Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸ ಭೂಪಟ ತಡೆಹಿಡಿದ ನೇಪಾಳ: ಭಾರತದ...

ಹೊಸ ಭೂಪಟ ತಡೆಹಿಡಿದ ನೇಪಾಳ: ಭಾರತದ ವಿರೋಧಕ್ಕೆ ಮಣಿದ ನೆರೆರಾಷ್ಟ್ರ

ವಾರ್ತಾಭಾರತಿವಾರ್ತಾಭಾರತಿ27 May 2020 8:41 PM IST
share
ಹೊಸ ಭೂಪಟ ತಡೆಹಿಡಿದ ನೇಪಾಳ: ಭಾರತದ ವಿರೋಧಕ್ಕೆ ಮಣಿದ ನೆರೆರಾಷ್ಟ್ರ

ಹೊಸದಿಲ್ಲಿ, ಮೇ 28: ಗಡಿಪ್ರದೇಶದಲ್ಲಿರುವ ಭಾರತಕ್ಕೆ ಸೇರಿದ ಕೆಲವು ಸ್ಥಳಗಳನ್ನು ತನ್ನದೆಂದು ತೋರಿಸುವ ನೂತನ ಭೂಪಟಕ್ಕೆ ಸಂಸತ್‌ನ ಅಂಗೀಕಾರ ಪಡೆಯುವ ಪ್ರಕ್ರಿಯೆಯನ್ನು ನೇಪಾಳ ಬುಧವಾರ ಮುಂದೂಡಿದೆ. ನೂತನ ಭೂಪಟವನ್ನು ಅಧಿಕೃತಗೊಳಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವ ನಿಟ್ಟಿನಲ್ಲಿ ನೇಪಾಳದ ಸಂಸತ್‌ನಲ್ಲಿ ಇಂದು ನಡೆಯಬೇಕಿದ್ದ ಚರ್ಚೆಯನ್ನು ಕೂಡಾ ಮುಂದೂಡಲಾಗಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಕಳೆದ ವಾರ ನೇಪಾಳ ಸರಕಾರವು ಅಂಗೀಕರಿಸಿದ ಈ ನೂತನ ಭೂಪಟವನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ನೇಪಾಳದ ನೂತನ ನಕಾಶೆಯು ಏಕಪಕ್ಷೀಯವಾದುದಾಗಿದೆ ಹಾಗೂ ಅದು ಐತಿಹಾಸಿಕ ವಾಸ್ತವಿಕ ಅಂಶಗಳ್ನು ಆಧರಿಸಿಲ್ಲವೆಂದು ಭಾರತ ಆಕ್ರೋಶ ವ್ಯಕ್ತಪಡಿಸಿತ್ತು. ಪ್ರಾಂತಗಳ ಮೇಲೆ ಹಕ್ಕು ಸ್ಥಾಪನೆಗಾಗಿ ಈ ರೀತಿ ಕೃತಕ ವಿಸ್ತರಣೆಯನ್ನು ಮಾಡುವುದನ್ನು ಭಾರತ ಒಪ್ಪಲಾರದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದರು.   ನೇಪಾಳ ಸರಕಾರ ಕೂಡಲೇ ಭೂಪಟವನ್ನು ಹಿಂತೆಗೆದುಕೊಳ್ಳಬೇಕೆಂದು ಎಂದು ಅವರು ಆಗ್ರಹಿಸಿದ್ದರು.

ಲಿಪಿಯಾಧುರಾ, ಲಿಪುಲೇಖ್ ಹಾಗೂ ಕಾಲಾಪಾನಿ ಸೇರಿದಂತೆ ನೇಪಾಳದ ವಾಯುವ್ಯದ ಗಡಿಯ ತುದಿಯಲ್ಲಿರುವ ಭಾರತದ ಕೆಲವು ಭೂಪ್ರದೇಶಗಳನ್ನು ತನಗೆ ಸೇರಿದ್ದೆಂಬುದನ್ನು ತೋರಿಸುವ ಭೂಪಟವನ್ನು ನೇಪಾಳ ಕಳೆದ ವಾರ ಪ್ರಕಟಿಸಿತ್ತು.

ತನ್ನ ದೇಶದಲ್ಲಿ ಭಾರತವು ಕೊರೋನ ವೈರಸ್ ಸೋಂಕು ಹಡುತ್ತಿದೆಯೆಂದು ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಆಪಾದಿಸಿದ ಬೆನ್ನಲ್ಲೇ ನೇಪಾಳಕಾರಿ ಈ ಭೂಪಟವನ್ನು ಬಹಿರಂಗಪಡಿಸಿತ್ತು.

ಟಿಬೆಟ್ ಜೊತೆಗಿನ ಗಡಿಯಲ್ಲಿರುವ ಲಿಪುಲೇಖ್ ಅನ್ನು ಉತ್ತರಾಖಂಡದ ಜೊತೆ ಜೋಡಿಸುವ 80 ಕಿ.ಮೀ. ವಿಸ್ತೀರ್ಣದ ರಸ್ತೆಯನ್ನು ಭಾರತವು ತೆರೆದ ಬಳಿಕ ನೇಪಾಳ ಸರಕಾರವು ಈ ನಕ್ಷೆಯನ್ನು ಪ್ರಕಟಿಸಿದೆ. ಈ ರಸ್ತೆಯ ನಿರ್ಮಾಣದಿಂದಾಗಿ ಟಿಬೆಟ್‌ನಲ್ಲಿರುವ ಮಾನಸಸರೋವರಕ್ಕೆ ಪ್ರಯಾಣಿಸುವ ಯಾತ್ರಿಕರಿಗೆ ಪ್ರಯಾಣದ ದೂರ ಗಣನೀಯವಾಗಿ ಕಡಿಮೆಯಾಗಲಿದೆ.

ನೂತನ ನಕ್ಷೆಯನ್ನು ಶಾಲಾ ಹಾಗೂ ಕಾಲೇಜುಗಳ ಪಠ್ಯಗಳಲ್ಲಿ ಹಾಗೂ ಅಧಿಕೃತ ದಾಖಲೆಗಳಲ್ಲಿ ಮುದ್ರಿಸಲಾಗುವುದು ಹಾಗೂ ಎಲ್ಲಾ ಆಡಳಿತಾತ್ಮಕ ಉದ್ದೇಶಗಳಿಗೆ ಬಳಸಲಾಗುವುದು ಎಂದು ನೇಪಾಳಿ ಅಧಿಕಾರಿಗಳು ತಿಳಿಸಿದ್ದರು.

ಭಾರತವು ಲಿಪುಲೇಖ್‌ನಲ್ಲಿ ನಿರ್ಮಿಸಿರುವ ನೂತನ ರಸ್ತೆಯ ಬಗ್ಗೆ ನೇಪಾಳವು ಬೇರೆಯವರ ಒತ್ತಾಸೆಯಿಂದಾಗಿ ಪ್ರತಿಕ್ರಿಯಿಸುತ್ತಿದೆ ಎಂದು ಭಾರತದ ಸೇನಾ ವರಿಷ್ಠ ಜನರಲ್ ಮನೋಜ್ ಮುಕುಂದ್ ನರವಾನೆ, ಚೀನಾದ ಹೆಸರನ್ನು ಉಲ್ಲೇಖಿಸದೆ ಹೇಳಿದ್ದರು. ಈ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ್ದ ನೇಪಾಳದ ರಕ್ಷಣಾ ಸಚಿವ ಈಶ್ವರ್ ಪೋಖ್ರಾಲ್. ‘‘ಸೇನಾ ಮುಖ್ಯಸ್ಥರು ಇಂತಹ ರಾಜಕೀಯ ಹೇಳಿಕೆಯನ್ನು ನೀಡುವುದು ಹೇಗೆ ವೃತ್ತಿಪರತೆಯಾಗುತ್ತದೆ’’ ಎಂದವರು ಕಿಡಿಕಾರಿದ್ದರು.

ಹೊಸ ಭೂಪಟಕ್ಕೆ ಈಸ್ಟ್ ಇಂಡಿಯಾ ಕಂಪೆನಿ ಒಪ್ಪಂದದ ನೆಪ ಹೇಳಿದ ನೇಪಾಳ

ಭಾರತದ ಗಡಿಗೆ ತಾಗಿಕೊಂಡಿರುವ ಲಿಪಿಯಾಧುರಾ, ಲಿಪುಲೇಖ್ ಹಾಗೂ ಕಾಲಾಪಾನಿ ಮತ್ತಿತರ ಸ್ಥಳಗಳು 1816ರಲ್ಲಿ ಈಸ್ಟ್ ಇಂಡಿಯಾ ಕಂಪೆನಿ ಜೊತೆ ಮಾಡಿಕೊಳ್ಳಲಾದ ಒಪ್ಪಂದದ ಪ್ರಕಾರ ತನಗೆ ಸೇರಿದ್ದೆಂದು ನೇಪಾಳ ಸರಕಾರ ಇತ್ತೀಚೆಗೆ ಹೇಳಿಕೆ ನೀಡಿತ್ತು. ಅದರಂತೆ ಕಾಳಿ ನದಿಯು ಭಾರತದೊಂದಿಗಿನ ತನ್ನ ಪಶ್ಚಿಮದ ಗಡಿಯಾಗಿದೆ ಹಾಗೂ ನದಿಯ ಪೂರ್ವ ಭಾಗದಲ್ಲಿರುವ ಭೂಪ್ರದೇಶವು ತನ್ನ ಪ್ರಾಂತವೆಂದು ನೇಪಾಳ ಹೇಳಿಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X