಂದು ವಿವರಗಳನ್ನು ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ.

ಕುಂದಾಪುರದಲ್ಲಿ ಕ್ವಾರಂಟೈನ್‌ನಲ್ಲಿರುವ ಐವರು, ಕಾರ್ಕಳ ಹಾಗೂ ಉಡುಪಿ ಯಲ್ಲಿ ಕ್ವಾರಂಟೈನ್‌ನಲ್ಲಿರುವ ತಲಾ ಇಬ್ಬರಲ್ಲಿ ಇಂದು ಕೊರೋನ ಪಾಸಿಟಿವ ಕಂಡುಬಂದಿದೆ. 41ರ ಹರೆಯದ ಪುರುಷ (ಪಿ.2389), 31ರ ಹರೆಯದ ಯುವತಿ (2890), 27ರ ಯುವಕ (2891), 30ರ ಯುವಕ (2892), 32ರ ಯುವಕ (2893), 17ರ ಯುವತಿ (2894), 34ರ ಯುವಕ (2895), 25ರ ಯುವಕ (2896) ಹಾಗೂ 9 ವರ್ಷದ ಬಾಲಕ (2401) ಇಂದು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

ಈ ಮೂಲಕ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಕಂಡುಬಂದವರ ಸಂಖ್ಯೆ 120ಕ್ಕೇರಿದೆ. ಇವರಲ್ಲಿ 114 ಮಂದಿ ಈಗಲೂ ಸೋಂಕಿಗೆ ಸಕ್ರೀಯ ರಾಗಿದ್ದು, ನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಒಬ್ಬರು ಮೃತ ಪಟ್ಟಿದ್ದು, ಮೊದಲ ಮೂರು ಸೋಂಕು ಪತ್ತೆಯಾದವರು ಚಿಕಿತ್ಸೆಯಿಂದ ಚೇತರಿಸಿ ಕೊಂಡಿದ್ದಾರೆ.

ಗರ್ಭಿಣಿಯ ಮರು ಪರೀಕ್ಷೆ ನೆಗಟಿವ್

ಈಗಾಗಲೇ ಪಾಸಿಟಿವ್ ಪಟ್ಟಿಯಲ್ಲಿ ಕಾಣಿಸಿಕೊಂಡ ಕಾರ್ಕಳದ 22ರ ಹರೆಯದ ತುಂಬು ಗರ್ಭಿಣಿಯ ಮರು ಪರೀಕ್ಷಾ ವರದಿ ನೆಗಟಿವ್ ಆಗಿ ಬಂದಿದೆ ಎಂದು  ಡಾ. ಸೂಡ ವಿವರಿಸಿದರು.

ಗರ್ಭಿಣಿ ಮಹಿಳೆಯ ಸ್ಯಾಂಪಲ್ ಮೇ 24ರಂದು ಪಾಸಿಟಿವ್ ಆಗಿ ಬಂದಿತ್ತು. ತುಂಬು ಗರ್ಭಿಣಿಯಾದ ಕಾರಣ ಮರು ಪರೀಕ್ಷೆ ನಡೆಸಿದಾಗ ಅದು ನೆಗೆಟಿವ್ ಆಗಿತ್ತು. ಮತ್ತೊಂದು ಪರೀಕ್ಷೆಯನ್ನು ಬೆಂಗಳೂರಿನಲ್ಲಿ ನಡೆಸಿದಾಗ ಅದು ಇಂದು ನೆಗೆಟಿವ್ ಆಗಿ ಬಂದಿದೆ. ಹೀಗಾಗಿ ಅವರನ್ನು ಸೋಂಕಿಗೆ ನೆಗೆಟಿವ್ ಎಂದೇ ಪರಿಗಣಿಸಲಾಗುವುದು. ಆಕೆ ತುಂಬು ಗರ್ಭಿಣಿಯಾಗಿ ರುವುದರಿಂದ ಕಾರ್ಕಳದ ಮನೆಯಲ್ಲಿ ತಾಯಿಯೊಂದಿಗೆ ವೈದ್ಯರ ನಿಗಾದಲ್ಲಿ ಇರುತ್ತಾರೆ ಎಂದು ಡಾ.ಸೂಡ ತಿಳಿಸಿದರು.

ಇನ್ನು 30ರ ಹರೆಯದ ಜಿಪಂ ಸಿಬ್ಬಂದಿಯ ಸ್ಯಾಂಪಲ್ ಸಹ ಮೇ 25ರಂದು ಪಾಸಿಟಿವ್ ಆಗಿ ಬಂದಿತ್ತು. ಆದರೆ ಅದರಲ್ಲಿ ತಾಂತ್ರಿಕ ಗೊಂದಲ ಕಾಣಿಸಿಕೊಂಡಿ ದ್ದರಿಂದ ಇಂದು ಮಾದರಿಯನ್ನು ಮರುಪರೀಕ್ಷೆಗೆ ಮಣಿಪಾಲಕ್ಕೆ ಕಳುಹಿಸಲಾಗಿದೆ. ಈ ನಡುವೆ ಈವರೆಗೆ ಮನೆಯಲ್ಲೇ ಕ್ವಾರಂಟೈನ್‌ನಲ್ಲಿದ್ದ ಕಟಪಾಡಿ ಕುರ್ಕಾಲಿನ 30ರ ಹರೆಯದ ಈ ಯುವಕನನ್ನು ಇಂದು ಉದ್ಯಾವರದ ಎಸ್‌ಡಿಎಂ ಕಾಲೇಜಿನಲ್ಲಿ ಐಸೋಲೇಶನ್ ವಾರ್ಡಿಗೆ ಸೇರಿಸಲಾಗಿದೆ. ಅವರಿಂದ ಪುನಹ ಪಡೆದ ಗಂಟಲುದ್ರವ ಮಾದರಿಯ ಮರುಪರೀಕ್ಷೆ ಫಲಿತಾಂಶ ನೆಗೆಟಿವ್ ಬಂದರೆ ಮನೆಗೂ, ಪಾಸಿಟಿವ್ ಬಂದರೆ ಉಡುಪಿಯ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುವುದು ಎಂದು ಡಾ.ಸೂಡ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X